Advertisement
MIRROR FOCUS

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

Share

ದೇಶದ ಕೃಷಿ ಕ್ಷೇತ್ರದಲ್ಲಿ ವಿಜ್ಞಾನ ಮತ್ತು ರೈತರ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಹಮ್ಮಿಕೊಂಡಿದ್ದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’ (VKSA) ದೇಶದಾದ್ಯಂತ 13.4 ಕೋಟಿ ರೈತರನ್ನು ತಲುಪುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ ಎಂದು ಕೇಂದ್ರ ಕೃಷಿ ಸಚಿವ‌ ಶಿವರಾಜ್‌ ಸಿಂಗ್‌ ಚೌಹಾಣ್‌ ತಿಳಿಸಿದ್ದಾರೆ.

ನವದೆಹಲಿದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಅಭಿಯಾನವು ಕೃಷಿ ಸಂಶೋಧನೆ, ವಿಸ್ತರಣಾ ಸೇವೆಗಳು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳನ್ನು ಒಂದೇ ವೇದಿಕೆಗೆ ತಂದು ರೈತರೊಂದಿಗೆ ನೇರ ಸಂಪರ್ಕ ಸಾಧಿಸಿದೆ ಎಂದು ಹೇಳಿದರು. ದೇಶದ 1.43 ಲಕ್ಷಕ್ಕೂ ಹೆಚ್ಚು ಗ್ರಾಮಗಳಲ್ಲಿ 60 ಸಾವಿರಕ್ಕೂ ಅಧಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಬುಡಕಟ್ಟು ಜಿಲ್ಲೆಗಳಿಗೂ ವಿಶೇಷ ಆದ್ಯತೆ ನೀಡಲಾಗಿದೆ.

ಕೃಷಿ ವಿಜ್ಞಾನಿಗಳಿಂದ ಅಭಿವೃದ್ಧಿಪಡಿಸಲಾದ ಹೊಸ ತಂತ್ರಜ್ಞಾನ, ಉತ್ತಮ ಬೀಜಗಳು, ಮಣ್ಣಿನ ಆರೋಗ್ಯ ನಿರ್ವಹಣೆ, ನೈಸರ್ಗಿಕ ಕೃಷಿ ಹಾಗೂ ಉತ್ಪಾದನೆ ಹೆಚ್ಚಿಸುವ ವಿಧಾನಗಳನ್ನು ರೈತರಿಗೆ ನೇರವಾಗಿ ತಲುಪಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿತ್ತು. “ಲ್ಯಾಬ್ ಟು ಲ್ಯಾಂಡ್” (ಪ್ರಯೋಗಾಲಯದಿಂದ ಕೃಷಿಭೂಮಿವರೆಗೆ) ಎಂಬ ಪರಿಕಲ್ಪನೆಯಡಿ ರೈತರ ಸಮಸ್ಯೆಗಳನ್ನು ಆಲಿಸಿ, ಸ್ಥಳೀಯ ಪರಿಹಾರಗಳನ್ನು ಒದಗಿಸುವ ಕಾರ್ಯ ನಡೆಯಿತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಈ ಅಭಿಯಾನಕ್ಕಾಗಿ ದೇಶದಾದ್ಯಂತ ಸಾವಿರಾರು ಕೃಷಿ ವಿಜ್ಞಾನಿಗಳು ಹಾಗೂ ತಜ್ಞರ ತಂಡಗಳನ್ನು ಗ್ರಾಮಗಳಿಗೆ ಕಳುಹಿಸಲಾಗಿತ್ತು. ರೈತರು ತಮ್ಮ ಅನುಭವಗಳು, ಸಮಸ್ಯೆಗಳು ಮತ್ತು ಹೊಸ ಆವಿಷ್ಕಾರಗಳನ್ನು ವಿಜ್ಞಾನಿಗಳೊಂದಿಗೆ ಹಂಚಿಕೊಂಡಿದ್ದು, ಭವಿಷ್ಯದ ಕೃಷಿ ನೀತಿಗಳ ರೂಪಿಕರಣಕ್ಕೂ ಇದು ನೆರವಾಗಲಿದೆ ಎಂದು ಸಚಿವರು ಹೇಳಿದರು.

ಅಭಿಯಾನ ಮುಕ್ತಾಯಗೊಂಡರೂ ರೈತರೊಂದಿಗೆ ನೇರ ಸಂಪರ್ಕ ಕಾರ್ಯಕ್ರಮ ಮುಂದುವರಿಯಲಿದೆ. ಸರ್ಕಾರದ ಅಧಿಕಾರಿಗಳು ಮತ್ತು ಕೃಷಿ ವಿಜ್ಞಾನಿಗಳು ಮುಂದೆಯೂ ಗ್ರಾಮಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಿದ್ದಾರೆ ಎಂದು ಶಿವರಾಜ್ ಸಿಂಗ್ ಚೌಹಾಣ್ ಭರವಸೆ ನೀಡಿದರು.

Union Agriculture Minister Shivraj Singh Chouhan said that the Viksit Krishi Sankalp Abhiyan has directly engaged 13.4 crore farmers across 1.43 lakh villages in India. The campaign aimed to bridge the gap between agricultural research and field-level farming by taking scientific knowledge, modern technologies and practical solutions directly to farmers.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

31 seconds ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

12 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

22 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

1 day ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

2 days ago