Advertisement
MIRROR FOCUS

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

Share

ದೇಶದ ಕೃಷಿ ಕ್ಷೇತ್ರದಲ್ಲಿ ವಿಜ್ಞಾನ ಮತ್ತು ರೈತರ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಹಮ್ಮಿಕೊಂಡಿದ್ದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’ (VKSA) ದೇಶದಾದ್ಯಂತ 13.4 ಕೋಟಿ ರೈತರನ್ನು ತಲುಪುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ ಎಂದು ಕೇಂದ್ರ ಕೃಷಿ ಸಚಿವ‌ ಶಿವರಾಜ್‌ ಸಿಂಗ್‌ ಚೌಹಾಣ್‌ ತಿಳಿಸಿದ್ದಾರೆ.

ನವದೆಹಲಿದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಅಭಿಯಾನವು ಕೃಷಿ ಸಂಶೋಧನೆ, ವಿಸ್ತರಣಾ ಸೇವೆಗಳು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳನ್ನು ಒಂದೇ ವೇದಿಕೆಗೆ ತಂದು ರೈತರೊಂದಿಗೆ ನೇರ ಸಂಪರ್ಕ ಸಾಧಿಸಿದೆ ಎಂದು ಹೇಳಿದರು. ದೇಶದ 1.43 ಲಕ್ಷಕ್ಕೂ ಹೆಚ್ಚು ಗ್ರಾಮಗಳಲ್ಲಿ 60 ಸಾವಿರಕ್ಕೂ ಅಧಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಬುಡಕಟ್ಟು ಜಿಲ್ಲೆಗಳಿಗೂ ವಿಶೇಷ ಆದ್ಯತೆ ನೀಡಲಾಗಿದೆ.

ಕೃಷಿ ವಿಜ್ಞಾನಿಗಳಿಂದ ಅಭಿವೃದ್ಧಿಪಡಿಸಲಾದ ಹೊಸ ತಂತ್ರಜ್ಞಾನ, ಉತ್ತಮ ಬೀಜಗಳು, ಮಣ್ಣಿನ ಆರೋಗ್ಯ ನಿರ್ವಹಣೆ, ನೈಸರ್ಗಿಕ ಕೃಷಿ ಹಾಗೂ ಉತ್ಪಾದನೆ ಹೆಚ್ಚಿಸುವ ವಿಧಾನಗಳನ್ನು ರೈತರಿಗೆ ನೇರವಾಗಿ ತಲುಪಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿತ್ತು. “ಲ್ಯಾಬ್ ಟು ಲ್ಯಾಂಡ್” (ಪ್ರಯೋಗಾಲಯದಿಂದ ಕೃಷಿಭೂಮಿವರೆಗೆ) ಎಂಬ ಪರಿಕಲ್ಪನೆಯಡಿ ರೈತರ ಸಮಸ್ಯೆಗಳನ್ನು ಆಲಿಸಿ, ಸ್ಥಳೀಯ ಪರಿಹಾರಗಳನ್ನು ಒದಗಿಸುವ ಕಾರ್ಯ ನಡೆಯಿತು.

ಈ ಅಭಿಯಾನಕ್ಕಾಗಿ ದೇಶದಾದ್ಯಂತ ಸಾವಿರಾರು ಕೃಷಿ ವಿಜ್ಞಾನಿಗಳು ಹಾಗೂ ತಜ್ಞರ ತಂಡಗಳನ್ನು ಗ್ರಾಮಗಳಿಗೆ ಕಳುಹಿಸಲಾಗಿತ್ತು. ರೈತರು ತಮ್ಮ ಅನುಭವಗಳು, ಸಮಸ್ಯೆಗಳು ಮತ್ತು ಹೊಸ ಆವಿಷ್ಕಾರಗಳನ್ನು ವಿಜ್ಞಾನಿಗಳೊಂದಿಗೆ ಹಂಚಿಕೊಂಡಿದ್ದು, ಭವಿಷ್ಯದ ಕೃಷಿ ನೀತಿಗಳ ರೂಪಿಕರಣಕ್ಕೂ ಇದು ನೆರವಾಗಲಿದೆ ಎಂದು ಸಚಿವರು ಹೇಳಿದರು.

ಅಭಿಯಾನ ಮುಕ್ತಾಯಗೊಂಡರೂ ರೈತರೊಂದಿಗೆ ನೇರ ಸಂಪರ್ಕ ಕಾರ್ಯಕ್ರಮ ಮುಂದುವರಿಯಲಿದೆ. ಸರ್ಕಾರದ ಅಧಿಕಾರಿಗಳು ಮತ್ತು ಕೃಷಿ ವಿಜ್ಞಾನಿಗಳು ಮುಂದೆಯೂ ಗ್ರಾಮಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಿದ್ದಾರೆ ಎಂದು ಶಿವರಾಜ್ ಸಿಂಗ್ ಚೌಹಾಣ್ ಭರವಸೆ ನೀಡಿದರು.

Union Agriculture Minister Shivraj Singh Chouhan said that the Viksit Krishi Sankalp Abhiyan has directly engaged 13.4 crore farmers across 1.43 lakh villages in India. The campaign aimed to bridge the gap between agricultural research and field-level farming by taking scientific knowledge, modern technologies and practical solutions directly to farmers.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ

ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…

2 hours ago

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

6 hours ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

11 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

11 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

19 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

20 hours ago