ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ ಮೂಲ ಸೇತುವೆ ಮುರಿದುಹೋಗಿದ್ದ ಕಾರಣ ಗ್ರಾಮಸ್ಥರಿಗೆ ಸಂಚಾರದಲ್ಲಿ ತೀವ್ರ ಅಡಚಣೆ ಉಂಟಾಗಿತ್ತು. ಈ ಬಗ್ಗೆ ಸುದ್ದಿಗಳು ಪತ್ರಿಕೆಗಳಲ್ಲಿ ಪ್ರಕಟವಾಗಿತ್ತು.
ಸೇತುವೆ ಕುಸಿತವಾದ ಕಾರಣದಿಂದ ಸ್ಥಳೀಯ ಯುವಕರು ಜೀವದ ಹಂಗುತೊರೆದು ನೀರಿನಲ್ಲಿ ಬೈಕ್ ಮೂಲಕ ಸಂಚರಿಸುತ್ತಿದ್ದ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ ಹಿರಿಯ ಅಧಿಕಾರಿಗಳು , ಸ್ಥಳೀಯರ ಸಹಕಾರದಿಂದ ತಾತ್ಕಾಲಿಕ ಕಾಲು ಸಂಕವನ್ನು ನಿರ್ಮಿಸಲು ಕ್ರಮ ಕೈಗೊಂಡರು. ಈ ಕಾರ್ಯಕ್ಕೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಶಾಸಕ ಆರ್.ವಿ. ದೇಶಪಾಂಡೆ ಅವರು ಕೂಡಾ ಈ ವಿಷಯದಲ್ಲಿ ಚುರುಕಾಗಿ ಸ್ಪಂದನೆ ನೀಡಿದ್ದು, ತಾತ್ಕಾಲಿಕ ಕಾಲು ಸಂಕ ತಕ್ಷಣ ನಿರ್ಮಿಸಲು ಸೂಚನೆ ನೀಡಿದ್ದರು. ಜೊತೆಗೆ, ಮಳೆಗಾಲ ಮುಗಿಯುತ್ತಿದ್ದಂತೆ ಮೂಲ ಸೇತುವೆಯ ಪುನರ್ ನಿರ್ಮಾಣದ ಕೆಲಸ ಆರಂಭಿಸಲು ಜಿ.ಪಂ ಅಧಿಕಾರಿಗಳಿಗೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
(ಮೂಲ ಮಾಹಿತಿ : ದೀಪಕ್ ಜೋಯಿಡಾ)
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…