ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ ಮೂಲ ಸೇತುವೆ ಮುರಿದುಹೋಗಿದ್ದ ಕಾರಣ ಗ್ರಾಮಸ್ಥರಿಗೆ ಸಂಚಾರದಲ್ಲಿ ತೀವ್ರ ಅಡಚಣೆ ಉಂಟಾಗಿತ್ತು. ಈ ಬಗ್ಗೆ ಸುದ್ದಿಗಳು ಪತ್ರಿಕೆಗಳಲ್ಲಿ ಪ್ರಕಟವಾಗಿತ್ತು.
ಸೇತುವೆ ಕುಸಿತವಾದ ಕಾರಣದಿಂದ ಸ್ಥಳೀಯ ಯುವಕರು ಜೀವದ ಹಂಗುತೊರೆದು ನೀರಿನಲ್ಲಿ ಬೈಕ್ ಮೂಲಕ ಸಂಚರಿಸುತ್ತಿದ್ದ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ ಹಿರಿಯ ಅಧಿಕಾರಿಗಳು , ಸ್ಥಳೀಯರ ಸಹಕಾರದಿಂದ ತಾತ್ಕಾಲಿಕ ಕಾಲು ಸಂಕವನ್ನು ನಿರ್ಮಿಸಲು ಕ್ರಮ ಕೈಗೊಂಡರು. ಈ ಕಾರ್ಯಕ್ಕೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಶಾಸಕ ಆರ್.ವಿ. ದೇಶಪಾಂಡೆ ಅವರು ಕೂಡಾ ಈ ವಿಷಯದಲ್ಲಿ ಚುರುಕಾಗಿ ಸ್ಪಂದನೆ ನೀಡಿದ್ದು, ತಾತ್ಕಾಲಿಕ ಕಾಲು ಸಂಕ ತಕ್ಷಣ ನಿರ್ಮಿಸಲು ಸೂಚನೆ ನೀಡಿದ್ದರು. ಜೊತೆಗೆ, ಮಳೆಗಾಲ ಮುಗಿಯುತ್ತಿದ್ದಂತೆ ಮೂಲ ಸೇತುವೆಯ ಪುನರ್ ನಿರ್ಮಾಣದ ಕೆಲಸ ಆರಂಭಿಸಲು ಜಿ.ಪಂ ಅಧಿಕಾರಿಗಳಿಗೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
(ಮೂಲ ಮಾಹಿತಿ : ದೀಪಕ್ ಜೋಯಿಡಾ)
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…