ಚಿಕ್ಕಬಳ್ಳಾಪುರದ  ಗುಡಿಬಂಡೆಯಲ್ಲಿ ಚಿರತೆ ಸೆರೆ ಹಿಡಿದ ಗ್ರಾಮಸ್ಥರು

July 1, 2025
10:03 PM

ಚಿಕ್ಕಬಳ್ಳಾಪುರದ  ಗುಡಿಬಂಡೆ ತಾಲ್ಲೂಕಿನ ಕೆರೇನಹಳ್ಳಿ ಗ್ರಾಮದ ಕೃಷ್ಣಪ್ಪ ಎಂಬುವರ ಮೇಲೆ ದಾಳಿ ಮಾಡಿದ ಚಿರತೆಯನ್ನು ಕೆರೇನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರೇ ಸೆರೆ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿರುವ ಘಟನೆ ನಡೆದಿದೆ.   ಮಧ್ಯಾಹ್ನ ಕೆರೇನಹಳ್ಳಿ ಗ್ರಾಮದ ಕೃಷ್ಣಪ್ಪ ತಮ್ಮ   ಗ್ರಾಮದ ಸಮೀಪ ಕುರಿಗಳನ್ನು ಮೇಯಿಸುತ್ತಿದ್ದರು. ಈ ಸಂದರ್ಭದಲ್ಲಿ ಅವರ ಮೇಲೆ ಚಿರತೆ  ಏಕಾಏಕಿ ದಾಳಿ ಮಾಡಿದೆ. ಈ ವೇಳೆ ಅವರು  ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ. ವಿಷಯ ತಿಳಿದ ಕೆರೇನಹಳ್ಳಿ, ವರ್ಲಕೊಂಡ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಜನರು ದೊಣ್ಣೆ, ಬಲೆ ಹಿಡಿದು ಸ್ಥಳಕ್ಕೆ ಬಂದು. ಪೊದೆಗಳ ಮಧ್ಯೆ ಅಡಗಿ ಕುಳಿತಿದ್ದ ಚಿರತೆಯನ್ನು ಸೆರೆ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ
April 17, 2026
1:55 PM
by: ಸಾಯಿಶೇಖರ್ ಕರಿಕಳ
ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror