ಚಿಕ್ಕಬಳ್ಳಾಪುರದ ಗುಡಿಬಂಡೆ ತಾಲ್ಲೂಕಿನ ಕೆರೇನಹಳ್ಳಿ ಗ್ರಾಮದ ಕೃಷ್ಣಪ್ಪ ಎಂಬುವರ ಮೇಲೆ ದಾಳಿ ಮಾಡಿದ ಚಿರತೆಯನ್ನು ಕೆರೇನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರೇ ಸೆರೆ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿರುವ ಘಟನೆ ನಡೆದಿದೆ. ಮಧ್ಯಾಹ್ನ ಕೆರೇನಹಳ್ಳಿ ಗ್ರಾಮದ ಕೃಷ್ಣಪ್ಪ ತಮ್ಮ ಗ್ರಾಮದ ಸಮೀಪ ಕುರಿಗಳನ್ನು ಮೇಯಿಸುತ್ತಿದ್ದರು. ಈ ಸಂದರ್ಭದಲ್ಲಿ ಅವರ ಮೇಲೆ ಚಿರತೆ ಏಕಾಏಕಿ ದಾಳಿ ಮಾಡಿದೆ. ಈ ವೇಳೆ ಅವರು ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ. ವಿಷಯ ತಿಳಿದ ಕೆರೇನಹಳ್ಳಿ, ವರ್ಲಕೊಂಡ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಜನರು ದೊಣ್ಣೆ, ಬಲೆ ಹಿಡಿದು ಸ್ಥಳಕ್ಕೆ ಬಂದು. ಪೊದೆಗಳ ಮಧ್ಯೆ ಅಡಗಿ ಕುಳಿತಿದ್ದ ಚಿರತೆಯನ್ನು ಸೆರೆ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…