#NoRain | ರಾಜ್ಯಾದ್ಯಂತ ಬರದ ಛಾಯೆ | ವರುಣನಿಗಾಗಿ ಪರಿತಪಿಸುತ್ತಿರುವ ಜನ | ಮಳೆಗಾಗಿ ಮಕ್ಕಳ ಮದುವೆ ಮಾಡಿಸಿದ ಗ್ರಾಮಸ್ಥರು |

August 31, 2023
12:08 PM
ಮಳೆ ಬಾರದಂತಹ ಸಂದರ್ಭದಲ್ಲಿ ಮಕ್ಕಳಿಗೆ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥಿಸಿದರೆ ಮಳೆ ಬರುತ್ತದೆ ಎನ್ನುವ ನಂಬಿಕೆ ಜನರದ್ದು. ಹೀಗಾಗಿ ಮಳೆಗಾಗಿ ಚಿಕ್ಕಬಳ್ಳಾಪುರದಲ್ಲಿ ಮಕ್ಕಳ ಮದುವೆ ಮಾಡಿಸಲಾಗಿದೆ.

ಇದನ್ನು ಮೂಡನಂಬಿಕೆ ಅನ್ನಬೇಕೋ, ಹಿರಿಯರ ನಂಬಿಕೆ ಅನ್ನಬೇಕೋ….?. ಊರ ಜನಕ್ಕೆ ಮಳೆ ಬೇಕೇ ಬೇಕೂ. ಅದಕ್ಕಾಗಿ ಅವರು ಅದೇನೇನು ಸಾಧ್ಯವೋ ಅದನ್ನೆಲ್ಲಾ ಮಾಡ್ತಾರೆ. ಈಗ ಆಗಿರುವುದು ಅದೇ. ಮಳೆಗಾಗಿ ಮಕ್ಕಳ ಅಣಕು ಮದುವೆ ಮಾಡಿಸಿರೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಗಳಕೊಪ್ಪೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಗ್ರಾಮದ ಇಬ್ಬರು ಬಾಲಕರಲ್ಲಿ ಒಬ್ಬ ಹುಡುಗನಿಗೆ ವಧು ವೇಷ ಹಾಕಿ ಮತ್ತೋರ್ವ ಹುಡುಗನಿಗೆ ವರನ ಪೋಷಾಕು ಹಾಕಿ ಶಾಸ್ತ್ರೋಕ್ತವಾಗಿ ಅರ್ಚಕರ ನೇತೃತ್ವದಲ್ಲಿ ಅಣಕು ಮದುವೆ ಮಾಡುವ ಮೂಲಕ ಮಳೆಗಾಗಿ ಗ್ರಾಮಸ್ಥರು ಮೊರೆಯಿಟ್ಟಿದ್ದಾರೆ. ಗ್ರಾಮದ ಮಧ್ಯಭಾಗದ ಬೀದಿಯಲ್ಲಿ ಮಹಿಳೆಯರೆಲ್ಲ ಕೂತು ಸೋಬಾನೆ ಗೀತೆ ಹಾಡಿ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಚಿಕ್ಕ ಬಾಲಕರು ಥೇಟ್ ವರ-ವಧುವಿನಂತೆ ಕಂಗೊಳಿಸಿದ್ದಾರೆ. ವರನ ಪೋಷಾಕುನಲ್ಲಿದ್ದ ಬಾಲಕ ವಧು ವೇಷದಲ್ಲಿದ್ದ ಮತ್ತೋರ್ವ ಬಾಲಕನಿಗೆ ಅರಿಶಿನ ಕೊಂಬು (ತಾಳಿ) ಕಟ್ಟುವ ಮೂಲಕ ಮದುವೆ ಮಾಡಲಾಗಿದೆ. ಅಂದಹಾಗೆ ಮಳೆ ಬಾರದಂತಹ ಸಂದರ್ಭದಲ್ಲಿ ಈ ರೀತಿ ಮಕ್ಕಳಿಗೆ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥಿಸಿದರೆ ಮಳೆ ಬರುತ್ತದೆ ಎನ್ನುವ ನಂಬಿಕೆ ಜನರದ್ದು. ಹೀಗಾಗಿ ಮಕ್ಕಳ ಮದುವೆ ಮಾಡಿಸಲಾಗಿದೆ.

 

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಬಾರಿ ನೀರಿಕ್ಷಿಸಿದಷ್ಟು ಮಳೆ ಬಾರದೆ ಇದ್ದುದರಿಂದ ರಾಗಿ, ಮೆಕ್ಕೆಜೋಳ, ಅವರೆ, ತೊಗರಿ ಸೇರಿದಂತೆ ಮಳೆಯಾಶ್ರಿತ ಬೆಳೆಗಳೆಲ್ಲವೂ ಒಣಗಿ ಬಾಡಿ ಹೋಗುತ್ತಿವೆ. ಹೀಗಾಗಿ ಅನ್ನದಾತರು ಆಕಾಶದತ್ತ ಮುಖ ಮಾಡಿ ಮಳೆ ಯಾವಾಗ ಬರುತ್ತದೆ ಎಂದು ಕಾದು ನೋಡುವಂತಾಗಿದೆ. ಮಳೆಗಾಗಿ ಹಾತೊರೆಯುತ್ತಿರುವ ಜನರು ಹಳೆಯ ಸಂಪ್ರದಾಯಗಳ ಮೊರೆ ಹೋಗಿದ್ದಾರೆ. ಹೀಗಾದರು ಮಳೆ ಬಂದು ಸಮೃದ್ಧಿಯಾದ ಬೆಳೆ ಬಂದು ರೈತ, ನಾಡಿನ ಜನತೆ ನೆಮ್ಮದಿಯ ಜೀವನ ಮಾಡಿದರೆ ಸಾಕು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror