#NoRain | ರಾಜ್ಯಾದ್ಯಂತ ಬರದ ಛಾಯೆ | ವರುಣನಿಗಾಗಿ ಪರಿತಪಿಸುತ್ತಿರುವ ಜನ | ಮಳೆಗಾಗಿ ಮಕ್ಕಳ ಮದುವೆ ಮಾಡಿಸಿದ ಗ್ರಾಮಸ್ಥರು |

August 31, 2023
12:08 PM
ಮಳೆ ಬಾರದಂತಹ ಸಂದರ್ಭದಲ್ಲಿ ಮಕ್ಕಳಿಗೆ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥಿಸಿದರೆ ಮಳೆ ಬರುತ್ತದೆ ಎನ್ನುವ ನಂಬಿಕೆ ಜನರದ್ದು. ಹೀಗಾಗಿ ಮಳೆಗಾಗಿ ಚಿಕ್ಕಬಳ್ಳಾಪುರದಲ್ಲಿ ಮಕ್ಕಳ ಮದುವೆ ಮಾಡಿಸಲಾಗಿದೆ.

ಇದನ್ನು ಮೂಡನಂಬಿಕೆ ಅನ್ನಬೇಕೋ, ಹಿರಿಯರ ನಂಬಿಕೆ ಅನ್ನಬೇಕೋ….?. ಊರ ಜನಕ್ಕೆ ಮಳೆ ಬೇಕೇ ಬೇಕೂ. ಅದಕ್ಕಾಗಿ ಅವರು ಅದೇನೇನು ಸಾಧ್ಯವೋ ಅದನ್ನೆಲ್ಲಾ ಮಾಡ್ತಾರೆ. ಈಗ ಆಗಿರುವುದು ಅದೇ. ಮಳೆಗಾಗಿ ಮಕ್ಕಳ ಅಣಕು ಮದುವೆ ಮಾಡಿಸಿರೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಗಳಕೊಪ್ಪೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಗ್ರಾಮದ ಇಬ್ಬರು ಬಾಲಕರಲ್ಲಿ ಒಬ್ಬ ಹುಡುಗನಿಗೆ ವಧು ವೇಷ ಹಾಕಿ ಮತ್ತೋರ್ವ ಹುಡುಗನಿಗೆ ವರನ ಪೋಷಾಕು ಹಾಕಿ ಶಾಸ್ತ್ರೋಕ್ತವಾಗಿ ಅರ್ಚಕರ ನೇತೃತ್ವದಲ್ಲಿ ಅಣಕು ಮದುವೆ ಮಾಡುವ ಮೂಲಕ ಮಳೆಗಾಗಿ ಗ್ರಾಮಸ್ಥರು ಮೊರೆಯಿಟ್ಟಿದ್ದಾರೆ. ಗ್ರಾಮದ ಮಧ್ಯಭಾಗದ ಬೀದಿಯಲ್ಲಿ ಮಹಿಳೆಯರೆಲ್ಲ ಕೂತು ಸೋಬಾನೆ ಗೀತೆ ಹಾಡಿ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಚಿಕ್ಕ ಬಾಲಕರು ಥೇಟ್ ವರ-ವಧುವಿನಂತೆ ಕಂಗೊಳಿಸಿದ್ದಾರೆ. ವರನ ಪೋಷಾಕುನಲ್ಲಿದ್ದ ಬಾಲಕ ವಧು ವೇಷದಲ್ಲಿದ್ದ ಮತ್ತೋರ್ವ ಬಾಲಕನಿಗೆ ಅರಿಶಿನ ಕೊಂಬು (ತಾಳಿ) ಕಟ್ಟುವ ಮೂಲಕ ಮದುವೆ ಮಾಡಲಾಗಿದೆ. ಅಂದಹಾಗೆ ಮಳೆ ಬಾರದಂತಹ ಸಂದರ್ಭದಲ್ಲಿ ಈ ರೀತಿ ಮಕ್ಕಳಿಗೆ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥಿಸಿದರೆ ಮಳೆ ಬರುತ್ತದೆ ಎನ್ನುವ ನಂಬಿಕೆ ಜನರದ್ದು. ಹೀಗಾಗಿ ಮಕ್ಕಳ ಮದುವೆ ಮಾಡಿಸಲಾಗಿದೆ.

 

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಬಾರಿ ನೀರಿಕ್ಷಿಸಿದಷ್ಟು ಮಳೆ ಬಾರದೆ ಇದ್ದುದರಿಂದ ರಾಗಿ, ಮೆಕ್ಕೆಜೋಳ, ಅವರೆ, ತೊಗರಿ ಸೇರಿದಂತೆ ಮಳೆಯಾಶ್ರಿತ ಬೆಳೆಗಳೆಲ್ಲವೂ ಒಣಗಿ ಬಾಡಿ ಹೋಗುತ್ತಿವೆ. ಹೀಗಾಗಿ ಅನ್ನದಾತರು ಆಕಾಶದತ್ತ ಮುಖ ಮಾಡಿ ಮಳೆ ಯಾವಾಗ ಬರುತ್ತದೆ ಎಂದು ಕಾದು ನೋಡುವಂತಾಗಿದೆ. ಮಳೆಗಾಗಿ ಹಾತೊರೆಯುತ್ತಿರುವ ಜನರು ಹಳೆಯ ಸಂಪ್ರದಾಯಗಳ ಮೊರೆ ಹೋಗಿದ್ದಾರೆ. ಹೀಗಾದರು ಮಳೆ ಬಂದು ಸಮೃದ್ಧಿಯಾದ ಬೆಳೆ ಬಂದು ರೈತ, ನಾಡಿನ ಜನತೆ ನೆಮ್ಮದಿಯ ಜೀವನ ಮಾಡಿದರೆ ಸಾಕು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror