ಇದನ್ನು ಮೂಡನಂಬಿಕೆ ಅನ್ನಬೇಕೋ, ಹಿರಿಯರ ನಂಬಿಕೆ ಅನ್ನಬೇಕೋ….?. ಊರ ಜನಕ್ಕೆ ಮಳೆ ಬೇಕೇ ಬೇಕೂ. ಅದಕ್ಕಾಗಿ ಅವರು ಅದೇನೇನು ಸಾಧ್ಯವೋ ಅದನ್ನೆಲ್ಲಾ ಮಾಡ್ತಾರೆ. ಈಗ ಆಗಿರುವುದು ಅದೇ. ಮಳೆಗಾಗಿ ಮಕ್ಕಳ ಅಣಕು ಮದುವೆ ಮಾಡಿಸಿರೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಗಳಕೊಪ್ಪೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ಗ್ರಾಮದ ಇಬ್ಬರು ಬಾಲಕರಲ್ಲಿ ಒಬ್ಬ ಹುಡುಗನಿಗೆ ವಧು ವೇಷ ಹಾಕಿ ಮತ್ತೋರ್ವ ಹುಡುಗನಿಗೆ ವರನ ಪೋಷಾಕು ಹಾಕಿ ಶಾಸ್ತ್ರೋಕ್ತವಾಗಿ ಅರ್ಚಕರ ನೇತೃತ್ವದಲ್ಲಿ ಅಣಕು ಮದುವೆ ಮಾಡುವ ಮೂಲಕ ಮಳೆಗಾಗಿ ಗ್ರಾಮಸ್ಥರು ಮೊರೆಯಿಟ್ಟಿದ್ದಾರೆ. ಗ್ರಾಮದ ಮಧ್ಯಭಾಗದ ಬೀದಿಯಲ್ಲಿ ಮಹಿಳೆಯರೆಲ್ಲ ಕೂತು ಸೋಬಾನೆ ಗೀತೆ ಹಾಡಿ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಚಿಕ್ಕ ಬಾಲಕರು ಥೇಟ್ ವರ-ವಧುವಿನಂತೆ ಕಂಗೊಳಿಸಿದ್ದಾರೆ. ವರನ ಪೋಷಾಕುನಲ್ಲಿದ್ದ ಬಾಲಕ ವಧು ವೇಷದಲ್ಲಿದ್ದ ಮತ್ತೋರ್ವ ಬಾಲಕನಿಗೆ ಅರಿಶಿನ ಕೊಂಬು (ತಾಳಿ) ಕಟ್ಟುವ ಮೂಲಕ ಮದುವೆ ಮಾಡಲಾಗಿದೆ. ಅಂದಹಾಗೆ ಮಳೆ ಬಾರದಂತಹ ಸಂದರ್ಭದಲ್ಲಿ ಈ ರೀತಿ ಮಕ್ಕಳಿಗೆ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥಿಸಿದರೆ ಮಳೆ ಬರುತ್ತದೆ ಎನ್ನುವ ನಂಬಿಕೆ ಜನರದ್ದು. ಹೀಗಾಗಿ ಮಕ್ಕಳ ಮದುವೆ ಮಾಡಿಸಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಬಾರಿ ನೀರಿಕ್ಷಿಸಿದಷ್ಟು ಮಳೆ ಬಾರದೆ ಇದ್ದುದರಿಂದ ರಾಗಿ, ಮೆಕ್ಕೆಜೋಳ, ಅವರೆ, ತೊಗರಿ ಸೇರಿದಂತೆ ಮಳೆಯಾಶ್ರಿತ ಬೆಳೆಗಳೆಲ್ಲವೂ ಒಣಗಿ ಬಾಡಿ ಹೋಗುತ್ತಿವೆ. ಹೀಗಾಗಿ ಅನ್ನದಾತರು ಆಕಾಶದತ್ತ ಮುಖ ಮಾಡಿ ಮಳೆ ಯಾವಾಗ ಬರುತ್ತದೆ ಎಂದು ಕಾದು ನೋಡುವಂತಾಗಿದೆ. ಮಳೆಗಾಗಿ ಹಾತೊರೆಯುತ್ತಿರುವ ಜನರು ಹಳೆಯ ಸಂಪ್ರದಾಯಗಳ ಮೊರೆ ಹೋಗಿದ್ದಾರೆ. ಹೀಗಾದರು ಮಳೆ ಬಂದು ಸಮೃದ್ಧಿಯಾದ ಬೆಳೆ ಬಂದು ರೈತ, ನಾಡಿನ ಜನತೆ ನೆಮ್ಮದಿಯ ಜೀವನ ಮಾಡಿದರೆ ಸಾಕು.
ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…
ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…
ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿದ್ದ ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ ರೈಲ್ವೆ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು…