Advertisement
MIRROR FOCUS

ಈ ಹಳ್ಳಿಯಲ್ಲಿ 18 ವರ್ಷದ ಕೆಳಗಿನ ಮಕ್ಕಳು ಮೊಬೈಲ್ ಫೋನ್ ಬಳಕೆ ಮಾಡುವಂತಿಲ್ಲ…! | ಬಳಕೆ ಮಾಡಿದರೆ ದಂಡ ಖಚಿತ |

Share

ಈ ಹಳ್ಳಿಯಲ್ಲಿ 18 ವರ್ಷದೊಳಗಿನವರು ಮೊಬೈಲ್ ಬಳಸುವಂತಿಲ್ಲ.ಮಕ್ಕಳು ಮೊಬೈಲ್ ಬಳಸಿದರೆ ದಂಡ ವಿಧಿಸಲು ಹಿಂಜರಿಯುವುದಿಲ್ಲ ಎಂಬ ನಿರ್ಧಾರವನ್ನು ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಬನ್ಸಿ ಗ್ರಾಮಪಂಚಾಯತ್ ನಿರ್ಧಾರ ಕೈಗೊಂಡಿದೆ.‌ ಈ ನಿರ್ಧಾರ ಈಗ ಪರ ವಿರೋಧ ಚರ್ಚೆಯಾಗುತ್ತಿದ್ದರೂ ಗ್ರಾಮಪಂಚಾಯತ್‌ ತಲೆಕೆಡಿಸಿಕೊಂಡಿಲ್ಲ.

ಕೋವಿಡ್ ಸಮಯದಲ್ಲಿ ಮಕ್ಕಳು ಆನ್‌ಲೈನ್ ತರಗತಿಗಳಿಗೆ ಮೊಬೈಲ್ ಫೋನ್ ಬಳಸಲು ಪ್ರಾರಂಭಿಸಿದರು. ಅಂದಿನಿಂದ ಶಾಲೆ ಪ್ರಾರಂಭವಾದರೂ ಮೊಬೈಲ್‌ ಬಳಕೆ ಮಾತ್ರ ಬಿಟ್ಟಿಲ್ಲ ಎಂದು ಗ್ರಾಮದ ಸರಪಂಚ್ ಗಜಾನನ ಹೇಳಿದರು. ಶಿಕ್ಷಣಕ್ಕಾಗಿ ಆರಂಭಿಸಿರುವ ಫೋನ್ ಗಳು ಮಕ್ಕಳಿಗೂ ಅದೇ ಫೋನ್ ಆಗಿದ್ದು, ಆನ್ ಲೈನ್ ಗೇಮ್ ಹಾಗೂ ಇತರೆ ಸೈಟ್ ಗಳನ್ನು ನೋಡುತ್ತಾ ಸಮಯ ವ್ಯರ್ಥ ಮಾಡುತ್ತಿದ್ದು, ಶಿಕ್ಷಣದ ಬಗ್ಗೆಯೂ ಕಾಳಜಿ ವಹಿಸುತ್ತಿಲ್ಲ, ಅದಕ್ಕಾಗಿಯೇ ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದರು. ಮಕ್ಕಳ ಭವಿಷ್ಯಕ್ಕಾಗಿ ಇಂತಹ ನಿರ್ಧಾರ ಕೈಗೊಳ್ಳಲಾಗಿದೆಯೇ ಹೊರತು ಅವರ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲು ಅಲ್ಲ ಎಂದು ಸ್ಪಷ್ಟಪಡಿಸಿದರು. ಇಂತಹ ವಿನೂತನ ನಿರ್ಧಾರ ಕೈಗೊಂಡ ಮೊದಲ ಪಂಚಾಯತ್ ಎಂಬ ಹೆಗ್ಗಳಿಕೆಗೆ ನಮ್ಮ ಗ್ರಾಮ ಪಾತ್ರವಾಗಿದೆ ಎಂದರು.‌

ಈ ನಿರ್ಧಾರವನ್ನು ಕಾರ್ಯಗತಗೊಳಿಸಲು ವಿರೋಧವಿರುತ್ತದೆ. ಹಾಗಾಗಿ ಇದನ್ನು ಕಾರ್ಯರೂಪಕ್ಕೆ ತರಲು ಮಕ್ಕಳಿಗೆ ಹಾಗೂ ಪೋಷಕರಿಗೆ ಕೌನ್ಸೆಲಿಂಗ್ ನೀಡುತ್ತಿದ್ದೇವೆ ಎಂದರು. ಕೌನ್ಸೆಲಿಂಗ್ ನಂತರವೂ ಮಕ್ಕಳು ಮೊಬೈಲ್ ಬಳಸಿದರೆ ದಂಡ ವಿಧಿಸಲು ಹಿಂಜರಿಯುವುದಿಲ್ಲ ಎಂದು ಸರಪಂಚ್ ಗಜಾನನ ಸ್ಪಷ್ಟಪಡಿಸಿದರು. ಮಕ್ಕಳನ್ನು ಮತ್ತೆ ವಿದ್ಯಾಭ್ಯಾಸದತ್ತ ಸೆಳೆಯುವುದು ಈ ನಿರ್ಧಾರದ‌ ಸ್ಪಷ್ಟ ಉದ್ದೇಶವಾಗಿದೆ ಎಂದು ಸರಪಂಚ್ ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

10 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

17 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

17 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

18 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

1 day ago