Advertisement
MIRROR FOCUS

ಈ ಹಳ್ಳಿಯಲ್ಲಿ 18 ವರ್ಷದ ಕೆಳಗಿನ ಮಕ್ಕಳು ಮೊಬೈಲ್ ಫೋನ್ ಬಳಕೆ ಮಾಡುವಂತಿಲ್ಲ…! | ಬಳಕೆ ಮಾಡಿದರೆ ದಂಡ ಖಚಿತ |

Share

ಈ ಹಳ್ಳಿಯಲ್ಲಿ 18 ವರ್ಷದೊಳಗಿನವರು ಮೊಬೈಲ್ ಬಳಸುವಂತಿಲ್ಲ.ಮಕ್ಕಳು ಮೊಬೈಲ್ ಬಳಸಿದರೆ ದಂಡ ವಿಧಿಸಲು ಹಿಂಜರಿಯುವುದಿಲ್ಲ ಎಂಬ ನಿರ್ಧಾರವನ್ನು ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಬನ್ಸಿ ಗ್ರಾಮಪಂಚಾಯತ್ ನಿರ್ಧಾರ ಕೈಗೊಂಡಿದೆ.‌ ಈ ನಿರ್ಧಾರ ಈಗ ಪರ ವಿರೋಧ ಚರ್ಚೆಯಾಗುತ್ತಿದ್ದರೂ ಗ್ರಾಮಪಂಚಾಯತ್‌ ತಲೆಕೆಡಿಸಿಕೊಂಡಿಲ್ಲ.

ಕೋವಿಡ್ ಸಮಯದಲ್ಲಿ ಮಕ್ಕಳು ಆನ್‌ಲೈನ್ ತರಗತಿಗಳಿಗೆ ಮೊಬೈಲ್ ಫೋನ್ ಬಳಸಲು ಪ್ರಾರಂಭಿಸಿದರು. ಅಂದಿನಿಂದ ಶಾಲೆ ಪ್ರಾರಂಭವಾದರೂ ಮೊಬೈಲ್‌ ಬಳಕೆ ಮಾತ್ರ ಬಿಟ್ಟಿಲ್ಲ ಎಂದು ಗ್ರಾಮದ ಸರಪಂಚ್ ಗಜಾನನ ಹೇಳಿದರು. ಶಿಕ್ಷಣಕ್ಕಾಗಿ ಆರಂಭಿಸಿರುವ ಫೋನ್ ಗಳು ಮಕ್ಕಳಿಗೂ ಅದೇ ಫೋನ್ ಆಗಿದ್ದು, ಆನ್ ಲೈನ್ ಗೇಮ್ ಹಾಗೂ ಇತರೆ ಸೈಟ್ ಗಳನ್ನು ನೋಡುತ್ತಾ ಸಮಯ ವ್ಯರ್ಥ ಮಾಡುತ್ತಿದ್ದು, ಶಿಕ್ಷಣದ ಬಗ್ಗೆಯೂ ಕಾಳಜಿ ವಹಿಸುತ್ತಿಲ್ಲ, ಅದಕ್ಕಾಗಿಯೇ ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದರು. ಮಕ್ಕಳ ಭವಿಷ್ಯಕ್ಕಾಗಿ ಇಂತಹ ನಿರ್ಧಾರ ಕೈಗೊಳ್ಳಲಾಗಿದೆಯೇ ಹೊರತು ಅವರ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲು ಅಲ್ಲ ಎಂದು ಸ್ಪಷ್ಟಪಡಿಸಿದರು. ಇಂತಹ ವಿನೂತನ ನಿರ್ಧಾರ ಕೈಗೊಂಡ ಮೊದಲ ಪಂಚಾಯತ್ ಎಂಬ ಹೆಗ್ಗಳಿಕೆಗೆ ನಮ್ಮ ಗ್ರಾಮ ಪಾತ್ರವಾಗಿದೆ ಎಂದರು.‌

ಈ ನಿರ್ಧಾರವನ್ನು ಕಾರ್ಯಗತಗೊಳಿಸಲು ವಿರೋಧವಿರುತ್ತದೆ. ಹಾಗಾಗಿ ಇದನ್ನು ಕಾರ್ಯರೂಪಕ್ಕೆ ತರಲು ಮಕ್ಕಳಿಗೆ ಹಾಗೂ ಪೋಷಕರಿಗೆ ಕೌನ್ಸೆಲಿಂಗ್ ನೀಡುತ್ತಿದ್ದೇವೆ ಎಂದರು. ಕೌನ್ಸೆಲಿಂಗ್ ನಂತರವೂ ಮಕ್ಕಳು ಮೊಬೈಲ್ ಬಳಸಿದರೆ ದಂಡ ವಿಧಿಸಲು ಹಿಂಜರಿಯುವುದಿಲ್ಲ ಎಂದು ಸರಪಂಚ್ ಗಜಾನನ ಸ್ಪಷ್ಟಪಡಿಸಿದರು. ಮಕ್ಕಳನ್ನು ಮತ್ತೆ ವಿದ್ಯಾಭ್ಯಾಸದತ್ತ ಸೆಳೆಯುವುದು ಈ ನಿರ್ಧಾರದ‌ ಸ್ಪಷ್ಟ ಉದ್ದೇಶವಾಗಿದೆ ಎಂದು ಸರಪಂಚ್ ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

15 hours ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

2 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

2 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

3 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

3 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

3 days ago