Advertisement
ಸುದ್ದಿಗಳು

#Nature| ಇಲ್ಲಿ ಪರಿಸರ ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಭಾರಿ ದಂಡ | ಫುಟ್‌ಬಾಲ್‌ ತಾರೆ ನೇಮರ್‌ಗೆ ಬಿತ್ತು 27 ಕೋಟಿ ರೂ. ದಂಡ…! |

Share

ನಮ್ಮ ದೇಶದಲ್ಲಿ ಶ್ರೀಮಂತರಿಗೆ ಒಂದು ನ್ಯಾಯ. ಬಡವರಿಗೊಂದು ನ್ಯಾಯ. ಇದು ಅನೇಕ ಸಂದರ್ಭಗಳಲ್ಲಿ ನಮ್ಮ ಕಣ್ಣ ಮುಂದೆಯೇ ಸಾಬೀತಾಗಿದೆ ಕೂಡ. ಅದರಲ್ಲೂ ಪರಿಸರ ವಿಚಾರಕ್ಕೆ ಬಂದರೆ ಬಡವ ತನ್ನ ಮನೆ, ಅಥವಾ ಕಟ್ಟಿಗಾಗಿ ಒಂದು ಮರ ಕಡಿದರೆ ಕೇಸ್ ಬಿದ್ದಾಯ್ತು. ಅದೇ ಶ್ರೀ ಮಂತರು ಇಡೀ ಅರಣ್ಯವನ್ನೇ ನುಂಗಿ ನೀರು ಕುಡಿದರು ಅವರ ಮೇಲೆ ಯಾವ ಕೇಸ್ ಇಲ್ಲಾ, ಕಾನೂನು ಇಲ್ಲ…!. ಆದರೆ ಇಲ್ಲಿ ಹಾಗಲ್ಲ ಬರೋಬ್ಬರಿ ದಂಡ ವಿಧಿಸಿ ಸುದ್ದಿಯಾಗಿದೆ ಈ ದೇಶ.

ಉದ್ಯಮ ವಿಸ್ತರಣೆ, ರಸ್ತೆ ಅಗಲೀಕರಣ, ಅನಧಿಕೃತ ಕಟ್ಟಡಗಳು, ಹೋಮ್ ಸ್ಟೇಗಳು ಹೀಗೆ ನಮ್ಮ ಪರಿಸರ ನಾಶಕ್ಕೆ ಕಾರಣವಾಗುತ್ತಿರುವ ಕಾರಣಗಳು ಸಾವಿರಾರು. ಆದರೆ ಸರ್ಕಾರಕ್ಕೂ ಇದಕ್ಕೂ ಯಾವುದೇ ಸಂಬಂಧ ಇರೋದಿಲ್ಲ. ಅಷ್ಟೆ ಯಾಕೆ ಮುಂದಿನ ಪೀಳಿಗೆ ಉಳಿಯಬೇಕಂದ್ರೆ ನಮ್ಮ ಪಶ್ಚಿಮ ಘಟ್ಟ ಅತ್ಯಗತ್ಯ. ಅಂತ ಪಶ್ಚಿಮ ಘಟ್ಟವನ್ನೇ ನಾಶ ಮಾಡಿ ತಮ್ಮ ಸ್ವಇಚ್ಛೆ ಮೆರೆಯುತ್ತಿದ್ದಾರೆ. ಆದರೆ ಇದಕ್ಕೆ ಹೊಣೆ ಯಾರು ಇಲ್ಲ.

ಆದರೆ ವಿದೇಶಗಳ ಕಾನೂನು ಹಾಗಿಲ್ಲ. ಅವನು ಯಾರೇ ಆಗಿರಲಿ ಪರಿಸರ ನಾಶಕ್ಕೆ ತಕ್ಕ ಶಾಸ್ತಿ ಅನುಭವಿಸಲೇ ಬೇಕು. ಇಲ್ನೋಡಿ ಮನೆ ನಿರ್ಮಿಸುವಾಗ ಪರಿಸರ ನಿಯಮ ಉಲ್ಲಂಘಿಸಿದ್ದಕ್ಕಾಗಿ ಫುಟ್‌ಬಾಲ್‌ ತಾರೆ #Brazilian football star ನೇಮರ್‌ಗೆ #Neymar ಗೆ  ಬರೋಬ್ಬರಿ 27 ಕೋಟಿ ರೂ. (3.3 ಮಿಲಿಯನ್‌ ಅಮೆರಿಕನ್‌ ಡಾಲರ್)‌ ದಂಡ ವಿಧಿಸಲಾಗಿದೆ.

ದಂಡ ವಿಧಿಸಿರುವ ಬಗ್ಗೆ ಮಾಹಿತಿ ನೀಡಿರುವ ಬ್ರೆಜಿಲ್‌ ಅಧಿಕಾರಿಗಳು, ನೇಮರ್‌ ಅವರು ದಕ್ಷಿಣ ಬ್ರೆಜಿಲ್‌ನ ಕರಾವಳಿ ಪ್ರದೇಶದ ರಿಯೊ ಡಿ ಜನೈರೊದ ಹೊರವಲಯದಲ್ಲಿ ಐಷರಾಮಿ ಮನೆ ನಿರ್ಮಿಸಿದ್ದಾರೆ. ಅದಕ್ಕಾಗಿ ಶುದ್ಧ ನೀರಿನ ಮೂಲಗಳ ಬಳಕೆ, ಬಂಡೆ ಮತ್ತು ಮರಳು ಬಳಕೆ ವೇಳೆ ಪರಿಸರ ನಿಯಮ ಉಲ್ಲಂಘಿಸಿದ್ದಾರೆ. ಹೀಗಾಗಿ ಅವರಿಗೆ ದಂಡ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಅವರ ನಿವಾಸದಲ್ಲಿ ಕೃತಕ ಕೊಳ ನಿರ್ಮಾಣದ ವೇಳೆ ಪರಿಸರಕ್ಕೆ ಹಾನಿ ಮಾಡಲಾಗಿದೆ ಎಂದು ಮಂಗರಟಿಬ ಸಿಟಿ ಕೌನ್ಸಿಲ್‌ ದೂರಿನಲ್ಲಿ ತಿಳಿಸಿದೆ. ಅನುಮತಿಯಿಲ್ಲದೆ ಪರಿಸರಕ್ಕೆ ಧಕ್ಕೆಯಾಗುವಂತಹ ಕೆಲಸ ಮಾಡಿರುವುದು, ನದಿ ನೀರನ್ನು ಬಳಸಿರುವುದು, ಸಸ್ಯವರ್ಗದ ಬೆಳವಣಿಗೆಗೆ ಅಡ್ಡಿಪಡಿಸಿರುವುದು ಸೇರಿದಂತೆ ಹಲವು ಅಪರಾಧಗಳನ್ನು ನೇಮರ್‌ ಮೇಲೆ ಹೊರಿಸಲಾಗಿದೆ. ಬ್ರೆಜಿಲ್ ಫುಟ್‌ಬಾಲ್‌ ತಾರೆ ತಮ್ಮ ಬಲ ಪಾದದ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಫೆಬ್ರವರಿಯಿಂದ ಅವರು ಫುಟ್ಬಾಲ್ ಪಂದ್ಯಗಳಲ್ಲಿ ಆಡಿಲ್ಲ.

ನಮ್ಮ ದೇಶದಲ್ಲಿ ಇಂಥ ಕೇಸ್ ಹಾಕಿ ಎಲ್ಲಿಯಾದರೂ ಯಾರನ್ನಾದರೂ ದಂಡಿಸಿದ್ದು ಕೇಳಿದ್ದು ಇದೆಯಾ..? ನಮ್ಮ ದೇಶದಲ್ಲೂ ಇಂತಹ ಕಾನೂನು ಬಂದರೆ ಮಾತ್ರ ಮುಂದಿನ ಪೀಳಿಗೆಗೆ ಪರಿಸರವನ್ನು ಉಳಿಸಲು ಸಾಧ್ಯ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

5 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

12 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

12 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

12 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

21 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

21 hours ago