#ViralNews | ನಿರುದ್ಯೋಗಿಯನ್ನಾಗಿ ಮಾಡಿದ ಹಚ್ಚೆಯ ಹುಚ್ಚು | ಶೌಚಾಲಯ ತೊಳೆಯೋ ಕೆಲಸವೂ ಸಿಗುತ್ತಿಲ್ಲವಂತೆ…! |

July 6, 2023
1:50 PM
ಮನುಷ್ಯನ ಹುಚ್ಚುಗಳು ಬಗೆಬಗೆಯದು.ಕೆಲವೊಂದು ಹುಚ್ಚುಗಳು ತನಗೆ ಮಾರಕವಾದರೂ ಸಮಾಜಕ್ಕೆ ಹಾನಿ ಇಲ್ಲ. ಇನ್ನೂ ಕೆಲವು ತಮಗೂ ಸಮಾಜಕ್ಕೂ ಮಾರಕ. ಇಲ್ಲಿ ತನಗೇ ಹಾನಿಯಾದ ಆಸಕ್ತಿಯೊಂದರ ಕತೆ ಇದೆ...

ಮನುಷ್ಯನಿಗೆ ಅದೇನೇನೋ ಹುಚ್ಚುತನಗಳು ಇರುತ್ತವೆ. ಕೆಲವೊಮ್ಮೆ ಈ ಹುಚ್ಚುತನಗಳು ಹವ್ಯಾಸವಾಗಿ ಬೆಳೆದರೆ, ಇನ್ನು ಕೆಲವು ಅವರ ಜೀವನಕ್ಕೇ ಕುತ್ತು ತರುತ್ತವೆ. ಅಂಥವರ ಸಾಲಿಗೆ ಸೇರಿದ್ದಾಳೆ ಇಲ್ಲೊಬ್ಬ ಮಹಿಳೆ. ಈಕೆ ಮಹಾನ್ ಟ್ಯಾಟೋ ಲವರ್ #TattooLover. ತನ್ನ ಮೈಮೇಲೆ ಈಗಾಗಲೇ 800 ಹಚ್ಚೆ ಹಾಕಿಸಿಕೊಂಡಿದ್ದಾಳೆ.  ಈಕೆಗೆ ಹಚ್ಚೆ ಹಾಕಿಸಿಕೊಳ್ಳುವುದು ಒಂದು ವ್ಯಸನ. ಕೆಲಸವನ್ನು ಹುಡುಕುತ್ತಲೇ ವಾರಕ್ಕೆ ಮೂರು ಹೊಸ ಹಚ್ಚೆಗಳನ್ನು ಹಾಕಿಸಿಕೊಳ್ಳುತ್ತಳೆ ಇರುತ್ತಾಳೆ.

ಮನುಷ್ಯನಿಗೆ ಹುಚ್ಚು ಇರಬೇಕು, ಆದರೆ ಬದುಕನ್ನೇ ತೊಡಕು ಮಾಡಿಕೊಳ್ಳುವಷ್ಟು ಅಲ್ಲ. ಇದೀಗ ವೈರಲ್ ಆಗುತ್ತಿರುವ ಈ ಪೋಸ್ಟ್​ನಲ್ಲಿರುವ ಮಹಿಳೆಯನ್ನು ಗಮನಿಸಿ. ಹಚ್ಚೆಪ್ರಿಯಳಾದ ಈಕೆ ಈ ತನಕ ಒಂದಲ್ಲ ಹತ್ತಲ್ಲ ಬರೋಬ್ಬರಿ 800 ಹಚ್ಚೆಗಳನ್ನು ತನ್ನ ಮೈಮುಖದ ಮೇಲೆ ಹಾಕಿಸಿಕೊಂಡಿದ್ದಾಳೆ. ಆದರೆ ಈ ‘ಹಚ್ಚೆಯ ಚಟ’ ದಿಂದಾಗಿಯೇ ಆಕೆ ನಿರುದ್ಯೋಗವನ್ನು  ಅನುಭವಿಸುವಂತಾಗಿದೆ. ಕೆಲಸ ಕೇಳಿಕೊಂಡು ಹೋದಲ್ಲೆಲ್ಲ ಆಕೆಯ ಹಚ್ಚೆಗಳ ಬಗ್ಗೆಯೇ ಟೀಕಿಸುತ್ತಾರೆ ವಿನಾ ಯಾರೊಬ್ಬರೂ ಈಕೆಗೆ ಕೆಲಸ ಕೊಡುತ್ತಿಲ್ಲ. ಹೀಗಾಗಿ ಮಾಡಿದ್ದುಣ್ಣೋ ಮಾರಾಯಾ ಎಂಬಂತಾಗಿದೆ ಈಕೆಯ ಪರಿಸ್ಥಿತಿ.
ನ್ಯೂಯಾರ್ಕ್​ ಪೋಸ್ಟ್​ನ ವರದಿಯಂತೆ, ಲಂಡನ್​ನ ವೇಲ್ಸ್​ನಲ್ಲಿ 46 ವರ್ಷದ ಈ ಮೆಲಿಸ್ಸಾ ಸ್ಲೋನ್​ ನೆಲೆಸಿದ್ದಾಳೆ. ಈಕೆಗೆ ಎರಡು  ಹೆಣ್ಣುಮಕ್ಕಳೂ ಇವೆ. ಆದರೆ ಕೆಲಸವಿಲ್ಲದೆ ಇದೀಗ ಒದ್ಧಾಡುತ್ತಿದ್ದಾಳೆ. “ಶೌಚಾಲಯ ಸ್ವಚ್ಛಗೊಳಿಸುವ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ರು, ಹಚ್ಚೆಗಳನ್ನು ನೋಡಿಯೇ ಈಕೆಗೆ ಕೆಲಸ ಕೊಡಲಿಲ್ಲ” ಎನ್ನುವುದು ಈಕೆಯ ಅಳಲು.
( ಕೃಪೆ : ಅಂತರ್ಜಾಲ )

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮೇಘಾಲಯದಲ್ಲಿ “ಜಾಕ್‌ ಫ್ರುಟ್‌ ಮಿಶನ್”‌ ಮೂಲಕ ಹಲಸು ಬೆಳೆಗೆ ಪ್ರೋತ್ಸಾಹ | ಮೇಘಾಲಯದ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಹಲಸಿನ ಹಣ್ಣು ಗಿಫ್ಟ್‌ |
July 15, 2025
8:01 AM
by: The Rural Mirror ಸುದ್ದಿಜಾಲ
ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ
July 15, 2025
7:26 AM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ
July 14, 2025
11:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-07-2025 | 10 ದಿನಗಳವರೆಗೂ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆ | ಜುಲೈ 16 ರಿಂದ ರಾಜ್ಯದೆಲ್ಲೆಡೆ ಉತ್ತಮ ಮಳೆ |
July 14, 2025
1:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group