Advertisement
ವೈರಲ್ ಸುದ್ದಿ

#ViralNews | ನಿರುದ್ಯೋಗಿಯನ್ನಾಗಿ ಮಾಡಿದ ಹಚ್ಚೆಯ ಹುಚ್ಚು | ಶೌಚಾಲಯ ತೊಳೆಯೋ ಕೆಲಸವೂ ಸಿಗುತ್ತಿಲ್ಲವಂತೆ…! |

Share

ಮನುಷ್ಯನಿಗೆ ಅದೇನೇನೋ ಹುಚ್ಚುತನಗಳು ಇರುತ್ತವೆ. ಕೆಲವೊಮ್ಮೆ ಈ ಹುಚ್ಚುತನಗಳು ಹವ್ಯಾಸವಾಗಿ ಬೆಳೆದರೆ, ಇನ್ನು ಕೆಲವು ಅವರ ಜೀವನಕ್ಕೇ ಕುತ್ತು ತರುತ್ತವೆ. ಅಂಥವರ ಸಾಲಿಗೆ ಸೇರಿದ್ದಾಳೆ ಇಲ್ಲೊಬ್ಬ ಮಹಿಳೆ. ಈಕೆ ಮಹಾನ್ ಟ್ಯಾಟೋ ಲವರ್ #TattooLover. ತನ್ನ ಮೈಮೇಲೆ ಈಗಾಗಲೇ 800 ಹಚ್ಚೆ ಹಾಕಿಸಿಕೊಂಡಿದ್ದಾಳೆ.  ಈಕೆಗೆ ಹಚ್ಚೆ ಹಾಕಿಸಿಕೊಳ್ಳುವುದು ಒಂದು ವ್ಯಸನ. ಕೆಲಸವನ್ನು ಹುಡುಕುತ್ತಲೇ ವಾರಕ್ಕೆ ಮೂರು ಹೊಸ ಹಚ್ಚೆಗಳನ್ನು ಹಾಕಿಸಿಕೊಳ್ಳುತ್ತಳೆ ಇರುತ್ತಾಳೆ.

ಮನುಷ್ಯನಿಗೆ ಹುಚ್ಚು ಇರಬೇಕು, ಆದರೆ ಬದುಕನ್ನೇ ತೊಡಕು ಮಾಡಿಕೊಳ್ಳುವಷ್ಟು ಅಲ್ಲ. ಇದೀಗ ವೈರಲ್ ಆಗುತ್ತಿರುವ ಈ ಪೋಸ್ಟ್​ನಲ್ಲಿರುವ ಮಹಿಳೆಯನ್ನು ಗಮನಿಸಿ. ಹಚ್ಚೆಪ್ರಿಯಳಾದ ಈಕೆ ಈ ತನಕ ಒಂದಲ್ಲ ಹತ್ತಲ್ಲ ಬರೋಬ್ಬರಿ 800 ಹಚ್ಚೆಗಳನ್ನು ತನ್ನ ಮೈಮುಖದ ಮೇಲೆ ಹಾಕಿಸಿಕೊಂಡಿದ್ದಾಳೆ. ಆದರೆ ಈ ‘ಹಚ್ಚೆಯ ಚಟ’ ದಿಂದಾಗಿಯೇ ಆಕೆ ನಿರುದ್ಯೋಗವನ್ನು  ಅನುಭವಿಸುವಂತಾಗಿದೆ. ಕೆಲಸ ಕೇಳಿಕೊಂಡು ಹೋದಲ್ಲೆಲ್ಲ ಆಕೆಯ ಹಚ್ಚೆಗಳ ಬಗ್ಗೆಯೇ ಟೀಕಿಸುತ್ತಾರೆ ವಿನಾ ಯಾರೊಬ್ಬರೂ ಈಕೆಗೆ ಕೆಲಸ ಕೊಡುತ್ತಿಲ್ಲ. ಹೀಗಾಗಿ ಮಾಡಿದ್ದುಣ್ಣೋ ಮಾರಾಯಾ ಎಂಬಂತಾಗಿದೆ ಈಕೆಯ ಪರಿಸ್ಥಿತಿ.
ನ್ಯೂಯಾರ್ಕ್​ ಪೋಸ್ಟ್​ನ ವರದಿಯಂತೆ, ಲಂಡನ್​ನ ವೇಲ್ಸ್​ನಲ್ಲಿ 46 ವರ್ಷದ ಈ ಮೆಲಿಸ್ಸಾ ಸ್ಲೋನ್​ ನೆಲೆಸಿದ್ದಾಳೆ. ಈಕೆಗೆ ಎರಡು  ಹೆಣ್ಣುಮಕ್ಕಳೂ ಇವೆ. ಆದರೆ ಕೆಲಸವಿಲ್ಲದೆ ಇದೀಗ ಒದ್ಧಾಡುತ್ತಿದ್ದಾಳೆ. “ಶೌಚಾಲಯ ಸ್ವಚ್ಛಗೊಳಿಸುವ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ರು, ಹಚ್ಚೆಗಳನ್ನು ನೋಡಿಯೇ ಈಕೆಗೆ ಕೆಲಸ ಕೊಡಲಿಲ್ಲ” ಎನ್ನುವುದು ಈಕೆಯ ಅಳಲು.
( ಕೃಪೆ : ಅಂತರ್ಜಾಲ )
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

23 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

23 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

23 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

23 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago