Advertisement
ವೈರಲ್ ಸುದ್ದಿ

#ViralNews | ನಿರುದ್ಯೋಗಿಯನ್ನಾಗಿ ಮಾಡಿದ ಹಚ್ಚೆಯ ಹುಚ್ಚು | ಶೌಚಾಲಯ ತೊಳೆಯೋ ಕೆಲಸವೂ ಸಿಗುತ್ತಿಲ್ಲವಂತೆ…! |

Share

ಮನುಷ್ಯನಿಗೆ ಅದೇನೇನೋ ಹುಚ್ಚುತನಗಳು ಇರುತ್ತವೆ. ಕೆಲವೊಮ್ಮೆ ಈ ಹುಚ್ಚುತನಗಳು ಹವ್ಯಾಸವಾಗಿ ಬೆಳೆದರೆ, ಇನ್ನು ಕೆಲವು ಅವರ ಜೀವನಕ್ಕೇ ಕುತ್ತು ತರುತ್ತವೆ. ಅಂಥವರ ಸಾಲಿಗೆ ಸೇರಿದ್ದಾಳೆ ಇಲ್ಲೊಬ್ಬ ಮಹಿಳೆ. ಈಕೆ ಮಹಾನ್ ಟ್ಯಾಟೋ ಲವರ್ #TattooLover. ತನ್ನ ಮೈಮೇಲೆ ಈಗಾಗಲೇ 800 ಹಚ್ಚೆ ಹಾಕಿಸಿಕೊಂಡಿದ್ದಾಳೆ.  ಈಕೆಗೆ ಹಚ್ಚೆ ಹಾಕಿಸಿಕೊಳ್ಳುವುದು ಒಂದು ವ್ಯಸನ. ಕೆಲಸವನ್ನು ಹುಡುಕುತ್ತಲೇ ವಾರಕ್ಕೆ ಮೂರು ಹೊಸ ಹಚ್ಚೆಗಳನ್ನು ಹಾಕಿಸಿಕೊಳ್ಳುತ್ತಳೆ ಇರುತ್ತಾಳೆ.

ಮನುಷ್ಯನಿಗೆ ಹುಚ್ಚು ಇರಬೇಕು, ಆದರೆ ಬದುಕನ್ನೇ ತೊಡಕು ಮಾಡಿಕೊಳ್ಳುವಷ್ಟು ಅಲ್ಲ. ಇದೀಗ ವೈರಲ್ ಆಗುತ್ತಿರುವ ಈ ಪೋಸ್ಟ್​ನಲ್ಲಿರುವ ಮಹಿಳೆಯನ್ನು ಗಮನಿಸಿ. ಹಚ್ಚೆಪ್ರಿಯಳಾದ ಈಕೆ ಈ ತನಕ ಒಂದಲ್ಲ ಹತ್ತಲ್ಲ ಬರೋಬ್ಬರಿ 800 ಹಚ್ಚೆಗಳನ್ನು ತನ್ನ ಮೈಮುಖದ ಮೇಲೆ ಹಾಕಿಸಿಕೊಂಡಿದ್ದಾಳೆ. ಆದರೆ ಈ ‘ಹಚ್ಚೆಯ ಚಟ’ ದಿಂದಾಗಿಯೇ ಆಕೆ ನಿರುದ್ಯೋಗವನ್ನು  ಅನುಭವಿಸುವಂತಾಗಿದೆ. ಕೆಲಸ ಕೇಳಿಕೊಂಡು ಹೋದಲ್ಲೆಲ್ಲ ಆಕೆಯ ಹಚ್ಚೆಗಳ ಬಗ್ಗೆಯೇ ಟೀಕಿಸುತ್ತಾರೆ ವಿನಾ ಯಾರೊಬ್ಬರೂ ಈಕೆಗೆ ಕೆಲಸ ಕೊಡುತ್ತಿಲ್ಲ. ಹೀಗಾಗಿ ಮಾಡಿದ್ದುಣ್ಣೋ ಮಾರಾಯಾ ಎಂಬಂತಾಗಿದೆ ಈಕೆಯ ಪರಿಸ್ಥಿತಿ.
ನ್ಯೂಯಾರ್ಕ್​ ಪೋಸ್ಟ್​ನ ವರದಿಯಂತೆ, ಲಂಡನ್​ನ ವೇಲ್ಸ್​ನಲ್ಲಿ 46 ವರ್ಷದ ಈ ಮೆಲಿಸ್ಸಾ ಸ್ಲೋನ್​ ನೆಲೆಸಿದ್ದಾಳೆ. ಈಕೆಗೆ ಎರಡು  ಹೆಣ್ಣುಮಕ್ಕಳೂ ಇವೆ. ಆದರೆ ಕೆಲಸವಿಲ್ಲದೆ ಇದೀಗ ಒದ್ಧಾಡುತ್ತಿದ್ದಾಳೆ. “ಶೌಚಾಲಯ ಸ್ವಚ್ಛಗೊಳಿಸುವ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ರು, ಹಚ್ಚೆಗಳನ್ನು ನೋಡಿಯೇ ಈಕೆಗೆ ಕೆಲಸ ಕೊಡಲಿಲ್ಲ” ಎನ್ನುವುದು ಈಕೆಯ ಅಳಲು.
( ಕೃಪೆ : ಅಂತರ್ಜಾಲ )
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

9 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

17 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

18 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

20 hours ago