ಕಳೆದ ಎರಡು ದಿನಗಳಿಂದ ಸುಳ್ಯ ತಾಲೂಕಿನಲ್ಲೂ ಉತ್ತಮ ಮಳೆಯಾಗುತ್ತಿದೆ. ಮಳೆಗೆ ಗೊಳೆ, ನದಿಗಳು ತುಂಬಿ ಹರಿಯುತ್ತದೆ. ಆದರೆ ರಸ್ತೆಯಲ್ಲೂ ನೀರು ಹರಿಯುವುದು ಕೂಡಾ ಈ ಬಾರಿ ಕಂಡಿದೆ. ಚರಂಡಿ ವ್ಯವಸ್ಥೆ ಸರಿ ಇಲ್ಲದೆ ಬಹುತೇಕ ರಸ್ತೆಗಳಲ್ಲಿ ನೀರು ಹರಿಯುತ್ತಿದೆ. ಆದರೆ ಇಲ್ಲಿ ಕಳೆದ ಹಲವಾರು ವರ್ಷಗಳಿಂದ ರಸ್ತೆಯಲ್ಲಿ ನೀರು ಹರಿಯುತ್ತದೆ. ಇದನ್ನೇ ಇರಿಸಿಕೊಂಡು ಟ್ರೋಲ್ ಮಾಡಿದ್ದಾರೆ ಗ್ರಾಮೀಣ ಜನರು.
ವೈರಲ್ ಆಗಿರುವ ವಿಡಿಯೋ:
ಇದು ಸುಳ್ಯ-ಸುಬ್ರಹ್ಮಣ್ಯ ರಸ್ತೆ. ಹೇಳುವುದಕ್ಕೆ ರಾಜ್ಯ ಹೆದ್ದಾರಿ. ರಾಷ್ಟ್ರೀಯ ಹೆದ್ದಾರಿಯ ಸ್ಥಾನದಲ್ಲಿದೆ. ಈ ರಸ್ತೆಯಲ್ಲಿ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ಕಳೆದ ಹಲವು ವರ್ಷಗಳಿಂದ ರಸ್ತೆಯಲ್ಲಿಯೇ ನೀರು ಹರಿಯುತ್ತಿದೆ. ವಿಪರೀತ ಮಳೆಯಾದರೆ ರಸ್ತೆಯಲ್ಲಿ ಹೋಗುವುದೇ ಸಾಹಸದ ಕೆಲಸ. ವಾಹನ ಚಾಲಕರು ಪರದಾಟ ನಡೆಸುತ್ತಾರೆ. ಇದೀಗ ಎರಡು ದಿನದ ಮಳೆಗೆ ರಸ್ತೆಯಲ್ಲಿ ನೀರು ಹರಿಯುತ್ತಿತ್ತು. ಈ ಸಮಸ್ಯೆ ಬಗ್ಗೆ ಹಲವು ಬಾರಿ ಇಲ್ಲಿನ ಆಡಳಿತದ ಗಮನಕ್ಕೆ ತಂದರೂ ಸರಿಯಾಗದ ಕಾರಣ ಈ ಬಾರಿ ಟ್ರೋಲ್ ಮಾಡಿದ್ದಾರೆ ಸಂಕಷ್ಟಕ್ಕೆ ಒಳಗಾದ ವಾಹನ ಚಾಲಕರು. ಇಲಾಖೆಗಳಿಗೆ ಇದು ತಲುಪಿದರೆ ದುರಸ್ತಿಗೆ ಒತ್ತಾಯಿಸಿದ್ದಾರೆ.
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…