ಕಳೆದ ಎರಡು ದಿನಗಳಿಂದ ಸುಳ್ಯ ತಾಲೂಕಿನಲ್ಲೂ ಉತ್ತಮ ಮಳೆಯಾಗುತ್ತಿದೆ. ಮಳೆಗೆ ಗೊಳೆ, ನದಿಗಳು ತುಂಬಿ ಹರಿಯುತ್ತದೆ. ಆದರೆ ರಸ್ತೆಯಲ್ಲೂ ನೀರು ಹರಿಯುವುದು ಕೂಡಾ ಈ ಬಾರಿ ಕಂಡಿದೆ. ಚರಂಡಿ ವ್ಯವಸ್ಥೆ ಸರಿ ಇಲ್ಲದೆ ಬಹುತೇಕ ರಸ್ತೆಗಳಲ್ಲಿ ನೀರು ಹರಿಯುತ್ತಿದೆ. ಆದರೆ ಇಲ್ಲಿ ಕಳೆದ ಹಲವಾರು ವರ್ಷಗಳಿಂದ ರಸ್ತೆಯಲ್ಲಿ ನೀರು ಹರಿಯುತ್ತದೆ. ಇದನ್ನೇ ಇರಿಸಿಕೊಂಡು ಟ್ರೋಲ್ ಮಾಡಿದ್ದಾರೆ ಗ್ರಾಮೀಣ ಜನರು.
ವೈರಲ್ ಆಗಿರುವ ವಿಡಿಯೋ:
ಇದು ಸುಳ್ಯ-ಸುಬ್ರಹ್ಮಣ್ಯ ರಸ್ತೆ. ಹೇಳುವುದಕ್ಕೆ ರಾಜ್ಯ ಹೆದ್ದಾರಿ. ರಾಷ್ಟ್ರೀಯ ಹೆದ್ದಾರಿಯ ಸ್ಥಾನದಲ್ಲಿದೆ. ಈ ರಸ್ತೆಯಲ್ಲಿ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ಕಳೆದ ಹಲವು ವರ್ಷಗಳಿಂದ ರಸ್ತೆಯಲ್ಲಿಯೇ ನೀರು ಹರಿಯುತ್ತಿದೆ. ವಿಪರೀತ ಮಳೆಯಾದರೆ ರಸ್ತೆಯಲ್ಲಿ ಹೋಗುವುದೇ ಸಾಹಸದ ಕೆಲಸ. ವಾಹನ ಚಾಲಕರು ಪರದಾಟ ನಡೆಸುತ್ತಾರೆ. ಇದೀಗ ಎರಡು ದಿನದ ಮಳೆಗೆ ರಸ್ತೆಯಲ್ಲಿ ನೀರು ಹರಿಯುತ್ತಿತ್ತು. ಈ ಸಮಸ್ಯೆ ಬಗ್ಗೆ ಹಲವು ಬಾರಿ ಇಲ್ಲಿನ ಆಡಳಿತದ ಗಮನಕ್ಕೆ ತಂದರೂ ಸರಿಯಾಗದ ಕಾರಣ ಈ ಬಾರಿ ಟ್ರೋಲ್ ಮಾಡಿದ್ದಾರೆ ಸಂಕಷ್ಟಕ್ಕೆ ಒಳಗಾದ ವಾಹನ ಚಾಲಕರು. ಇಲಾಖೆಗಳಿಗೆ ಇದು ತಲುಪಿದರೆ ದುರಸ್ತಿಗೆ ಒತ್ತಾಯಿಸಿದ್ದಾರೆ.
ಬೆಳೆ ವೈರಸ್ ರೋಗಗಳಿಗೆ ಇನ್ನೂ ವ್ಯಾಕ್ಸಿನ್ ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ರೋಗ…
31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…
ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್ಐ…
ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…
ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…
ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…