ಕಳೆದ ಎರಡು ದಿನಗಳಿಂದ ಸುಳ್ಯ ತಾಲೂಕಿನಲ್ಲೂ ಉತ್ತಮ ಮಳೆಯಾಗುತ್ತಿದೆ. ಮಳೆಗೆ ಗೊಳೆ, ನದಿಗಳು ತುಂಬಿ ಹರಿಯುತ್ತದೆ. ಆದರೆ ರಸ್ತೆಯಲ್ಲೂ ನೀರು ಹರಿಯುವುದು ಕೂಡಾ ಈ ಬಾರಿ ಕಂಡಿದೆ. ಚರಂಡಿ ವ್ಯವಸ್ಥೆ ಸರಿ ಇಲ್ಲದೆ ಬಹುತೇಕ ರಸ್ತೆಗಳಲ್ಲಿ ನೀರು ಹರಿಯುತ್ತಿದೆ. ಆದರೆ ಇಲ್ಲಿ ಕಳೆದ ಹಲವಾರು ವರ್ಷಗಳಿಂದ ರಸ್ತೆಯಲ್ಲಿ ನೀರು ಹರಿಯುತ್ತದೆ. ಇದನ್ನೇ ಇರಿಸಿಕೊಂಡು ಟ್ರೋಲ್ ಮಾಡಿದ್ದಾರೆ ಗ್ರಾಮೀಣ ಜನರು.
ವೈರಲ್ ಆಗಿರುವ ವಿಡಿಯೋ:
ಇದು ಸುಳ್ಯ-ಸುಬ್ರಹ್ಮಣ್ಯ ರಸ್ತೆ. ಹೇಳುವುದಕ್ಕೆ ರಾಜ್ಯ ಹೆದ್ದಾರಿ. ರಾಷ್ಟ್ರೀಯ ಹೆದ್ದಾರಿಯ ಸ್ಥಾನದಲ್ಲಿದೆ. ಈ ರಸ್ತೆಯಲ್ಲಿ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ಕಳೆದ ಹಲವು ವರ್ಷಗಳಿಂದ ರಸ್ತೆಯಲ್ಲಿಯೇ ನೀರು ಹರಿಯುತ್ತಿದೆ. ವಿಪರೀತ ಮಳೆಯಾದರೆ ರಸ್ತೆಯಲ್ಲಿ ಹೋಗುವುದೇ ಸಾಹಸದ ಕೆಲಸ. ವಾಹನ ಚಾಲಕರು ಪರದಾಟ ನಡೆಸುತ್ತಾರೆ. ಇದೀಗ ಎರಡು ದಿನದ ಮಳೆಗೆ ರಸ್ತೆಯಲ್ಲಿ ನೀರು ಹರಿಯುತ್ತಿತ್ತು. ಈ ಸಮಸ್ಯೆ ಬಗ್ಗೆ ಹಲವು ಬಾರಿ ಇಲ್ಲಿನ ಆಡಳಿತದ ಗಮನಕ್ಕೆ ತಂದರೂ ಸರಿಯಾಗದ ಕಾರಣ ಈ ಬಾರಿ ಟ್ರೋಲ್ ಮಾಡಿದ್ದಾರೆ ಸಂಕಷ್ಟಕ್ಕೆ ಒಳಗಾದ ವಾಹನ ಚಾಲಕರು. ಇಲಾಖೆಗಳಿಗೆ ಇದು ತಲುಪಿದರೆ ದುರಸ್ತಿಗೆ ಒತ್ತಾಯಿಸಿದ್ದಾರೆ.
ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…
ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…
ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…
ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…
ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…