ಕಳೆದ ಎರಡು ದಿನಗಳಿಂದ ಸುಳ್ಯ ತಾಲೂಕಿನಲ್ಲೂ ಉತ್ತಮ ಮಳೆಯಾಗುತ್ತಿದೆ. ಮಳೆಗೆ ಗೊಳೆ, ನದಿಗಳು ತುಂಬಿ ಹರಿಯುತ್ತದೆ. ಆದರೆ ರಸ್ತೆಯಲ್ಲೂ ನೀರು ಹರಿಯುವುದು ಕೂಡಾ ಈ ಬಾರಿ ಕಂಡಿದೆ. ಚರಂಡಿ ವ್ಯವಸ್ಥೆ ಸರಿ ಇಲ್ಲದೆ ಬಹುತೇಕ ರಸ್ತೆಗಳಲ್ಲಿ ನೀರು ಹರಿಯುತ್ತಿದೆ. ಆದರೆ ಇಲ್ಲಿ ಕಳೆದ ಹಲವಾರು ವರ್ಷಗಳಿಂದ ರಸ್ತೆಯಲ್ಲಿ ನೀರು ಹರಿಯುತ್ತದೆ. ಇದನ್ನೇ ಇರಿಸಿಕೊಂಡು ಟ್ರೋಲ್ ಮಾಡಿದ್ದಾರೆ ಗ್ರಾಮೀಣ ಜನರು.
ವೈರಲ್ ಆಗಿರುವ ವಿಡಿಯೋ:
ಇದು ಸುಳ್ಯ-ಸುಬ್ರಹ್ಮಣ್ಯ ರಸ್ತೆ. ಹೇಳುವುದಕ್ಕೆ ರಾಜ್ಯ ಹೆದ್ದಾರಿ. ರಾಷ್ಟ್ರೀಯ ಹೆದ್ದಾರಿಯ ಸ್ಥಾನದಲ್ಲಿದೆ. ಈ ರಸ್ತೆಯಲ್ಲಿ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ಕಳೆದ ಹಲವು ವರ್ಷಗಳಿಂದ ರಸ್ತೆಯಲ್ಲಿಯೇ ನೀರು ಹರಿಯುತ್ತಿದೆ. ವಿಪರೀತ ಮಳೆಯಾದರೆ ರಸ್ತೆಯಲ್ಲಿ ಹೋಗುವುದೇ ಸಾಹಸದ ಕೆಲಸ. ವಾಹನ ಚಾಲಕರು ಪರದಾಟ ನಡೆಸುತ್ತಾರೆ. ಇದೀಗ ಎರಡು ದಿನದ ಮಳೆಗೆ ರಸ್ತೆಯಲ್ಲಿ ನೀರು ಹರಿಯುತ್ತಿತ್ತು. ಈ ಸಮಸ್ಯೆ ಬಗ್ಗೆ ಹಲವು ಬಾರಿ ಇಲ್ಲಿನ ಆಡಳಿತದ ಗಮನಕ್ಕೆ ತಂದರೂ ಸರಿಯಾಗದ ಕಾರಣ ಈ ಬಾರಿ ಟ್ರೋಲ್ ಮಾಡಿದ್ದಾರೆ ಸಂಕಷ್ಟಕ್ಕೆ ಒಳಗಾದ ವಾಹನ ಚಾಲಕರು. ಇಲಾಖೆಗಳಿಗೆ ಇದು ತಲುಪಿದರೆ ದುರಸ್ತಿಗೆ ಒತ್ತಾಯಿಸಿದ್ದಾರೆ.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…