Advertisement
ಸುದ್ದಿಗಳು

#ViralVideo | ಸುಳ್ಯ-ಸುಬ್ರಹ್ಮಣ್ಯ ರಸ್ತೆ | ಮಳೆಗೆ ಟ್ರೋಲ್‌ಗೆ ಒಳಗಾದ ಹೆದ್ದಾರಿ…. ! |

Share

ಕಳೆದ ಎರಡು ದಿನಗಳಿಂದ ಸುಳ್ಯ ತಾಲೂಕಿನಲ್ಲೂ ಉತ್ತಮ ಮಳೆಯಾಗುತ್ತಿದೆ. ಮಳೆಗೆ ಗೊಳೆ, ನದಿಗಳು ತುಂಬಿ ಹರಿಯುತ್ತದೆ. ಆದರೆ ರಸ್ತೆಯಲ್ಲೂ ನೀರು ಹರಿಯುವುದು ಕೂಡಾ ಈ ಬಾರಿ ಕಂಡಿದೆ. ಚರಂಡಿ ವ್ಯವಸ್ಥೆ ಸರಿ ಇಲ್ಲದೆ ಬಹುತೇಕ ರಸ್ತೆಗಳಲ್ಲಿ ನೀರು ಹರಿಯುತ್ತಿದೆ. ಆದರೆ ಇಲ್ಲಿ ಕಳೆದ ಹಲವಾರು ವರ್ಷಗಳಿಂದ ರಸ್ತೆಯಲ್ಲಿ ನೀರು ಹರಿಯುತ್ತದೆ. ಇದನ್ನೇ ಇರಿಸಿಕೊಂಡು ಟ್ರೋಲ್‌ ಮಾಡಿದ್ದಾರೆ ಗ್ರಾಮೀಣ ಜನರು.

ವೈರಲ್‌ ಆಗಿರುವ ವಿಡಿಯೋ:

ಇದು ಸುಳ್ಯ-ಸುಬ್ರಹ್ಮಣ್ಯ ರಸ್ತೆ. ಹೇಳುವುದಕ್ಕೆ ರಾಜ್ಯ ಹೆದ್ದಾರಿ. ರಾಷ್ಟ್ರೀಯ ಹೆದ್ದಾರಿಯ ಸ್ಥಾನದಲ್ಲಿದೆ. ಈ ರಸ್ತೆಯಲ್ಲಿ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ಕಳೆದ ಹಲವು ವರ್ಷಗಳಿಂದ ರಸ್ತೆಯಲ್ಲಿಯೇ ನೀರು ಹರಿಯುತ್ತಿದೆ. ವಿಪರೀತ ಮಳೆಯಾದರೆ ರಸ್ತೆಯಲ್ಲಿ ಹೋಗುವುದೇ ಸಾಹಸದ ಕೆಲಸ. ವಾಹನ ಚಾಲಕರು ಪರದಾಟ ನಡೆಸುತ್ತಾರೆ. ಇದೀಗ ಎರಡು ದಿನದ ಮಳೆಗೆ ರಸ್ತೆಯಲ್ಲಿ ನೀರು ಹರಿಯುತ್ತಿತ್ತು. ಈ ಸಮಸ್ಯೆ ಬಗ್ಗೆ ಹಲವು ಬಾರಿ ಇಲ್ಲಿನ ಆಡಳಿತದ ಗಮನಕ್ಕೆ ತಂದರೂ ಸರಿಯಾಗದ ಕಾರಣ ಈ ಬಾರಿ ಟ್ರೋಲ್‌ ಮಾಡಿದ್ದಾರೆ ಸಂಕಷ್ಟಕ್ಕೆ ಒಳಗಾದ ವಾಹನ ಚಾಲಕರು. ಇಲಾಖೆಗಳಿಗೆ ಇದು ತಲುಪಿದರೆ ದುರಸ್ತಿಗೆ ಒತ್ತಾಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳೆ ವೈರಸ್‌ ರೋಗಗಳಿಗೆ ಇನ್ನೂ ವ್ಯಾಕ್ಸಿನ್‌ ಇಲ್ಲ..! – ರೋಗ ನಿರೋಧಕ ತಳಿಗಳೇ ಭವಿಷ್ಯದ ಆಶಾಕಿರಣ

ಬೆಳೆ ವೈರಸ್‌ ರೋಗಗಳಿಗೆ ಇನ್ನೂ ವ್ಯಾಕ್ಸಿನ್‌ ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ರೋಗ…

10 minutes ago

ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…

8 hours ago

ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದ ಭರವಸೆ..! ಟಿಶ್ಯೂ ಕಲ್ಚರ್‌ನಲ್ಲಿ ಮೊದಲ ಹಂತದ ಅಡಿಕೆ ಗಿಡಗಳು ನಾಟಿಗೆ ಸಿದ್ಧ

ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್‌ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ…

16 hours ago

ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?

ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…

1 day ago

ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!

ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…

1 day ago

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲೆ – ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಬಹಿರಂಗವಾದ ಅಚ್ಚರಿಯ ಜೀವ ವೈವಿಧ್ಯ

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…

2 days ago