ವೈರಲ್ ಸುದ್ದಿ

#ViralNews | ಕರಡಿ ವೇಷ ತೊಟ್ಟು ಹೊಲದಲ್ಲಿ ಕೂತ ರೈತ | ಯಾಕಿರಬಹುದು..? ಫೋಟೋ ವೈರಲ್​​​

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರೈತರ ಪಾಡು ಒಂದಾ ಎರಡಾ..? ವರ್ಷವಿಡೀ ಒಂದಲ್ಲ ಒಂದು ತಾಪತ್ರಯ. ಅವನು ಬೆಳೆದ ಬೆಳೆ ಕೈಗೆ ಬರುವಷ್ಟರಲ್ಲಿ ಪ್ರಾಣ ಕೈಗೆ ಬಂದಿರುತ್ತೆ. ಸಾಕಪ್ಪ ಸಾಕು ಈ ಕೃಷಿ #Agriculture ಅನ್ನಿಸಿ ಬಿಟ್ಟಿರುತ್ತೆ. ಆದರೂ ರೈತ #Farmer ತಾನು ನಂಬಿದ ಭೂಮಿ ತಾಯನ್ನು ಎಂದೂ ಮರೆಯಲಾರ. ತನ್ನ ಕಾಯಕ ತಾನು ಮಾಡಿಯೇ ತೀರುತ್ತಾನೆ. ಬೆಳೆ ತೆಗೆದೇ ತೆಗೆಯುತ್ತಾನೆ.

ಇಲ್ಲೊಬ್ಬ ರೈತ ತನ್ನ ಜಮೀನಿನಲ್ಲಿ ಬೆಳೆದ ಬೆಳೆಗೆ ಪ್ರತೀ ದಿನ ಮಂಗಗಳ ಕಾಟ. ಒಂದಲ್ಲ ಎರಡಲ್ಲ ಬರೋಬ್ಬರಿ 40 ರಿಂದ 45 ಮಂಗಗಳು  ಈತನ ಜಮೀನಿಗೆ ಬಂದು ಬೆಳೆಯನ್ನು ಹಾನಿಗೊಳಿಸುತ್ತಿವೆ. ಈ ಕುರಿತು ಅಧಿಕಾರಿಗಳಿಗೆ ಹಲಬು ಬಾರಿ ಮನವಿ ಮಾಡಿದರೂ ಯಾರೂ ಗಮನಹರಿಸಿಲ್ಲ ಎಂದು ರೈತ ಗಜೇಂದ್ರ ತಿಳಿಸಿದ್ದಾರೆ.

Advertisement

ಉತ್ತರ ಪ್ರದೇಶದ ಈ ರೈತ ತಾನು ಬೆಳೆದ ಬೆಳೆಗಳ ರಕ್ಷಣೆಗೆ ಯಾರನ್ನು ನಂಬಿ ಪ್ರಯೋಜನ ಇಲ್ಲ ಅಂತ ತಿಳಿದು ತಾನೇ ಹೊಸ ಪ್ಲಾನ್​​​ ಒಂದನ್ನು ಮಾಡಿದ್ದಾರೆ.  ಇವರ ಪ್ಲಾನ್ ಈಗ​​ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಲಖೀಂಪುರ ಖೇರಿಯ ಜಹಾನ್ ನಗರ ಗ್ರಾಮದ ರೈತ ಗಜೇಂದ್ರ ಸಿಂಗ್​​​​​ ಹೊಲದಲ್ಲಿ ಕರಡಿ ವೇಷ ತೊಟ್ಟು ಕೂತಿದ್ದಾರೆ. ಈ ಮೂಲಕ ಈ ರೈತ ಪ್ರತೀ ದಿನ ತಮ್ಮ ಜಮೀನಿಗೆ ದಾಳಿ ಇಡುವ ಸುಮಾರು 40-45 ಕಪಿ ಸೈನ್ಯದಿಂದ ಬೆಳೆಯನ್ನು ಕಾಪಾಡಿಕೊಳ್ಳುತ್ತಿದ್ದಾರೆ.

 

ಮಂಗಗಳು ಬೆಳೆಗಳಿಗೆ ಹಾನಿ ಮಾಡುವುದನ್ನು ತಡೆಯಲು 4,000 ರೂ.ಗಳಿಗೆ ಈ ವೇಷಭೂಷಣವನ್ನು ಖರೀದಿಸಿದ್ದಾರಂತೆ. ಇದೀಗಾ ರೈತ ಹೊಲದಲ್ಲಿ ಕರಡಿ ವೇಷ ತೊಟ್ಟು ಕುಳಿತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ.  ಇದು ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಸ್ಥಳೀಯ ಡಿ ಎಫ್​​ಒ ಸಂಜಯ್​​​ ಬಿಸ್ವಾಲ್​​​​​​ ಮಂಗಗಳು ಬೆಳೆ ಹಾನಿ ಮಾಡದಂತೆ ತಡೆಯಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪುತ್ತೂರು ಜಾತ್ರೆ ಎಂದರೆ “ನಮ್ಮ ಮನೆ ಉತ್ಸವ”

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಪುತ್ತೂರು ಶ್ರೀ ಮಹತೋಭಾರ ಶ್ರೀ…

3 hours ago

ಕೆಲವು ವಿಶೇಷ ಯೋಗಗಳು ಮತ್ತು ಗ್ರಹಗಳ ಸಂಯೋಜನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

8 hours ago

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

16 hours ago

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…

17 hours ago

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

1 day ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

1 day ago