Advertisement
ವೈರಲ್ ಸುದ್ದಿ

#ViralNews | ಕರಡಿ ವೇಷ ತೊಟ್ಟು ಹೊಲದಲ್ಲಿ ಕೂತ ರೈತ | ಯಾಕಿರಬಹುದು..? ಫೋಟೋ ವೈರಲ್​​​

Share

ರೈತರ ಪಾಡು ಒಂದಾ ಎರಡಾ..? ವರ್ಷವಿಡೀ ಒಂದಲ್ಲ ಒಂದು ತಾಪತ್ರಯ. ಅವನು ಬೆಳೆದ ಬೆಳೆ ಕೈಗೆ ಬರುವಷ್ಟರಲ್ಲಿ ಪ್ರಾಣ ಕೈಗೆ ಬಂದಿರುತ್ತೆ. ಸಾಕಪ್ಪ ಸಾಕು ಈ ಕೃಷಿ #Agriculture ಅನ್ನಿಸಿ ಬಿಟ್ಟಿರುತ್ತೆ. ಆದರೂ ರೈತ #Farmer ತಾನು ನಂಬಿದ ಭೂಮಿ ತಾಯನ್ನು ಎಂದೂ ಮರೆಯಲಾರ. ತನ್ನ ಕಾಯಕ ತಾನು ಮಾಡಿಯೇ ತೀರುತ್ತಾನೆ. ಬೆಳೆ ತೆಗೆದೇ ತೆಗೆಯುತ್ತಾನೆ.

ಇಲ್ಲೊಬ್ಬ ರೈತ ತನ್ನ ಜಮೀನಿನಲ್ಲಿ ಬೆಳೆದ ಬೆಳೆಗೆ ಪ್ರತೀ ದಿನ ಮಂಗಗಳ ಕಾಟ. ಒಂದಲ್ಲ ಎರಡಲ್ಲ ಬರೋಬ್ಬರಿ 40 ರಿಂದ 45 ಮಂಗಗಳು  ಈತನ ಜಮೀನಿಗೆ ಬಂದು ಬೆಳೆಯನ್ನು ಹಾನಿಗೊಳಿಸುತ್ತಿವೆ. ಈ ಕುರಿತು ಅಧಿಕಾರಿಗಳಿಗೆ ಹಲಬು ಬಾರಿ ಮನವಿ ಮಾಡಿದರೂ ಯಾರೂ ಗಮನಹರಿಸಿಲ್ಲ ಎಂದು ರೈತ ಗಜೇಂದ್ರ ತಿಳಿಸಿದ್ದಾರೆ.

Advertisement
Advertisement

ಉತ್ತರ ಪ್ರದೇಶದ ಈ ರೈತ ತಾನು ಬೆಳೆದ ಬೆಳೆಗಳ ರಕ್ಷಣೆಗೆ ಯಾರನ್ನು ನಂಬಿ ಪ್ರಯೋಜನ ಇಲ್ಲ ಅಂತ ತಿಳಿದು ತಾನೇ ಹೊಸ ಪ್ಲಾನ್​​​ ಒಂದನ್ನು ಮಾಡಿದ್ದಾರೆ.  ಇವರ ಪ್ಲಾನ್ ಈಗ​​ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಲಖೀಂಪುರ ಖೇರಿಯ ಜಹಾನ್ ನಗರ ಗ್ರಾಮದ ರೈತ ಗಜೇಂದ್ರ ಸಿಂಗ್​​​​​ ಹೊಲದಲ್ಲಿ ಕರಡಿ ವೇಷ ತೊಟ್ಟು ಕೂತಿದ್ದಾರೆ. ಈ ಮೂಲಕ ಈ ರೈತ ಪ್ರತೀ ದಿನ ತಮ್ಮ ಜಮೀನಿಗೆ ದಾಳಿ ಇಡುವ ಸುಮಾರು 40-45 ಕಪಿ ಸೈನ್ಯದಿಂದ ಬೆಳೆಯನ್ನು ಕಾಪಾಡಿಕೊಳ್ಳುತ್ತಿದ್ದಾರೆ.

 

ಮಂಗಗಳು ಬೆಳೆಗಳಿಗೆ ಹಾನಿ ಮಾಡುವುದನ್ನು ತಡೆಯಲು 4,000 ರೂ.ಗಳಿಗೆ ಈ ವೇಷಭೂಷಣವನ್ನು ಖರೀದಿಸಿದ್ದಾರಂತೆ. ಇದೀಗಾ ರೈತ ಹೊಲದಲ್ಲಿ ಕರಡಿ ವೇಷ ತೊಟ್ಟು ಕುಳಿತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ.  ಇದು ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಸ್ಥಳೀಯ ಡಿ ಎಫ್​​ಒ ಸಂಜಯ್​​​ ಬಿಸ್ವಾಲ್​​​​​​ ಮಂಗಗಳು ಬೆಳೆ ಹಾನಿ ಮಾಡದಂತೆ ತಡೆಯಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

23 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

23 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

23 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

23 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago