ಇಲ್ಲೊಬ್ಬ ರೈತ ತನ್ನ ಜಮೀನಿನಲ್ಲಿ ಬೆಳೆದ ಬೆಳೆಗೆ ಪ್ರತೀ ದಿನ ಮಂಗಗಳ ಕಾಟ. ಒಂದಲ್ಲ ಎರಡಲ್ಲ ಬರೋಬ್ಬರಿ 40 ರಿಂದ 45 ಮಂಗಗಳು ಈತನ ಜಮೀನಿಗೆ ಬಂದು ಬೆಳೆಯನ್ನು ಹಾನಿಗೊಳಿಸುತ್ತಿವೆ. ಈ ಕುರಿತು ಅಧಿಕಾರಿಗಳಿಗೆ ಹಲಬು ಬಾರಿ ಮನವಿ ಮಾಡಿದರೂ ಯಾರೂ ಗಮನಹರಿಸಿಲ್ಲ ಎಂದು ರೈತ ಗಜೇಂದ್ರ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಈ ರೈತ ತಾನು ಬೆಳೆದ ಬೆಳೆಗಳ ರಕ್ಷಣೆಗೆ ಯಾರನ್ನು ನಂಬಿ ಪ್ರಯೋಜನ ಇಲ್ಲ ಅಂತ ತಿಳಿದು ತಾನೇ ಹೊಸ ಪ್ಲಾನ್ ಒಂದನ್ನು ಮಾಡಿದ್ದಾರೆ. ಇವರ ಪ್ಲಾನ್ ಈಗ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಲಖೀಂಪುರ ಖೇರಿಯ ಜಹಾನ್ ನಗರ ಗ್ರಾಮದ ರೈತ ಗಜೇಂದ್ರ ಸಿಂಗ್ ಹೊಲದಲ್ಲಿ ಕರಡಿ ವೇಷ ತೊಟ್ಟು ಕೂತಿದ್ದಾರೆ. ಈ ಮೂಲಕ ಈ ರೈತ ಪ್ರತೀ ದಿನ ತಮ್ಮ ಜಮೀನಿಗೆ ದಾಳಿ ಇಡುವ ಸುಮಾರು 40-45 ಕಪಿ ಸೈನ್ಯದಿಂದ ಬೆಳೆಯನ್ನು ಕಾಪಾಡಿಕೊಳ್ಳುತ್ತಿದ್ದಾರೆ.
ಮಂಗಗಳು ಬೆಳೆಗಳಿಗೆ ಹಾನಿ ಮಾಡುವುದನ್ನು ತಡೆಯಲು 4,000 ರೂ.ಗಳಿಗೆ ಈ ವೇಷಭೂಷಣವನ್ನು ಖರೀದಿಸಿದ್ದಾರಂತೆ. ಇದೀಗಾ ರೈತ ಹೊಲದಲ್ಲಿ ಕರಡಿ ವೇಷ ತೊಟ್ಟು ಕುಳಿತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಇದು ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಸ್ಥಳೀಯ ಡಿ ಎಫ್ಒ ಸಂಜಯ್ ಬಿಸ್ವಾಲ್ ಮಂಗಗಳು ಬೆಳೆ ಹಾನಿ ಮಾಡದಂತೆ ತಡೆಯಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…