ಇಲ್ಲೊಬ್ಬ ರೈತ ತನ್ನ ಜಮೀನಿನಲ್ಲಿ ಬೆಳೆದ ಬೆಳೆಗೆ ಪ್ರತೀ ದಿನ ಮಂಗಗಳ ಕಾಟ. ಒಂದಲ್ಲ ಎರಡಲ್ಲ ಬರೋಬ್ಬರಿ 40 ರಿಂದ 45 ಮಂಗಗಳು ಈತನ ಜಮೀನಿಗೆ ಬಂದು ಬೆಳೆಯನ್ನು ಹಾನಿಗೊಳಿಸುತ್ತಿವೆ. ಈ ಕುರಿತು ಅಧಿಕಾರಿಗಳಿಗೆ ಹಲಬು ಬಾರಿ ಮನವಿ ಮಾಡಿದರೂ ಯಾರೂ ಗಮನಹರಿಸಿಲ್ಲ ಎಂದು ರೈತ ಗಜೇಂದ್ರ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಈ ರೈತ ತಾನು ಬೆಳೆದ ಬೆಳೆಗಳ ರಕ್ಷಣೆಗೆ ಯಾರನ್ನು ನಂಬಿ ಪ್ರಯೋಜನ ಇಲ್ಲ ಅಂತ ತಿಳಿದು ತಾನೇ ಹೊಸ ಪ್ಲಾನ್ ಒಂದನ್ನು ಮಾಡಿದ್ದಾರೆ. ಇವರ ಪ್ಲಾನ್ ಈಗ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಲಖೀಂಪುರ ಖೇರಿಯ ಜಹಾನ್ ನಗರ ಗ್ರಾಮದ ರೈತ ಗಜೇಂದ್ರ ಸಿಂಗ್ ಹೊಲದಲ್ಲಿ ಕರಡಿ ವೇಷ ತೊಟ್ಟು ಕೂತಿದ್ದಾರೆ. ಈ ಮೂಲಕ ಈ ರೈತ ಪ್ರತೀ ದಿನ ತಮ್ಮ ಜಮೀನಿಗೆ ದಾಳಿ ಇಡುವ ಸುಮಾರು 40-45 ಕಪಿ ಸೈನ್ಯದಿಂದ ಬೆಳೆಯನ್ನು ಕಾಪಾಡಿಕೊಳ್ಳುತ್ತಿದ್ದಾರೆ.
ಮಂಗಗಳು ಬೆಳೆಗಳಿಗೆ ಹಾನಿ ಮಾಡುವುದನ್ನು ತಡೆಯಲು 4,000 ರೂ.ಗಳಿಗೆ ಈ ವೇಷಭೂಷಣವನ್ನು ಖರೀದಿಸಿದ್ದಾರಂತೆ. ಇದೀಗಾ ರೈತ ಹೊಲದಲ್ಲಿ ಕರಡಿ ವೇಷ ತೊಟ್ಟು ಕುಳಿತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಇದು ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಸ್ಥಳೀಯ ಡಿ ಎಫ್ಒ ಸಂಜಯ್ ಬಿಸ್ವಾಲ್ ಮಂಗಗಳು ಬೆಳೆ ಹಾನಿ ಮಾಡದಂತೆ ತಡೆಯಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…