ಇಲ್ಲೊಬ್ಬ ರೈತ ತನ್ನ ಜಮೀನಿನಲ್ಲಿ ಬೆಳೆದ ಬೆಳೆಗೆ ಪ್ರತೀ ದಿನ ಮಂಗಗಳ ಕಾಟ. ಒಂದಲ್ಲ ಎರಡಲ್ಲ ಬರೋಬ್ಬರಿ 40 ರಿಂದ 45 ಮಂಗಗಳು ಈತನ ಜಮೀನಿಗೆ ಬಂದು ಬೆಳೆಯನ್ನು ಹಾನಿಗೊಳಿಸುತ್ತಿವೆ. ಈ ಕುರಿತು ಅಧಿಕಾರಿಗಳಿಗೆ ಹಲಬು ಬಾರಿ ಮನವಿ ಮಾಡಿದರೂ ಯಾರೂ ಗಮನಹರಿಸಿಲ್ಲ ಎಂದು ರೈತ ಗಜೇಂದ್ರ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಈ ರೈತ ತಾನು ಬೆಳೆದ ಬೆಳೆಗಳ ರಕ್ಷಣೆಗೆ ಯಾರನ್ನು ನಂಬಿ ಪ್ರಯೋಜನ ಇಲ್ಲ ಅಂತ ತಿಳಿದು ತಾನೇ ಹೊಸ ಪ್ಲಾನ್ ಒಂದನ್ನು ಮಾಡಿದ್ದಾರೆ. ಇವರ ಪ್ಲಾನ್ ಈಗ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಲಖೀಂಪುರ ಖೇರಿಯ ಜಹಾನ್ ನಗರ ಗ್ರಾಮದ ರೈತ ಗಜೇಂದ್ರ ಸಿಂಗ್ ಹೊಲದಲ್ಲಿ ಕರಡಿ ವೇಷ ತೊಟ್ಟು ಕೂತಿದ್ದಾರೆ. ಈ ಮೂಲಕ ಈ ರೈತ ಪ್ರತೀ ದಿನ ತಮ್ಮ ಜಮೀನಿಗೆ ದಾಳಿ ಇಡುವ ಸುಮಾರು 40-45 ಕಪಿ ಸೈನ್ಯದಿಂದ ಬೆಳೆಯನ್ನು ಕಾಪಾಡಿಕೊಳ್ಳುತ್ತಿದ್ದಾರೆ.
ಮಂಗಗಳು ಬೆಳೆಗಳಿಗೆ ಹಾನಿ ಮಾಡುವುದನ್ನು ತಡೆಯಲು 4,000 ರೂ.ಗಳಿಗೆ ಈ ವೇಷಭೂಷಣವನ್ನು ಖರೀದಿಸಿದ್ದಾರಂತೆ. ಇದೀಗಾ ರೈತ ಹೊಲದಲ್ಲಿ ಕರಡಿ ವೇಷ ತೊಟ್ಟು ಕುಳಿತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಇದು ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಸ್ಥಳೀಯ ಡಿ ಎಫ್ಒ ಸಂಜಯ್ ಬಿಸ್ವಾಲ್ ಮಂಗಗಳು ಬೆಳೆ ಹಾನಿ ಮಾಡದಂತೆ ತಡೆಯಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…