Advertisement
MIRROR FOCUS

ಪೊವಾಸನ್ ವೈರಸ್: ಟಿಕ್ ಹರಡುವ ಕಾಯಿಲೆಯ ಬಗ್ಗೆ ತಿಳಿದುಕೊಳ್ಳಬೇಕಾ? ಇಲ್ಲಿದೆ ಮಾಹಿತಿ.

Share

ಯುಎಸ್, ಕೆನಡಾ ಮತ್ತು ರಷ್ಯಾದಲ್ಲಿ ಮಾನವರಲ್ಲಿ ಪೊವಾಸನ್ ವೈರಸ್ ವರದಿಯಾಗಿದ್ದು, ಯುಎಸ್ ನಲ್ಲಿ 1 ಸಾವು ದಾಖಲಾಗಿದೆ.

Advertisement

ಪೊವಾಸನ್ ವೈರಸ್ ಎಂದರೇನು? ಟಿಕ್ ಹರಡುವ ಕಾಯಿಲೆಯ ಬಗ್ಗೆ ತಿಳಿದುಕೊಳ್ಳಬೇಕಾ? ಇಲ್ಲಿದೆ ಮಾಹಿತಿ.

ಇವು ಟಿಕ್(ಉಣ್ಣಿ)ಗಳಿಂದ ಹರಡುತ್ತವೆ. ಅಂದರೆ ಪೊವಾಸನ್ ಎಂಬುದು ಟಿಕ್ ಕಚ್ಚುವಿಕೆಯಿಂದ ಉಂಟಾಗುವ ಸಾಂಕ್ರಾಮಿಕ ಕಾಯಿಲೆಯಾಗಿದೆ. ಇದು ಅಪರೂಪದ ವೈರಸ್ ಆಗಿದ್ದು ಮೆದುಳಿನಲ್ಲಿ ಉರಿಯೂತವನ್ನು ಉಂಟುಮಾಡಬಹುದಾಗಿದೆ. ಇತ್ತೀಚಿನ ದಿನಗಳಲ್ಲಿ ಯುಎಸ್, ಕೆನಡಾ ಮತ್ತು ರಷ್ಯಾದ ಜನರಲ್ಲಿ ಈ ವೈರಸ್ ವರದಿಯಾಗಿದ್ದು, ಯುಎಸ್ ಸಗಡಾಹೋಕ್ ಕೌಂಟಿ ಎನ್ನುವ ನಿವಾಸಿಯೊಬ್ಬರು ಈ ಅಪರೂಪದ ವೈರಸ್ನಿಂದ ಸಾವನ್ನಪ್ಪಿದ್ದಾರೆ ಎಂದು ಮೈನೆ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಹೇಳಿದ್ದಾರೆ. ಹಾಗಾಗಿ ಉಣ್ಣಿಗಳಿಂದ ಹರಡುವ ಮಾರಣಾಂತಿಕ ಪೊವಾಸನ್ ವೈರಸ್ ಬಗ್ಗೆ ಆರೋಗ್ಯ ಅಧಿಕಾರಿಗಳು ಜನರನ್ನು ಎಚ್ಚರಿಸುತ್ತಿದ್ದಾರೆ. ಯುಎಸ್ನಲ್ಲಿ ಪ್ರತಿವರ್ಷ 25 ಜನರು ಸೋಂಕಿಗೆ ಒಳಗಾಗುತ್ತಾರೆ, ಈ ಸಾವು ಮೂರನೇ ಮಾರಣಾಂತಿಕ ಪ್ರಕರಣವನ್ನು ಸೂಚಿಸುತ್ತದೆ.

ಪೊವಾಸನ್ ವೈರಸ್ ಸಾಮಾನ್ಯವಾಗಿ ಸೋಂಕಿತ ಜಿಂಕೆ ಉಣ್ಣೆಗಳು, ಗ್ರೌಂಡ್ಹಾಗ್ ಉಣ್ಣೆಗಳು ಅಥವಾ ಅಳಿಲು ಉಣ್ಣೆಗಳಿಂದ ಕಚ್ಚುವ ಮೂಲಕ ಮಾನವರಿಗೆ ಹರಡುತ್ತದೆ, ಸಾಮಾನ್ಯವಾಗಿ ಉತ್ತರ ಅಮೆರಿಕದ ಗ್ರೇಟ್ ಲೇಕ್ಸ್ ಪ್ರದೇಶದಲ್ಲಿ ವಸಂತ ಕಾಲದ ಕೊನೆಯಲ್ಲಿ ಮತ್ತು ಶರತ್ಕಾಲದ ಮಧ್ಯದ ನಡುವೆ ಕಂಡುಬರುತ್ತದೆ. ಈ ಪ್ರಕರಣಗಳು ವಿರಳವಾಗಿದ್ದರೂ, ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ಪ್ರಕರಣ ದಾಖಲಾಗುತ್ತಿದೆ. ಅದಕ್ಕೂ ಹೆಚ್ಚಾಗಿ ಯುಎಸ್, ಕೆನಡಾ ಮತ್ತು ರಷ್ಯಾದಲ್ಲಿ ಪೊವಾಸನ್ ವೈರಸ್ ಸೋಂಕುಗಳು ವರದಿಯಾಗಿವೆ.
ಪೊವಾಸನ್ ವೈರಸ್ ಸೋಂಕಿತ ಜನರಲ್ಲಿ ಹೆಚ್ಚಿನವರು ಯಾವುದೇ ರೋಗಲಕ್ಷಣಗಳನ್ನು ಹೊಂದಿರುವುದಿಲ್ಲ. ರೋಗಲಕ್ಷಣಗಳನ್ನು ಹೊಂದಿರುವ ಜನರಿಗೆ, ಟಿಕ್ ಕಡಿತದಿಂದ ಅನಾರೋಗ್ಯ ಅನುಭವಿಸುವ ಸಮಯ 1 ವಾರದಿಂದ 1 ತಿಂಗಳಾಗಿರುತ್ತವೆ.

ಆರಂಭಿಕ ರೋಗಲಕ್ಷಣಗಳಲ್ಲಿ ಜ್ವರ, ತಲೆನೋವು, ವಾಂತಿ ಮತ್ತು ಸುಸ್ತು ಸೇರಿವೆ.
-ಪೊವಾಸನ್ ವೈರಸ್ ಮೆದುಳಿನ ಸೋಂಕು (ಎನ್ಸೆಫಾಲಿಟಿಸ್) ಅಥವಾ ಮೆದುಳು ಮತ್ತು ಬೆನ್ನುಹುರಿಯ ಸುತ್ತಲಿನ ಪೊರೆಗಳು (ಮೆನಿಂಜೈಟಿಸ್) ಸೇರಿದಂತೆ ತೀವ್ರ ಕಾಯಿಲೆಗೆ ಕಾರಣವಾಗಬಹುದು.
-ಗೊಂದಲ, ಅರ್ಥಮಾಡಿಕೊಳ್ಳಲು ಸಮಯ ತೆಗೆದುಕೊಳ್ಳುವುದು, ಮಾತನಾಡಲು ತೊಂದರೆ ಮತ್ತು ಸೆಳೆತಗಳು, ತೀವ್ರ ಕಾಯಿಲೆಯ ರೋಗಲಕ್ಷಣಗಳಲ್ಲಿ ಒಂದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

9 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

10 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

10 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

10 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

10 hours ago

ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ

ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…

10 hours ago