Advertisement
MIRROR FOCUS

ಪೊವಾಸನ್ ವೈರಸ್: ಟಿಕ್ ಹರಡುವ ಕಾಯಿಲೆಯ ಬಗ್ಗೆ ತಿಳಿದುಕೊಳ್ಳಬೇಕಾ? ಇಲ್ಲಿದೆ ಮಾಹಿತಿ.

Share

ಯುಎಸ್, ಕೆನಡಾ ಮತ್ತು ರಷ್ಯಾದಲ್ಲಿ ಮಾನವರಲ್ಲಿ ಪೊವಾಸನ್ ವೈರಸ್ ವರದಿಯಾಗಿದ್ದು, ಯುಎಸ್ ನಲ್ಲಿ 1 ಸಾವು ದಾಖಲಾಗಿದೆ.

ಪೊವಾಸನ್ ವೈರಸ್ ಎಂದರೇನು? ಟಿಕ್ ಹರಡುವ ಕಾಯಿಲೆಯ ಬಗ್ಗೆ ತಿಳಿದುಕೊಳ್ಳಬೇಕಾ? ಇಲ್ಲಿದೆ ಮಾಹಿತಿ.

Advertisement

ಇವು ಟಿಕ್(ಉಣ್ಣಿ)ಗಳಿಂದ ಹರಡುತ್ತವೆ. ಅಂದರೆ ಪೊವಾಸನ್ ಎಂಬುದು ಟಿಕ್ ಕಚ್ಚುವಿಕೆಯಿಂದ ಉಂಟಾಗುವ ಸಾಂಕ್ರಾಮಿಕ ಕಾಯಿಲೆಯಾಗಿದೆ. ಇದು ಅಪರೂಪದ ವೈರಸ್ ಆಗಿದ್ದು ಮೆದುಳಿನಲ್ಲಿ ಉರಿಯೂತವನ್ನು ಉಂಟುಮಾಡಬಹುದಾಗಿದೆ. ಇತ್ತೀಚಿನ ದಿನಗಳಲ್ಲಿ ಯುಎಸ್, ಕೆನಡಾ ಮತ್ತು ರಷ್ಯಾದ ಜನರಲ್ಲಿ ಈ ವೈರಸ್ ವರದಿಯಾಗಿದ್ದು, ಯುಎಸ್ ಸಗಡಾಹೋಕ್ ಕೌಂಟಿ ಎನ್ನುವ ನಿವಾಸಿಯೊಬ್ಬರು ಈ ಅಪರೂಪದ ವೈರಸ್ನಿಂದ ಸಾವನ್ನಪ್ಪಿದ್ದಾರೆ ಎಂದು ಮೈನೆ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಹೇಳಿದ್ದಾರೆ. ಹಾಗಾಗಿ ಉಣ್ಣಿಗಳಿಂದ ಹರಡುವ ಮಾರಣಾಂತಿಕ ಪೊವಾಸನ್ ವೈರಸ್ ಬಗ್ಗೆ ಆರೋಗ್ಯ ಅಧಿಕಾರಿಗಳು ಜನರನ್ನು ಎಚ್ಚರಿಸುತ್ತಿದ್ದಾರೆ. ಯುಎಸ್ನಲ್ಲಿ ಪ್ರತಿವರ್ಷ 25 ಜನರು ಸೋಂಕಿಗೆ ಒಳಗಾಗುತ್ತಾರೆ, ಈ ಸಾವು ಮೂರನೇ ಮಾರಣಾಂತಿಕ ಪ್ರಕರಣವನ್ನು ಸೂಚಿಸುತ್ತದೆ.

ಪೊವಾಸನ್ ವೈರಸ್ ಸಾಮಾನ್ಯವಾಗಿ ಸೋಂಕಿತ ಜಿಂಕೆ ಉಣ್ಣೆಗಳು, ಗ್ರೌಂಡ್ಹಾಗ್ ಉಣ್ಣೆಗಳು ಅಥವಾ ಅಳಿಲು ಉಣ್ಣೆಗಳಿಂದ ಕಚ್ಚುವ ಮೂಲಕ ಮಾನವರಿಗೆ ಹರಡುತ್ತದೆ, ಸಾಮಾನ್ಯವಾಗಿ ಉತ್ತರ ಅಮೆರಿಕದ ಗ್ರೇಟ್ ಲೇಕ್ಸ್ ಪ್ರದೇಶದಲ್ಲಿ ವಸಂತ ಕಾಲದ ಕೊನೆಯಲ್ಲಿ ಮತ್ತು ಶರತ್ಕಾಲದ ಮಧ್ಯದ ನಡುವೆ ಕಂಡುಬರುತ್ತದೆ. ಈ ಪ್ರಕರಣಗಳು ವಿರಳವಾಗಿದ್ದರೂ, ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ಪ್ರಕರಣ ದಾಖಲಾಗುತ್ತಿದೆ. ಅದಕ್ಕೂ ಹೆಚ್ಚಾಗಿ ಯುಎಸ್, ಕೆನಡಾ ಮತ್ತು ರಷ್ಯಾದಲ್ಲಿ ಪೊವಾಸನ್ ವೈರಸ್ ಸೋಂಕುಗಳು ವರದಿಯಾಗಿವೆ.
ಪೊವಾಸನ್ ವೈರಸ್ ಸೋಂಕಿತ ಜನರಲ್ಲಿ ಹೆಚ್ಚಿನವರು ಯಾವುದೇ ರೋಗಲಕ್ಷಣಗಳನ್ನು ಹೊಂದಿರುವುದಿಲ್ಲ. ರೋಗಲಕ್ಷಣಗಳನ್ನು ಹೊಂದಿರುವ ಜನರಿಗೆ, ಟಿಕ್ ಕಡಿತದಿಂದ ಅನಾರೋಗ್ಯ ಅನುಭವಿಸುವ ಸಮಯ 1 ವಾರದಿಂದ 1 ತಿಂಗಳಾಗಿರುತ್ತವೆ.

Advertisement

ಆರಂಭಿಕ ರೋಗಲಕ್ಷಣಗಳಲ್ಲಿ ಜ್ವರ, ತಲೆನೋವು, ವಾಂತಿ ಮತ್ತು ಸುಸ್ತು ಸೇರಿವೆ.
-ಪೊವಾಸನ್ ವೈರಸ್ ಮೆದುಳಿನ ಸೋಂಕು (ಎನ್ಸೆಫಾಲಿಟಿಸ್) ಅಥವಾ ಮೆದುಳು ಮತ್ತು ಬೆನ್ನುಹುರಿಯ ಸುತ್ತಲಿನ ಪೊರೆಗಳು (ಮೆನಿಂಜೈಟಿಸ್) ಸೇರಿದಂತೆ ತೀವ್ರ ಕಾಯಿಲೆಗೆ ಕಾರಣವಾಗಬಹುದು.
-ಗೊಂದಲ, ಅರ್ಥಮಾಡಿಕೊಳ್ಳಲು ಸಮಯ ತೆಗೆದುಕೊಳ್ಳುವುದು, ಮಾತನಾಡಲು ತೊಂದರೆ ಮತ್ತು ಸೆಳೆತಗಳು, ತೀವ್ರ ಕಾಯಿಲೆಯ ರೋಗಲಕ್ಷಣಗಳಲ್ಲಿ ಒಂದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…

13 hours ago

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

1 day ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

1 day ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

2 days ago