ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು(ನ.21) ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪೆಟ್ರೋಲಿಯಂ ವಿಶ್ವವಿದ್ಯಾಲಯದ ಮೊನೊಕ್ರಿಸ್ಟಲೈನ್ ಸೋಲಾರ್ ಫೋಟೋ ವಲ್ಟೈಕ್ ಪ್ಯಾನಲ್ ನ 45 ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ಘಟಕವನ್ನು ವರ್ಚುವಲ್ ಕಾರ್ಯಕ್ರಮದ ಮೂಲಕ ಉದ್ಘಾಟಿಸಿ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಕೊರೊನಾದ ಕಾಲದಲ್ಲಿ ಇಂಧನ ವಲಯದಲ್ಲಿ ಬಹಳ ಸವಾಲುಗಳು, ಸಮಸ್ಯೆಗಳು ಇರುವ ಸಂದರ್ಭದಲ್ಲಿ ಇಂಧನ ವಲಯ ಕ್ಷೇತ್ರಕ್ಕೆ ಕಾಲಿಟ್ಟಿದ್ದೀರಿ, ಈ ಸಮಯದಲ್ಲಿ ಉದ್ಯಮಶೀಲರಾಗಿ ಬೆಳೆಯಲು ನಿಮ್ಮ ಮುಂದೆ ಸಾಕಷ್ಟು ಅವಕಾಶಗಳಿವೆ. ದೇಶದಲ್ಲಿ ಇಂಗಾಲದ ಬಳಕೆಯನ್ನು ಕಡಿಮೆ ಮಾಡುವ ಗುರಿಯಿದ್ದು, ಆ ನಿಟ್ಟಿನಲ್ಲಿ ಉತ್ಪಾದನೆ ಶೇಕಡಾ 30ರಿಂದ 35ರಷ್ಟು ಕಡಿಮೆಯಾಗಬೇಕಿದೆ. ಈ ದಶಕದಲ್ಲಿ ಇಂಧನ ಅಗತ್ಯಗಳಿಗೆ ನೈಸರ್ಗಿಕ ಅನಿಲವನ್ನು 4 ಪಟ್ಟು ಹೆಚ್ಚು ಬಳಕೆ ಮಾಡುವ ಅಗತ್ಯವಿದೆ ಎಂದು ಅವರು ಹೇಳಿದರು.
21ನೇ ಶತಮಾನದ ಯುವಜನತೆ ನಿಷ್ಕಳಂಕವಾಗಿ ಸ್ವಚ್ಛ ಮನಸ್ಸು, ಹೃದಯದಿಂದ ಸ್ಪಷ್ಟ ಗುರಿ ಮತ್ತು ಉದ್ದೇಶದೊಂದಿಗೆ ಮುಂದೆ ಸಾಗಬೇಕು. ಮನುಷ್ಯನಿಗೆ ಜವಾಬ್ದಾರಿ ಬಂದರೆ ಜೀವನದಲ್ಲಿ ಅವಕಾಶಗಳು ಸಿಗುತ್ತವೆ. ಹೊರೆಯ ಭಾವವನ್ನು ಇಟ್ಟುಕೊಂಡು ಬದುಕುವವರು ಯಾವತ್ತಿಗೂ ಉದ್ಧಾರವಾಗುವುದಿಲ್ಲ, ಜೀವನದಲ್ಲಿ ಸೋಲುತ್ತಾರೆ ಎಂದು ಮೋದಿಯವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
05.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಧ್ರುವದ…
ಪುತ್ತೂರಿನ ಪ್ರಕರಣವೊಂದು ರಾಜ್ಯಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ನಡುವೆ ರಾಜಕೀಯವಾಗಿಯೂ ಇದೊಂದು ಚರ್ಚೆ, ಆರೋಪಗಳಿಗೂ…
ಭಾರತದ ರಾಸಾಯನಿಕ ವಲಯವು ಒಟ್ಟು ದೇಶೀಯ ಉತ್ಪನ್ನ ಕೊಡುಗೆಯಲ್ಲಿ ಗಮನಾರ್ಹ ಪಾತ್ರ ವಹಿಸುತ್ತಿದೆ.…
ರಾಯರ ಪರಮಭಕ್ತರದ ಜ್ಯೋತಿಷಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ 9535156490
ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ ಜಮ್ಮು ಮತ್ತು ಕಾಶ್ಮೀರದ…
ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು…