ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ಹಾಗೂ ಎಸೆಯುವುದು ಕಡಿಮೆ ಮಾಡಲು ಪುಣೆಯ ಪಿಂಪ್ರಿ ಚಿಂಚ್ವಾಡ್ ಮುನ್ಸಿಪಲ್ ಅಧಿಕಾರಿಗಳು ವಿನೂತನ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದಾರೆ. ಇದರ ಭಾಗವಾಗಿ ಪೂನಾದಲ್ಲಿ ಮೂರು ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಅಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನು ಕೊಟ್ಟರೆ ವಡಾ ಪಾವ್ ಅನ್ನು ಉಚಿತವಾಗಿ ಪಡೆಯಬಹುದು ಎಂದು ಮಾಹಿತಿ ನೀಡಿದ್ದಾರೆ.
ಇದನ್ನು ಗಮನಿಸಿ ಅನೇಕರು ಪ್ರತಿದಿನ ಪ್ಲಾಸ್ಟಿಕ್ ಬಾಟಲಿಗಳನ್ನು ತಂದು ಕೊಡುತ್ತಿದ್ದಾರೆ. ನಂತರ ಇಲ್ಲಿಂದ ವಡಾ ಪಾವ್ ಮತ್ತು ಚಹಾವನ್ನು ತೆಗೆದುಕೊಂಡು ಕುಡಿಯುತ್ತಾರೆ. ಈ ವಿಶೇಷ ಮಳಿಗೆಗಳಿಗೆ ಪಿಂಪ್ರಿ ಚಿಂಚ್ವಾಡ್ ಮುನ್ಸಿಪಲ್ ಕಾರ್ಪೊರೇಶನ್ನಿಂದ ಹಣ ನೀಡಲಾಗುತ್ತದೆ.
ಸ್ವೀಕರಿಸಿದ ಪ್ಲಾಸ್ಟಿಕ್ ಮರುಬಳಕೆಗಾಗಿ ಕೆಲವು ಕಂಪನಿಗಳಿಗೆ ಹಿಂತಿರುಗಿಸಲಾಗುತ್ತದೆ. ಇದರಿಂದ ಜನರು ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಎಸೆಯುವುದನ್ನು ತಡೆಯಬಹುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ಈ ಆದೇಶದಲ್ಲಿ ಯಶವಂತ್ ರಾವ್ ಚವ್ಹಾಣ ಮಾರ್ಗ ಪಿಂಪ್ರಿ, ಕೇಶವ ನಗರ ಶಾಸ್ತ್ರಿನಗರ ಕಾಸರ್ ವಾಡಿ ಮತ್ತು ಸಂತ ಗಜಾನನ ಮಂದಿರ ಚಿಂಚ್ ವಾಡಾದಲ್ಲಿ ಶಾಖೆಗಳನ್ನು ಸ್ಥಾಪಿಸಲಾಗಿದೆ ಎಂದು ಮುಖ್ಯ ಆರೋಗ್ಯಾಧಿಕಾರಿ ಡಾ.ಅನಿಲ್ ರಾಯ್ ತಿಳಿಸಿದ್ದಾರೆ. ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದರು. ಮುಂದಿನ ದಿನಗಳಲ್ಲಿ ಇನ್ನಷ್ಟು ಮಳಿಗೆಗಳನ್ನು ತೆರೆಯಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…