Advertisement
ರಾಜ್ಯ

ಪ್ಲಾಸ್ಟಿಕ್ ಬಾಟಲಿ ಕೊಟ್ಟವರಿಗೆ ಇಲ್ಲಿ ಉಚಿತವಾಗಿ ವಡಾ ಪಾವ್ ಹಾಗೂ ಟೀ…! | ಪರಿಸರ ಕಾಳಜಿಗೆ ವಿಶೇಷ ಪ್ರಯತ್ನ |

Share

ಪ್ಲಾಸ್ಟಿಕ್  ಬಳಕೆ ಕಡಿಮೆ ಮಾಡಲು ಹಾಗೂ ಎಸೆಯುವುದು ಕಡಿಮೆ ಮಾಡಲು ಪುಣೆಯ ಪಿಂಪ್ರಿ ಚಿಂಚ್ವಾಡ್ ಮುನ್ಸಿಪಲ್ ಅಧಿಕಾರಿಗಳು ವಿನೂತನ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದಾರೆ. ಇದರ ಭಾಗವಾಗಿ ಪೂನಾದಲ್ಲಿ ಮೂರು ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಅಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನು ಕೊಟ್ಟರೆ ವಡಾ ಪಾವ್ ಅನ್ನು ಉಚಿತವಾಗಿ ಪಡೆಯಬಹುದು ಎಂದು ಮಾಹಿತಿ ನೀಡಿದ್ದಾರೆ.

ಇದನ್ನು ಗಮನಿಸಿ ಅನೇಕರು ಪ್ರತಿದಿನ ಪ್ಲಾಸ್ಟಿಕ್ ಬಾಟಲಿಗಳನ್ನು ತಂದು ಕೊಡುತ್ತಿದ್ದಾರೆ. ನಂತರ ಇಲ್ಲಿಂದ ವಡಾ ಪಾವ್ ಮತ್ತು ಚಹಾವನ್ನು ತೆಗೆದುಕೊಂಡು ಕುಡಿಯುತ್ತಾರೆ. ಈ ವಿಶೇಷ ಮಳಿಗೆಗಳಿಗೆ ಪಿಂಪ್ರಿ ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಶನ್‌ನಿಂದ ಹಣ ನೀಡಲಾಗುತ್ತದೆ.

ಸ್ವೀಕರಿಸಿದ ಪ್ಲಾಸ್ಟಿಕ್  ಮರುಬಳಕೆಗಾಗಿ  ಕೆಲವು ಕಂಪನಿಗಳಿಗೆ ಹಿಂತಿರುಗಿಸಲಾಗುತ್ತದೆ. ಇದರಿಂದ ಜನರು ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಎಸೆಯುವುದನ್ನು ತಡೆಯಬಹುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ಈ ಆದೇಶದಲ್ಲಿ ಯಶವಂತ್ ರಾವ್ ಚವ್ಹಾಣ ಮಾರ್ಗ ಪಿಂಪ್ರಿ, ಕೇಶವ ನಗರ ಶಾಸ್ತ್ರಿನಗರ ಕಾಸರ್ ವಾಡಿ ಮತ್ತು ಸಂತ ಗಜಾನನ ಮಂದಿರ ಚಿಂಚ್ ವಾಡಾದಲ್ಲಿ ಶಾಖೆಗಳನ್ನು ಸ್ಥಾಪಿಸಲಾಗಿದೆ ಎಂದು ಮುಖ್ಯ ಆರೋಗ್ಯಾಧಿಕಾರಿ ಡಾ.ಅನಿಲ್ ರಾಯ್ ತಿಳಿಸಿದ್ದಾರೆ. ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದರು. ಮುಂದಿನ ದಿನಗಳಲ್ಲಿ ಇನ್ನಷ್ಟು ಮಳಿಗೆಗಳನ್ನು ತೆರೆಯಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

13 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

20 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago