ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ಹಾಗೂ ಎಸೆಯುವುದು ಕಡಿಮೆ ಮಾಡಲು ಪುಣೆಯ ಪಿಂಪ್ರಿ ಚಿಂಚ್ವಾಡ್ ಮುನ್ಸಿಪಲ್ ಅಧಿಕಾರಿಗಳು ವಿನೂತನ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದಾರೆ. ಇದರ ಭಾಗವಾಗಿ ಪೂನಾದಲ್ಲಿ ಮೂರು ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಅಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನು ಕೊಟ್ಟರೆ ವಡಾ ಪಾವ್ ಅನ್ನು ಉಚಿತವಾಗಿ ಪಡೆಯಬಹುದು ಎಂದು ಮಾಹಿತಿ ನೀಡಿದ್ದಾರೆ.
ಇದನ್ನು ಗಮನಿಸಿ ಅನೇಕರು ಪ್ರತಿದಿನ ಪ್ಲಾಸ್ಟಿಕ್ ಬಾಟಲಿಗಳನ್ನು ತಂದು ಕೊಡುತ್ತಿದ್ದಾರೆ. ನಂತರ ಇಲ್ಲಿಂದ ವಡಾ ಪಾವ್ ಮತ್ತು ಚಹಾವನ್ನು ತೆಗೆದುಕೊಂಡು ಕುಡಿಯುತ್ತಾರೆ. ಈ ವಿಶೇಷ ಮಳಿಗೆಗಳಿಗೆ ಪಿಂಪ್ರಿ ಚಿಂಚ್ವಾಡ್ ಮುನ್ಸಿಪಲ್ ಕಾರ್ಪೊರೇಶನ್ನಿಂದ ಹಣ ನೀಡಲಾಗುತ್ತದೆ.
ಸ್ವೀಕರಿಸಿದ ಪ್ಲಾಸ್ಟಿಕ್ ಮರುಬಳಕೆಗಾಗಿ ಕೆಲವು ಕಂಪನಿಗಳಿಗೆ ಹಿಂತಿರುಗಿಸಲಾಗುತ್ತದೆ. ಇದರಿಂದ ಜನರು ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಎಸೆಯುವುದನ್ನು ತಡೆಯಬಹುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ಈ ಆದೇಶದಲ್ಲಿ ಯಶವಂತ್ ರಾವ್ ಚವ್ಹಾಣ ಮಾರ್ಗ ಪಿಂಪ್ರಿ, ಕೇಶವ ನಗರ ಶಾಸ್ತ್ರಿನಗರ ಕಾಸರ್ ವಾಡಿ ಮತ್ತು ಸಂತ ಗಜಾನನ ಮಂದಿರ ಚಿಂಚ್ ವಾಡಾದಲ್ಲಿ ಶಾಖೆಗಳನ್ನು ಸ್ಥಾಪಿಸಲಾಗಿದೆ ಎಂದು ಮುಖ್ಯ ಆರೋಗ್ಯಾಧಿಕಾರಿ ಡಾ.ಅನಿಲ್ ರಾಯ್ ತಿಳಿಸಿದ್ದಾರೆ. ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದರು. ಮುಂದಿನ ದಿನಗಳಲ್ಲಿ ಇನ್ನಷ್ಟು ಮಳಿಗೆಗಳನ್ನು ತೆರೆಯಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…