ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ಹಾಗೂ ಎಸೆಯುವುದು ಕಡಿಮೆ ಮಾಡಲು ಪುಣೆಯ ಪಿಂಪ್ರಿ ಚಿಂಚ್ವಾಡ್ ಮುನ್ಸಿಪಲ್ ಅಧಿಕಾರಿಗಳು ವಿನೂತನ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದಾರೆ. ಇದರ ಭಾಗವಾಗಿ ಪೂನಾದಲ್ಲಿ ಮೂರು ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಅಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನು ಕೊಟ್ಟರೆ ವಡಾ ಪಾವ್ ಅನ್ನು ಉಚಿತವಾಗಿ ಪಡೆಯಬಹುದು ಎಂದು ಮಾಹಿತಿ ನೀಡಿದ್ದಾರೆ.
ಇದನ್ನು ಗಮನಿಸಿ ಅನೇಕರು ಪ್ರತಿದಿನ ಪ್ಲಾಸ್ಟಿಕ್ ಬಾಟಲಿಗಳನ್ನು ತಂದು ಕೊಡುತ್ತಿದ್ದಾರೆ. ನಂತರ ಇಲ್ಲಿಂದ ವಡಾ ಪಾವ್ ಮತ್ತು ಚಹಾವನ್ನು ತೆಗೆದುಕೊಂಡು ಕುಡಿಯುತ್ತಾರೆ. ಈ ವಿಶೇಷ ಮಳಿಗೆಗಳಿಗೆ ಪಿಂಪ್ರಿ ಚಿಂಚ್ವಾಡ್ ಮುನ್ಸಿಪಲ್ ಕಾರ್ಪೊರೇಶನ್ನಿಂದ ಹಣ ನೀಡಲಾಗುತ್ತದೆ.
ಸ್ವೀಕರಿಸಿದ ಪ್ಲಾಸ್ಟಿಕ್ ಮರುಬಳಕೆಗಾಗಿ ಕೆಲವು ಕಂಪನಿಗಳಿಗೆ ಹಿಂತಿರುಗಿಸಲಾಗುತ್ತದೆ. ಇದರಿಂದ ಜನರು ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಎಸೆಯುವುದನ್ನು ತಡೆಯಬಹುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ಈ ಆದೇಶದಲ್ಲಿ ಯಶವಂತ್ ರಾವ್ ಚವ್ಹಾಣ ಮಾರ್ಗ ಪಿಂಪ್ರಿ, ಕೇಶವ ನಗರ ಶಾಸ್ತ್ರಿನಗರ ಕಾಸರ್ ವಾಡಿ ಮತ್ತು ಸಂತ ಗಜಾನನ ಮಂದಿರ ಚಿಂಚ್ ವಾಡಾದಲ್ಲಿ ಶಾಖೆಗಳನ್ನು ಸ್ಥಾಪಿಸಲಾಗಿದೆ ಎಂದು ಮುಖ್ಯ ಆರೋಗ್ಯಾಧಿಕಾರಿ ಡಾ.ಅನಿಲ್ ರಾಯ್ ತಿಳಿಸಿದ್ದಾರೆ. ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದರು. ಮುಂದಿನ ದಿನಗಳಲ್ಲಿ ಇನ್ನಷ್ಟು ಮಳಿಗೆಗಳನ್ನು ತೆರೆಯಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…