ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ಹಾಗೂ ಎಸೆಯುವುದು ಕಡಿಮೆ ಮಾಡಲು ಪುಣೆಯ ಪಿಂಪ್ರಿ ಚಿಂಚ್ವಾಡ್ ಮುನ್ಸಿಪಲ್ ಅಧಿಕಾರಿಗಳು ವಿನೂತನ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದಾರೆ. ಇದರ ಭಾಗವಾಗಿ ಪೂನಾದಲ್ಲಿ ಮೂರು ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಅಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನು ಕೊಟ್ಟರೆ ವಡಾ ಪಾವ್ ಅನ್ನು ಉಚಿತವಾಗಿ ಪಡೆಯಬಹುದು ಎಂದು ಮಾಹಿತಿ ನೀಡಿದ್ದಾರೆ.
ಇದನ್ನು ಗಮನಿಸಿ ಅನೇಕರು ಪ್ರತಿದಿನ ಪ್ಲಾಸ್ಟಿಕ್ ಬಾಟಲಿಗಳನ್ನು ತಂದು ಕೊಡುತ್ತಿದ್ದಾರೆ. ನಂತರ ಇಲ್ಲಿಂದ ವಡಾ ಪಾವ್ ಮತ್ತು ಚಹಾವನ್ನು ತೆಗೆದುಕೊಂಡು ಕುಡಿಯುತ್ತಾರೆ. ಈ ವಿಶೇಷ ಮಳಿಗೆಗಳಿಗೆ ಪಿಂಪ್ರಿ ಚಿಂಚ್ವಾಡ್ ಮುನ್ಸಿಪಲ್ ಕಾರ್ಪೊರೇಶನ್ನಿಂದ ಹಣ ನೀಡಲಾಗುತ್ತದೆ.
ಸ್ವೀಕರಿಸಿದ ಪ್ಲಾಸ್ಟಿಕ್ ಮರುಬಳಕೆಗಾಗಿ ಕೆಲವು ಕಂಪನಿಗಳಿಗೆ ಹಿಂತಿರುಗಿಸಲಾಗುತ್ತದೆ. ಇದರಿಂದ ಜನರು ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಎಸೆಯುವುದನ್ನು ತಡೆಯಬಹುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ಈ ಆದೇಶದಲ್ಲಿ ಯಶವಂತ್ ರಾವ್ ಚವ್ಹಾಣ ಮಾರ್ಗ ಪಿಂಪ್ರಿ, ಕೇಶವ ನಗರ ಶಾಸ್ತ್ರಿನಗರ ಕಾಸರ್ ವಾಡಿ ಮತ್ತು ಸಂತ ಗಜಾನನ ಮಂದಿರ ಚಿಂಚ್ ವಾಡಾದಲ್ಲಿ ಶಾಖೆಗಳನ್ನು ಸ್ಥಾಪಿಸಲಾಗಿದೆ ಎಂದು ಮುಖ್ಯ ಆರೋಗ್ಯಾಧಿಕಾರಿ ಡಾ.ಅನಿಲ್ ರಾಯ್ ತಿಳಿಸಿದ್ದಾರೆ. ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದರು. ಮುಂದಿನ ದಿನಗಳಲ್ಲಿ ಇನ್ನಷ್ಟು ಮಳಿಗೆಗಳನ್ನು ತೆರೆಯಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…