Advertisement
ರಾಜ್ಯ

ಪುಟ್ಟ ತಂಗಿಯನ್ನು ಮಡಿಲಿನಲ್ಲಿ ಇರಿಸಿಕೊಂಡು ಪಾಠ ಕೇಳುವ 10 ವರ್ಷದ ಬಾಲಕಿ…! |

Share

ಮಣಿಪುರಿ 10 ವರ್ಷದ ಬಾಲಕಿ ತನ್ನ ತಂಗಿಯನ್ನು ತನ್ನ ಮಡಿಲಲ್ಲಿಟ್ಟುಕೊಂಡು ಶಾಲೆಗೆ ಹೋಗುತ್ತಿರುವ ಫೋಟೋ ಗಮನ ಸೆಳೆದಿದೆ. ತಂಗಿಯನ್ನು ಮಡಿಲಿನಲ್ಲಿಯೇ ಇಟ್ಟುಕೊಂಡು ಪಾಠ ಸಹ ಕೇಳಿದ್ದಾಳೆ. ಈ ಫೋಟೋವನ್ನು ಮಣಿಪುರದ ವಿದ್ಯುತ್, ಅರಣ್ಯ ಮತ್ತು ಪರಿಸರ ಸಚಿವ ಟಿ. ಬಿಸ್ವಜಿತ್ ಸಿಂಗ್ ತಮ್ಮ ಟ್ವಿಟರ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಈ ವಿದ್ಯಾರ್ಥಿನಿ 4 ನೇ ತರಗತಿಯಲ್ಲಿ ಓದುತ್ತಿದ್ದು, ಹೆಸರು ಮೈನಿಂಗ್‌ ಸಿನ್ಲಿಯು ಪಮೇಯ್. ಈಕೆಯ ಪೋಷಕರ ಕೃಷಿ ಕಾರ್ಮಿಕರಾಗಿದ್ದು, ದಿನ ನಿತ್ಯ ಕೆಲಸಕ್ಕೆ ಹೋಗಲೇಬೇಕು. ಆದ್ದರಿಂದ ಮೈನಿಂಗ್‌ ಸಿನ್ಲಿಯು ಪಮೇಯ್ ತನ್ನ ಪುಟ್ಟ ತಂಗಿಯನ್ನು ಕಂಕುಳಲ್ಲಿ ಕಟ್ಟಿಕೊಂಡು ಶಾಲೆಗೆ ಹೋಗಿದ್ದಾಳೆ. ಈ ಫೋಟೋ ನೋಡಿದ  ಟಿ. ಬಿಸ್ವಜಿತ್ ಸಿಂಗ್ ಅವರು ಬಾಲಕಿ ಹಾಗೂ ಆಕೆಯ ಪೋಷಕರನ್ನು ಸಂಪರ್ಕಿಸಿ ರಾಜಧಾನಿ ಇಂಫಾಲ್ ಗೆ ಕರೆ ತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೈನಿಂಗ್‌ ಸಿನ್ಲಿಯ ಪದವಿವರೆಗಿನ ಶಿಕ್ಷಣದ ಜವಾಬ್ದಾರಿಯನ್ನು ತೆಗೆದುಕೊಳ್ಳುವದಾಗಿ ಸಚಿವರು ಹೇಳಿದ್ದಾರೆ.

ಈ ಹೃದಯ ಸ್ಪರ್ಶಿ ಫೋಟೋ ನೆಟ್ಟಿಗರನ್ನು ಮೂಕವಿಸ್ಮಿತರನ್ನಾಗಿ ಮಾಡಿದೆ. ಅಷ್ಟು ಚಿಕ್ಕ ಬಾಲಕಿಯ ತನ್ನ ಜವಾಬ್ದಾರಿಯಿಂದ ನುಣಚಿಕೊಳ್ಳದೇ ಶಿಕ್ಷಣ ಪಡೆಯುವ ಆಕೆಯ ಹಂಬಲವನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

3 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

11 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

13 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

19 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

20 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago