Advertisement
ರಾಜ್ಯ

ಪುಟ್ಟ ತಂಗಿಯನ್ನು ಮಡಿಲಿನಲ್ಲಿ ಇರಿಸಿಕೊಂಡು ಪಾಠ ಕೇಳುವ 10 ವರ್ಷದ ಬಾಲಕಿ…! |

Share

ಮಣಿಪುರಿ 10 ವರ್ಷದ ಬಾಲಕಿ ತನ್ನ ತಂಗಿಯನ್ನು ತನ್ನ ಮಡಿಲಲ್ಲಿಟ್ಟುಕೊಂಡು ಶಾಲೆಗೆ ಹೋಗುತ್ತಿರುವ ಫೋಟೋ ಗಮನ ಸೆಳೆದಿದೆ. ತಂಗಿಯನ್ನು ಮಡಿಲಿನಲ್ಲಿಯೇ ಇಟ್ಟುಕೊಂಡು ಪಾಠ ಸಹ ಕೇಳಿದ್ದಾಳೆ. ಈ ಫೋಟೋವನ್ನು ಮಣಿಪುರದ ವಿದ್ಯುತ್, ಅರಣ್ಯ ಮತ್ತು ಪರಿಸರ ಸಚಿವ ಟಿ. ಬಿಸ್ವಜಿತ್ ಸಿಂಗ್ ತಮ್ಮ ಟ್ವಿಟರ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಈ ವಿದ್ಯಾರ್ಥಿನಿ 4 ನೇ ತರಗತಿಯಲ್ಲಿ ಓದುತ್ತಿದ್ದು, ಹೆಸರು ಮೈನಿಂಗ್‌ ಸಿನ್ಲಿಯು ಪಮೇಯ್. ಈಕೆಯ ಪೋಷಕರ ಕೃಷಿ ಕಾರ್ಮಿಕರಾಗಿದ್ದು, ದಿನ ನಿತ್ಯ ಕೆಲಸಕ್ಕೆ ಹೋಗಲೇಬೇಕು. ಆದ್ದರಿಂದ ಮೈನಿಂಗ್‌ ಸಿನ್ಲಿಯು ಪಮೇಯ್ ತನ್ನ ಪುಟ್ಟ ತಂಗಿಯನ್ನು ಕಂಕುಳಲ್ಲಿ ಕಟ್ಟಿಕೊಂಡು ಶಾಲೆಗೆ ಹೋಗಿದ್ದಾಳೆ. ಈ ಫೋಟೋ ನೋಡಿದ  ಟಿ. ಬಿಸ್ವಜಿತ್ ಸಿಂಗ್ ಅವರು ಬಾಲಕಿ ಹಾಗೂ ಆಕೆಯ ಪೋಷಕರನ್ನು ಸಂಪರ್ಕಿಸಿ ರಾಜಧಾನಿ ಇಂಫಾಲ್ ಗೆ ಕರೆ ತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೈನಿಂಗ್‌ ಸಿನ್ಲಿಯ ಪದವಿವರೆಗಿನ ಶಿಕ್ಷಣದ ಜವಾಬ್ದಾರಿಯನ್ನು ತೆಗೆದುಕೊಳ್ಳುವದಾಗಿ ಸಚಿವರು ಹೇಳಿದ್ದಾರೆ.

ಈ ಹೃದಯ ಸ್ಪರ್ಶಿ ಫೋಟೋ ನೆಟ್ಟಿಗರನ್ನು ಮೂಕವಿಸ್ಮಿತರನ್ನಾಗಿ ಮಾಡಿದೆ. ಅಷ್ಟು ಚಿಕ್ಕ ಬಾಲಕಿಯ ತನ್ನ ಜವಾಬ್ದಾರಿಯಿಂದ ನುಣಚಿಕೊಳ್ಳದೇ ಶಿಕ್ಷಣ ಪಡೆಯುವ ಆಕೆಯ ಹಂಬಲವನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago