Advertisement
ಸುದ್ದಿಗಳು

ಅಹಿಂಸಾ ಚೇತನ ವೀಸಾ ರದ್ದು : ಅಮೆರಿಕಕ್ಕೆ ಹೋಗಲ್ಲ, ಭಾರತದಲ್ಲೇ ಇರ್ತೀನಿ – ಚೇತನ್

Share

ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಕಾರಣ ನೀಡಿ ನಟ, ಸಾಮಾಜಿಕ ಹೋರಾಟಗಾರ ಚೇತನ್  ಅವರ ವೀಸಾವನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ಈ ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿರುವ ಚೇತನ್ ಉದ್ದೇಶಪೂರ್ವಕವಾಗಿ ನನ್ನ ಮೇಲೆ ಈ ರೀತಿ ಪಿತೂರಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಚೇತನ್, ನಾನು ಹುಟ್ಟಿ, ಓದಿದ್ದು ಅಮೆರಿಕದಲ್ಲಿ ಆದರೂ ಕಾರ್ಯನಿರ್ವಹಿಸಲು ಭಾರತಕ್ಕೆ  ಬಂದೆ. ಸಿನಿಮಾ ಸೇರಿದಂತೆ ಸಾಕಷ್ಟು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹೋರಾಟ ಮಾಡಿ ಆದಿವಾಸಿಗಳಿಗೆ 528 ಮನೆಗಳನ್ನು ಕಟ್ಟಿಸಿದ್ದೇನೆ. ನನ್ನ ಸಿದ್ಧಾಂತ, ಅಂಬೇಡ್ಕರ್ ವಾದ, ಪೆರಿಯರ್ ವಾದ ಸರ್ಕಾರಕ್ಕೆ ಇಷ್ಟವಾಗಿಲ್ಲ ಎಂದು ಈ ರೀತಿ ಕ್ರಮ ಕೈಗೊಂಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಬ್ರಾಹ್ಮಣ್ಯ ಲಾಬಿ ಎನ್ನುವ ಮಾತು ಹೇಳಿದ್ದಕ್ಕೆ ಕೇಸ್ ಹಾಕಿದ್ರು. ಗನ್ ಮ್ಯಾನ್‌ನನ್ನು ಒಂದೂವರೆ ವರ್ಷದ ಹಿಂದೆಯೇ ತೆಗೆದಿದ್ದಾರೆ. ಒಂದು ಸತ್ಯದ ಟ್ವೀಟ್ ಮಾಡಿದ್ದಕ್ಕೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎಂದು ಹೇಳಿ 3 ದಿನ ಜೈಲಿಗೆ ಕಳುಹಿಸಿದರು. ಸಾಗರೋತ್ತರ ವೀಸಾ (OCI) ನನಗೆ ನೀಡಿದ್ದಾರೆ. ಇದರಲ್ಲಿ ಮತ ಹಾಕುವುದು, ಚುನಾವಣೆಗೆ ನಿಲ್ಲುವುದು, ಸರ್ಕಾರಿ ನೌಕರನಾಗಿ ಕೆಲಸ ಮಾಡುವುದು ಬಿಟ್ಟರೆ ಬೇರೆ ಎಲ್ಲಾ ಹಕ್ಕು ನನಗೆ ಇದೆ ಎಂದು ತಿಳಿಸಿದರು.

ಕಳೆದ 10 ತಿಂಗಳ ಹಿಂದೆ ಕ್ರಿಮಿನಲ್ ಕೆಲಸಗಳಲ್ಲಿ ಭಾಗಿಯಾಗುತ್ತಿದ್ದೀರಿ, ನಿಮ್ಮ ವೀಸಾ ರದ್ದು ಮಾಡಬಹುದು ಎಂಬ ಶೋಕಾಸ್ ನೋಟಿಸ್ ನೀಡಿದ್ದರು. ಆಗ ಗೃಹ ಇಲಾಖೆಗೆ ಹೋಗಿ ಎಲ್ಲಾ ದಾಖಲೆ ಸಲ್ಲಿಸಿ ಬಂದಿದ್ದೆ. ದೇಶವಿರೋಧಿ ಚುಟುವಟಿಕೆಯಲ್ಲಿ ನಾನು ಎಲ್ಲಿ ಭಾಗಿಯಾಗಿದ್ದೇನೆ? ಉದ್ದೇಶಪೂರ್ವಕವಾಗಿ ನನ್ನ ಮೇಲೆ ಈ ರೀತಿ ಪಿತೂರಿ ಮಾಡುತ್ತಿದ್ದಾರೆ. ನಾನು ಈ ದೇಶದಲ್ಲಿ ಇರಬಾರದು ಅಂತ ವೀಸಾ ರದ್ದುಗೊಳಿಸಿದ್ದಾರೆ. ವಾಕ್ ಸ್ವಾತಂತ್ರವನ್ನು ಕಿತ್ತು, ಜೈಲಿಗೆ ಹಾಕುವುದಲ್ಲದೇ ನಾನು ದೇಶದಲ್ಲೂ ಇರಬಾರದು ಎಂದು ವೀಸಾ ರದ್ದು ಮಾಡಿದ್ದಾರೆ ಎಂದು ಕಿಡಿಕಾರಿದರು.

ನಾನು ವಕೀಲರ ಬಳಿ ಮಾತನಾಡಿದ್ದೇನೆ. ಇದಕ್ಕೆ ವಿರುದ್ಧವಾಗಿ ಸ್ಟೇ ತರುತ್ತೇನೆ. ನಾನು ಕಾನೂನಿನ ಹೋರಾಟ ಮಾಡುತ್ತೇನೆ. ನನಗೆ 15 ದಿನದವರೆಗೆ ಸಮಯ ಕೊಟ್ಟಿದ್ದಾರೆ. 15 ದಿನದೊಳಗೆ ನಾನು ಸ್ಟೇ ತರುತ್ತೇನೆ ಎಂದು ತಿಳಿಸಿದರು.

ಭಾರತದಲ್ಲಿ 18 ವರ್ಷದಿಂದ ಇದ್ದೇನೆ. ಜಾನಪದ ರಂಗಭೂಮಿ ಮತ್ತು ಅದರಿಂದ ಸಾಮಾಜಿಕ ಬದಲಾವಣೆ ಎನ್ನುವ ವಿಚಾರದ ಮೇಲೆ ಸಂಶೋಧನೆ ಅನುದಾನ ತೆಗೆದುಕೊಂಡು ಭಾರತಕ್ಕೆ 2005 ರಲ್ಲಿ ಬಂದೆ. 2015 ರಿಂದ ಪೂರ್ಣಪ್ರಮಾಣದಲ್ಲಿ ಭಾರತದಲ್ಲಿಯೇ ಇದ್ದೇನೆ. ನನ್ನ ತಂದೆ ಮತ್ತು ತಾಯಿ ಭಾರತದವರೇ ಆಗಿರುವುದರಿಂದ 2018 ರಲ್ಲಿ ನನಗೆ ಒಸಿಐ ಕೊಟ್ಟಿದ್ದಾರೆ. ನನ್ನ ಬಳಿ ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಎಲ್ಲವೂ ಇದೆ. ನಾನು ಕೂಡಾ ತೆರಿಗೆಯನ್ನು ಇದೇ ದೇಶಕ್ಕೆ ಕಟ್ಟುತ್ತೇನೆ. ಆದರೆ ಈ ತಕ್ಷಣವೇ ಒಸಿಐ ರದ್ದು ಮಾಡಲಾಗಿದೆ ಎಂದು ನೋಟಿಸ್ ನೀಡಿದ್ದಾರೆ. ಇದರಲ್ಲಿ ಯಾವುದೇ ಅರ್ಥ ಇಲ್ಲ. ನಾನು ಇದೇ ದೇಶದವನು, ನನಗೆ ಅಮೆರಿಕಕ್ಕೆ ಹೋಗುವ ಮನಸ್ಸಿಲ್ಲ ಎಂದು ಚೇತನ್ ಹೇಳಿಕೆ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

3 hours ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

3 hours ago

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…

4 hours ago

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…

4 hours ago

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

18 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

19 hours ago