ವಿಷ್ಣುಗುಪ್ತ ವಿವಿ | ಗುರುಕುಲ ಪ್ರವೇಶ

January 17, 2023
10:09 PM

ಭಾರತೀಯ ಭವ್ಯ ಪರಂಪರೆಯನ್ನು ಭಾವಿ ಪೀಳಿಗೆಯಲ್ಲಿ ಉಳಿಸಿ ಬೆಳೆಸುವ ಮಹತ್ಸಂಕಲ್ಪದೊಂದಿಗೆ ಶ್ರೀರಾಮಚಂದ್ರಾಪುರಮಠ ಆರಂಭಿಸಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲಕ್ಕೆ 2023-24ನೇ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಗುರುಕುಲದಲ್ಲಿ ನಾಲ್ಕರಿಂದ ಹನ್ನೆರಡನೇ ತರಗತಿವರೆಗೆ ವಸತಿಯುತ ಶಿಕ್ಷಣ ಸೌಲಭ್ಯವಿದ್ದು, ಜಾತಿ ಮತಗಳ ಬೇಧವಿಲ್ಲದೇ ಎಲ್ಲರೂ ಅರ್ಜಿ ಸಲ್ಲಿಸಬಹುದಾಗಿದೆ. ಋಷಿಯುಗ ಮತ್ತು ನವಯುಗ ಶಿಕ್ಷಣಗಳ ಸಮ್ಮಿಲನವಿರುವ ದೇಶದ ಏಕೈಕ ಗುರುಕುಲ ಇದಾಗಿದ್ದು, ಪಠ್ಯದ ಜತೆಗೆ ಜೀವನ ಮೌಲ್ಯಗಳಿಗೂ ಒತ್ತು ನೀಡಿ ಮಕ್ಕಳ ಸರ್ವಾಂಗೀಣ ಪ್ರಗತಿಗೆ ಇಲ್ಲಿನ ಶಿಕ್ಷಣ ನೆರವಾಗಲಿದೆ.

ನಿಗದಿತ ಪಠ್ಯದ ಜತೆಗೆ ಯೋಗ, ಜ್ಯೋತಿಷ್ಯ, ವಾಸ್ತು, ಆಯುರ್ವೇದ, ಸಂಗೀತ, ವಾದ್ಯ, ನೃತ್ಯ, ಚಿತ್ರ, ಯಕ್ಷಗಾನ, ಕುದುರೆ ಸವಾರಿ ಕಳರಿಪಯಟ್, ಕರಕುಶಲಕಲೆ, ರಂಗೋಲಿ ಕಸೂತಿ, ಪಾರಂಪರಿಕ ಪಾಕಶಾಸ್ತ್ರ, ಗೃಹನಿರ್ವಾಹ ಹೀಗೆ ರೆಲ್ಲೂ ದೊರೆಯದ ಪ್ರಾಚೀನ ಭಾರತದ ಅಪೂರ್ವ ಕಲೆಗಳನ್ನು ಒಂದೇ ಸೂರಿನಡಿ ಮಕ್ಕಳಿಗೆ ಬೋಧಿಸಲಾಗುತ್ತದೆ. ಸಿಇಟಿ/ಜೆಇಇ/ನೀಟ್/ಸಿಎ/ಸಿಎಸ್ ಪರೀಕ್ಷೆಗಳಿಗೂ ತರಬೇತಿ ವ್ಯವಸ್ಥೆ ಇದೆ. ಭಾರತೀಯ ಹಬ್ಬ- ಹರಿದಿನಗಳ ಆಚರಣೆಯ ಜತೆಗೆ ಸೂಕ್ತ ವಸತಿಯ ಜತೆಗೆ ಉತ್ತಮ ಸಾತ್ವಿಕ ಆಹಾರ ನೀಡಲಾಗುತ್ತದೆ.ವಿವರಗಳಿಗೆ ದೂರವಾಣಿ: 9449495247, 9449595248 ಸಂಪರ್ಕಿಸಬಹುದು. ಇ-ಮೇಲ್: office@vishnuguptavvv.org 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ
April 17, 2026
1:55 PM
by: ಸಾಯಿಶೇಖರ್ ಕರಿಕಳ
ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror