Advertisement
ಸುದ್ದಿಗಳು

ವಿಷ್ಣುಗುಪ್ತ ವಿವಿ | ಗುರುಕುಲ ಪ್ರವೇಶ

Share

ಭಾರತೀಯ ಭವ್ಯ ಪರಂಪರೆಯನ್ನು ಭಾವಿ ಪೀಳಿಗೆಯಲ್ಲಿ ಉಳಿಸಿ ಬೆಳೆಸುವ ಮಹತ್ಸಂಕಲ್ಪದೊಂದಿಗೆ ಶ್ರೀರಾಮಚಂದ್ರಾಪುರಮಠ ಆರಂಭಿಸಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲಕ್ಕೆ 2023-24ನೇ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಗುರುಕುಲದಲ್ಲಿ ನಾಲ್ಕರಿಂದ ಹನ್ನೆರಡನೇ ತರಗತಿವರೆಗೆ ವಸತಿಯುತ ಶಿಕ್ಷಣ ಸೌಲಭ್ಯವಿದ್ದು, ಜಾತಿ ಮತಗಳ ಬೇಧವಿಲ್ಲದೇ ಎಲ್ಲರೂ ಅರ್ಜಿ ಸಲ್ಲಿಸಬಹುದಾಗಿದೆ. ಋಷಿಯುಗ ಮತ್ತು ನವಯುಗ ಶಿಕ್ಷಣಗಳ ಸಮ್ಮಿಲನವಿರುವ ದೇಶದ ಏಕೈಕ ಗುರುಕುಲ ಇದಾಗಿದ್ದು, ಪಠ್ಯದ ಜತೆಗೆ ಜೀವನ ಮೌಲ್ಯಗಳಿಗೂ ಒತ್ತು ನೀಡಿ ಮಕ್ಕಳ ಸರ್ವಾಂಗೀಣ ಪ್ರಗತಿಗೆ ಇಲ್ಲಿನ ಶಿಕ್ಷಣ ನೆರವಾಗಲಿದೆ.
ನಿಗದಿತ ಪಠ್ಯದ ಜತೆಗೆ ಯೋಗ, ಜ್ಯೋತಿಷ್ಯ, ವಾಸ್ತು, ಆಯುರ್ವೇದ, ಸಂಗೀತ, ವಾದ್ಯ, ನೃತ್ಯ, ಚಿತ್ರ, ಯಕ್ಷಗಾನ, ಕುದುರೆ ಸವಾರಿ ಕಳರಿಪಯಟ್, ಕರಕುಶಲಕಲೆ, ರಂಗೋಲಿ ಕಸೂತಿ, ಪಾರಂಪರಿಕ ಪಾಕಶಾಸ್ತ್ರ, ಗೃಹನಿರ್ವಾಹ ಹೀಗೆ ರೆಲ್ಲೂ ದೊರೆಯದ ಪ್ರಾಚೀನ ಭಾರತದ ಅಪೂರ್ವ ಕಲೆಗಳನ್ನು ಒಂದೇ ಸೂರಿನಡಿ ಮಕ್ಕಳಿಗೆ ಬೋಧಿಸಲಾಗುತ್ತದೆ. ಸಿಇಟಿ/ಜೆಇಇ/ನೀಟ್/ಸಿಎ/ಸಿಎಸ್ ಪರೀಕ್ಷೆಗಳಿಗೂ ತರಬೇತಿ ವ್ಯವಸ್ಥೆ ಇದೆ. ಭಾರತೀಯ ಹಬ್ಬ- ಹರಿದಿನಗಳ ಆಚರಣೆಯ ಜತೆಗೆ ಸೂಕ್ತ ವಸತಿಯ ಜತೆಗೆ ಉತ್ತಮ ಸಾತ್ವಿಕ ಆಹಾರ ನೀಡಲಾಗುತ್ತದೆ.ವಿವರಗಳಿಗೆ ದೂರವಾಣಿ: 9449495247, 9449595248 ಸಂಪರ್ಕಿಸಬಹುದು. ಇ-ಮೇಲ್: office@vishnuguptavvv.org
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

8 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

8 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

16 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

21 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

21 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago