ಭಾರತೀಯ ಭವ್ಯ ಪರಂಪರೆಯನ್ನು ಭಾವಿ ಪೀಳಿಗೆಯಲ್ಲಿ ಉಳಿಸಿ ಬೆಳೆಸುವ ಮಹತ್ಸಂಕಲ್ಪದೊಂದಿಗೆ ಶ್ರೀರಾಮಚಂದ್ರಾಪುರಮಠ ಆರಂಭಿಸಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲಕ್ಕೆ 2023-24ನೇ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಗುರುಕುಲದಲ್ಲಿ ನಾಲ್ಕರಿಂದ ಹನ್ನೆರಡನೇ ತರಗತಿವರೆಗೆ ವಸತಿಯುತ ಶಿಕ್ಷಣ ಸೌಲಭ್ಯವಿದ್ದು, ಜಾತಿ ಮತಗಳ ಬೇಧವಿಲ್ಲದೇ ಎಲ್ಲರೂ ಅರ್ಜಿ ಸಲ್ಲಿಸಬಹುದಾಗಿದೆ. ಋಷಿಯುಗ ಮತ್ತು ನವಯುಗ ಶಿಕ್ಷಣಗಳ ಸಮ್ಮಿಲನವಿರುವ ದೇಶದ ಏಕೈಕ ಗುರುಕುಲ ಇದಾಗಿದ್ದು, ಪಠ್ಯದ ಜತೆಗೆ ಜೀವನ ಮೌಲ್ಯಗಳಿಗೂ ಒತ್ತು ನೀಡಿ ಮಕ್ಕಳ ಸರ್ವಾಂಗೀಣ ಪ್ರಗತಿಗೆ ಇಲ್ಲಿನ ಶಿಕ್ಷಣ ನೆರವಾಗಲಿದೆ. ನಿಗದಿತ ಪಠ್ಯದ ಜತೆಗೆ ಯೋಗ, ಜ್ಯೋತಿಷ್ಯ, ವಾಸ್ತು, ಆಯುರ್ವೇದ, ಸಂಗೀತ, ವಾದ್ಯ, ನೃತ್ಯ, ಚಿತ್ರ, ಯಕ್ಷಗಾನ, ಕುದುರೆ ಸವಾರಿ ಕಳರಿಪಯಟ್, ಕರಕುಶಲಕಲೆ, ರಂಗೋಲಿ ಕಸೂತಿ, ಪಾರಂಪರಿಕ ಪಾಕಶಾಸ್ತ್ರ, ಗೃಹನಿರ್ವಾಹ ಹೀಗೆ ರೆಲ್ಲೂ ದೊರೆಯದ ಪ್ರಾಚೀನ ಭಾರತದ ಅಪೂರ್ವ ಕಲೆಗಳನ್ನು ಒಂದೇ ಸೂರಿನಡಿ ಮಕ್ಕಳಿಗೆ ಬೋಧಿಸಲಾಗುತ್ತದೆ. ಸಿಇಟಿ/ಜೆಇಇ/ನೀಟ್/ಸಿಎ/ಸಿಎಸ್ ಪರೀಕ್ಷೆಗಳಿಗೂ ತರಬೇತಿ ವ್ಯವಸ್ಥೆ ಇದೆ. ಭಾರತೀಯ ಹಬ್ಬ- ಹರಿದಿನಗಳ ಆಚರಣೆಯ ಜತೆಗೆ ಸೂಕ್ತ ವಸತಿಯ ಜತೆಗೆ ಉತ್ತಮ ಸಾತ್ವಿಕ ಆಹಾರ ನೀಡಲಾಗುತ್ತದೆ.ವಿವರಗಳಿಗೆ ದೂರವಾಣಿ: 9449495247, 9449595248 ಸಂಪರ್ಕಿಸಬಹುದು. ಇ-ಮೇಲ್: office@vishnuguptavvv.ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…