ವಿಶ್ವ ಕವಿತಾ ದಿನದ ಶುಭಾಶಯಗಳು…
ಕವಿತೆ ಹುಟ್ಟುವುದು ಮನಸಿನಿಂದ. ಅಲ್ಲಿನ ಭಾವನೆಗಳು ಕವಿತೆಯಾಗಿ ರೂಪು ತಳೆಯುತ್ತವೆ. ಕವಿ ಹೃದಯಕ್ಕೆ ಎಲ್ಲವೂ ವಿಷಯವೇ….
ಓಡುವ ಮೋಡ, ಸುರಿಯುವ ಮಳೆ, ಮೂಡುವ ಸೂರ್ಯ , ಬಾನಂಚಿನಲ್ಲಿ ಮರೆಯಾಗುವ ಭಾಸ್ಕರ. ಅರಳು ನೈದಿಲೆ, ಮುಸುಕಿದ ಮಂಜು , ಕೊನೆ ಮೊದಲಿಲ್ಲದ ಆಗಸ. ಹೀಗೆ ಕವಿಗೆ .ಬರೆಯುವ ಮನಸಿದ್ದಾಗ ಎಲ್ಲವೂ ವಸ್ತುಗಳೇ.
ಕವಿತೆ ಬರೆಯುವುದು ಗದ್ಯ ಬರೆದಂತಲ್ಲ. ಹಾಡಲು ಅನುಕೂಲವಾಗುವಂತೆ ಬರೆದಾಗ ಅದಕ್ಕೊಂದು ವಿಶೇಷ ಆಕರ್ಷಣೆ. ಛಂದೋಬದ್ಧವಾಗಿ ಬರೆದಾಗ ಒಂದು ತೂಕ ಜಾಸ್ತಿಯೇ. ಕೆಲವೊಮ್ಮೆ ನಾಲ್ಕು ಗೆರೆ ಪ್ರಾಸಬದ್ಧವಾಗಿ ಬರೆದರೂ ಪದ್ಯವಾಗಿ ಬಿಡುತ್ತದೆ.. ಭಾವನೆಗಳ ಅಭಿವ್ಯಕ್ತಿಯೇ ಮುಖ್ಯ.
ಸಣ್ಣ ದೊಡ್ಡ ಕವಿಗಳನ್ನು ಪ್ರೋತ್ಸಾಹಿಸುವ ಮಹತ್ತರವಾದ ಉದ್ದೇಶದೊಂದಿಗೆ 1999 ರಲ್ಲಿ ಯುನೆಸ್ಕೊ ವಿಶ್ವ ಕವಿತಾ ದಿನವೆಂದು ಮಾರ್ಚ್ 21 ರಂದು ಆರಂಭಿಸಿತು. ಈ ಹಿನ್ನೆಲೆಯಲ್ಲಿ ವಿಶ್ವ ದೆಲ್ಲೆಡೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ತೆಗೆದು ಕೊಳ್ಳಿ ಪೆನ್ನು , ಪೇಪರ್. ಬರೆದುಬಿಡಿ ಒಂದು ಕವಿತೆ.
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…
ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…
ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…
ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…
ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಕ್ರಾಂತಿ ಕೃತಕ ಬುದ್ಧಿಮತ್ತೆ (Artificial Intelligence) AI)ಮೂಲಕ…