ವಿಶ್ವ ಕವಿತಾ ದಿನದ ಶುಭಾಶಯಗಳು…
ಕವಿತೆ ಹುಟ್ಟುವುದು ಮನಸಿನಿಂದ. ಅಲ್ಲಿನ ಭಾವನೆಗಳು ಕವಿತೆಯಾಗಿ ರೂಪು ತಳೆಯುತ್ತವೆ. ಕವಿ ಹೃದಯಕ್ಕೆ ಎಲ್ಲವೂ ವಿಷಯವೇ….
ಓಡುವ ಮೋಡ, ಸುರಿಯುವ ಮಳೆ, ಮೂಡುವ ಸೂರ್ಯ , ಬಾನಂಚಿನಲ್ಲಿ ಮರೆಯಾಗುವ ಭಾಸ್ಕರ. ಅರಳು ನೈದಿಲೆ, ಮುಸುಕಿದ ಮಂಜು , ಕೊನೆ ಮೊದಲಿಲ್ಲದ ಆಗಸ. ಹೀಗೆ ಕವಿಗೆ .ಬರೆಯುವ ಮನಸಿದ್ದಾಗ ಎಲ್ಲವೂ ವಸ್ತುಗಳೇ.
ಕವಿತೆ ಬರೆಯುವುದು ಗದ್ಯ ಬರೆದಂತಲ್ಲ. ಹಾಡಲು ಅನುಕೂಲವಾಗುವಂತೆ ಬರೆದಾಗ ಅದಕ್ಕೊಂದು ವಿಶೇಷ ಆಕರ್ಷಣೆ. ಛಂದೋಬದ್ಧವಾಗಿ ಬರೆದಾಗ ಒಂದು ತೂಕ ಜಾಸ್ತಿಯೇ. ಕೆಲವೊಮ್ಮೆ ನಾಲ್ಕು ಗೆರೆ ಪ್ರಾಸಬದ್ಧವಾಗಿ ಬರೆದರೂ ಪದ್ಯವಾಗಿ ಬಿಡುತ್ತದೆ.. ಭಾವನೆಗಳ ಅಭಿವ್ಯಕ್ತಿಯೇ ಮುಖ್ಯ.
ಸಣ್ಣ ದೊಡ್ಡ ಕವಿಗಳನ್ನು ಪ್ರೋತ್ಸಾಹಿಸುವ ಮಹತ್ತರವಾದ ಉದ್ದೇಶದೊಂದಿಗೆ 1999 ರಲ್ಲಿ ಯುನೆಸ್ಕೊ ವಿಶ್ವ ಕವಿತಾ ದಿನವೆಂದು ಮಾರ್ಚ್ 21 ರಂದು ಆರಂಭಿಸಿತು. ಈ ಹಿನ್ನೆಲೆಯಲ್ಲಿ ವಿಶ್ವ ದೆಲ್ಲೆಡೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ತೆಗೆದು ಕೊಳ್ಳಿ ಪೆನ್ನು , ಪೇಪರ್. ಬರೆದುಬಿಡಿ ಒಂದು ಕವಿತೆ.
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…