ಗಿಡಿಗಳಿಗೆ ನೀರುಣಿಸಲು ಬತ್ತಿಯ ಮಾದರಿಯ ತಂತ್ರಜ್ಞಾನವನ್ನು ಪರಿಚಯ ಮಾಡಿರುವ ಬಾಲಕ ಕುಕ್ಕೆ ಸುಬ್ರಹ್ಮಣ್ಯದ ವಿದ್ಯಾರ್ಥಿ ವಿಸ್ಮಯ ದೇವಸ್ಯ. ಅದು 2014 ರಲ್ಲಿ. ಈ ಪ್ರಾಜೆಕ್ಟ್ ಗೆ ಅಂದು ಚಿನ್ನದ ಪದಕವೂ ಲಭ್ಯವಾಗಿತ್ತು. ಇದೀಗ ಅದೇ ಮಾದರಿಯ ನೀರುಣಿಸುವ ತಂತ್ರಜ್ಞಾನವನ್ನು ಪರಿಚಯ ಮಾಡಿದ್ದಾರೆ ಐ ಐ ಎಚ್ ಆರ್ ನ ವಿಜ್ಞಾನಿ. ..!
ಲೋಮನಾಳ ಹೀರಿಕೆ ಅಥವಾ ಬತ್ತಿ ಎಣ್ಣೆ ಬೆಳಗಿದಂತೆ ಗಿಡಗಳು ನೀರನ್ನು ಹೀರುವ ಮಾದರಿಯನ್ನು ವಿಸ್ಮಯ ದೇವಸ್ಯ ಮಾಡಿದ್ದರು. ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ 2013-14 ವಿದ್ಯಾರ್ಥಿಯಾಗಿದ್ದ ಈ ಬಾಲಕ ಮಾಡಿರುವ ಈ ಮಾದರಿಗೆ ಅಂದು ಚಿನ್ನದ ಪದಕ ಲಭ್ಯವಾಗಿತ್ತು. ಸೈನ್ಸ್ ಸೊಸೈಟಿ ಆಫ್ ಇಂಡಿಯಾ ಆಯೋಜಿಸಿದ ಈ ಮೇಳದಲ್ಲಿ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಲಕ್ಷ್ಮಣ ದೇವಸ್ಯ ಅವರ ಪುತ್ರ ಬಾಲಕ ವಿಸ್ಮಯ ದೇವಸ್ಯ ಮಾಡಿರುವ ಈ ಪ್ರಾಜೆಕ್ಟ್ ಅಂದು ಗಮನ ಸೆಳೆದಿತ್ತು.
ಇದೀಗ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯು ಇದೇ ಮಾದರಿಯನ್ನು ಅಭಿವೃದ್ಧಿಪಡಿಸಿರುವ ಬಗ್ಗೆ ಮಾಹಿತಿ ನೀಡಿದೆ. ತಕ್ಷಣವೇ ಈ ಬಗ್ಗೆ ಗಮನ ಸೆಳೆದ ಬಾಲಕ ವಿಸ್ಮಯ ದೇವಸ್ಯ ಅವರ ಹೆತ್ತವರು ” ಈ ಮಾದರಿಯನ್ನು ವಿಸ್ಮಯ ದೇವಸ್ಯ ಈ ಹಿಂದೆಯೇ ಮಾಡಿದ್ದಾನೆ” ಎಂದು ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿಗಳು ಮಾಡುವ ಬಹುತೇಕ ಪ್ರಾಜೆಕ್ಟ್ ಗಳು ಕೃಷಿಕರಿಗೆ ಅನುಕೂಲವಾಗುವಂತೆ ಇರುತ್ತದೆ. ಆದರೆ ಅದನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಅಥವಾ ಹಾಗೆಯೇ ಅನುಷ್ಟಾನ ಮಾಡುವ ವೇಳೆ ವಿದ್ಯಾರ್ಥಿಗಳ ಕಾರ್ಯವನ್ನೂ, ಕೆಲಸವನ್ನೂ ಉಲ್ಲೇಖ ಮಾಡದೆಯೇ ಅನ್ಯಾಯ ಮಾಡಬಾರದು. ವಿದ್ಯಾರ್ಥಿಗಳ ಸಾಧನೆ ಅಪಾರ ಇರುತ್ತದೆ. ಅದರ ಹಿಂದೆ ಅಪಾರ ಶ್ರಮ ಇರುತ್ತದೆ. ವಿಜ್ಞಾನಿಗಳು ಯಾವುದೇ ಸಂಶೋಧನೆ ಮಾಡುವ ಮುನ್ನ ವಿವಿದೆಡೆ ಇಂತಹ ಪ್ರಾಜೆಕ್ಟ್ ಅಥವಾ ಮಾದರಿ ಇದೆಯೇ ಎಂಬುದನ್ನು ಪರಿಶೀಲನೆ ಮಾಡಬೇಕಾದ್ದು ಮೂಲಭೂತವಾದ ವಿಷಯವಾಗಿದೆ. ಈ ಪ್ರಾಜೆಕ್ಟ್ ಗೂಗಲ್ ಮೂಲಕ ಲಭ್ಯವಾಗುವ ಕಾರಣದಿಂದ ವಿದ್ಯಾರ್ಥಿಯ ಹೆಸರನ್ನು ಉಲ್ಲೇಖ ಮಾಡಬೇಕಿತ್ತು ಮಾತ್ರವಲ್ಲ ವಿಜ್ಞಾನಿಗಳು ಈ ಮಾದರಿಯ ಕೆಲಸ ಮಾಡಬಾರದು ಎಂದು ಬಾಲಕ ವಿಸ್ಮಯನ ಪೋಷಕರು ಹೇಳುತ್ತಾರೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…