ದೇಹದಲ್ಲಿ ವಿಟಮಿನ್ ಬಿ12 ಕೊರತೆಯಿಂದ ಏನಾಗುತ್ತದೆ..? ಇದು ತಿಳಿಯುವುದು ಹೇಗೆ..?

November 16, 2025
9:43 AM

ದೇಹದಲ್ಲಿ ವಿಟಮಿನ್ಸ್ ಹಾಗೂ ವಿವಿಧ ಬಗೆಯ ಪೌಷ್ಠಿಕ ಸತ್ವಗಳು ಸಮತೋಲನದಲ್ಲಿ ಇರಬೇಕು. ಇದಕ್ಕಾಗಿ ಆರೋಗ್ಯಕಾರಿ ಆಹಾರಪದ್ಧತಿ ಹಾಗೂ ಜೀವನಶೈಲಿಯನ್ನು ಅನುಸರಿಸಬೇಕು. ದೇಹದಲ್ಲಿ ಮುಖ್ಯವಾಗಿ ವಿಟಮಿನ್ ಬಿ12 ಕೊರತೆಯನ್ನು ಕಾಣಿಸಿಕೊಳ್ಳದಂತೆ ನೋಡಿಕೊಳ್ಳಬೇಕು. ಒಂದು ವೇಳೆ ವಿಟಮಿನ್ ಬಿ12 ಕೊರತೆ ಕಂಡುಬಂದಲ್ಲಿ ನರವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ.

ಸಮಸ್ಯೆಗಳು: ವಿಟಮಿನ್ ಬಿ12 ಕೊರತೆಯಾದಲ್ಲಿ ನರಮಂಡಲಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಅಷ್ಟೇ ಅಲ್ಲದೆ ಕಣ್ಣಿನ ದೃಷ್ಟಿಯ ಸಮಸ್ಯೆ, ನೆನಪಿನ ಶಕ್ತಿ ಕಡಿಮೆಯಾಗುವುದು, ಚರ್ಮದ ಹಳದಿಯಾಗುವುದು, ಪದೇ ಪದೇ ಸುಸ್ತು ಆಯಾಸ, ಹಾಗೂ ಕಾಲಿನ ನರಗಳಲ್ಲಿಯೂ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.

ವಿಟಮಿನ್ ಬಿ12 ಕೊರತೆಯು ಹಿಮೋಗ್ಲೋಬಿನ್ ಅನ್ನು ಕಡಿಮೆ ಮಾಡುತ್ತದೆ, ಇದು ಸರಿಯಾದ ಆಮ್ಲಜನಕದ ಪೂರೈಕೆಯನ್ನು ದುರ್ಬಲಗೊಳಿಸುತ್ತದೆ. ಮಾತ್ರವಲ್ಲ ನರಕೋಶಗಳ ರಚನೆಯನ್ನು ತಡೆಯುತ್ತದೆ. ನರ ಕೋಶಗಳು ರೂಪುಗೊಳ್ಳದಿದ್ದಾಗ, ನರಗಳು ದುರ್ಬಲಗೊಳ್ಳುತ್ತವೆ. ಇದು ಮುಖ್ಯವಾಗಿ ದೇಹದ ಮೇಲಿನ ನಿಯಂತ್ರಣ ಕಳೆದುಕೊಳ್ಳಲು ಕಾರಣವಾಗುತ್ತದೆ.

ಸ್ನಾಯುಗಳ ಸಮನ್ವಯವನ್ನು ದುರ್ಬಲಗೊಲಿಸುತ್ತದೆ. ಇದು ಕಾಲಿನ ಸ್ನಾಯುಗಳಲ್ಲಿ ಒತ್ತಡ, ಬಿಗಿತ ಅಥವಾ ದೌರ್ಬಲ್ಯವನ್ನು ಉಂಟುಮಾಡುತ್ತದೆ. ಇನ್ನು ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಗೆ ವಿಟಮಿನ್ ಬಿ12 ಅತ್ಯಗತ್ಯವಾಗಿದ್ದು, ಇದರ ಕೊರತೆಯು ರಕ್ತಹೀನತೆಗೆ ಕಾರಣವಾಗುತ್ತದೆ. ಈ ಸ್ಥಿತಿಯಲ್ಲಿ ದೇಹದ ಮೂಲಕ ಆಮ್ಲಜನಕದ ಹರಿವು ದುರ್ಬಲಗೊಳ್ಳುತ್ತದೆ.

ಪರಿಹಾರ: ವಿಟಮಿನ್ ಬಿ12 ಕೊರತೆಯಿಂದ ಅದೇಷ್ಟೋ ಸಮಸ್ಯೆಗಳು ಎದುರಾಗಬಹುದು. ಇದರಿಂದ ಮೊಟ್ಟೆ, ಡೈರಿ ಉತ್ಪನ್ನಗಳು, ಧಾನ್ಯಗಳು, ಅಲೂಗಡ್ಡೆ, ಅಣಬೆಗಳು, ಬಲವರ್ಧಿತ ಉಪಾಹಾರ ಧಾನ್ಯಗಳು, ಕಾಲೋಚಿತ ಹಸಿರು ತರಕಾರಿಗಳು ಮತ್ತು ತಾಜಾ ಹಣ್ಣುಗಳ ಸೇವನೆಯಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror