Advertisement
ಸುದ್ದಿಗಳು

ದೇಹದಲ್ಲಿ ವಿಟಮಿನ್ ಬಿ12 ಕೊರತೆಯಿಂದ ಏನಾಗುತ್ತದೆ..? ಇದು ತಿಳಿಯುವುದು ಹೇಗೆ..?

Share

ದೇಹದಲ್ಲಿ ವಿಟಮಿನ್ಸ್ ಹಾಗೂ ವಿವಿಧ ಬಗೆಯ ಪೌಷ್ಠಿಕ ಸತ್ವಗಳು ಸಮತೋಲನದಲ್ಲಿ ಇರಬೇಕು. ಇದಕ್ಕಾಗಿ ಆರೋಗ್ಯಕಾರಿ ಆಹಾರಪದ್ಧತಿ ಹಾಗೂ ಜೀವನಶೈಲಿಯನ್ನು ಅನುಸರಿಸಬೇಕು. ದೇಹದಲ್ಲಿ ಮುಖ್ಯವಾಗಿ ವಿಟಮಿನ್ ಬಿ12 ಕೊರತೆಯನ್ನು ಕಾಣಿಸಿಕೊಳ್ಳದಂತೆ ನೋಡಿಕೊಳ್ಳಬೇಕು. ಒಂದು ವೇಳೆ ವಿಟಮಿನ್ ಬಿ12 ಕೊರತೆ ಕಂಡುಬಂದಲ್ಲಿ ನರವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ.

ಸಮಸ್ಯೆಗಳು: ವಿಟಮಿನ್ ಬಿ12 ಕೊರತೆಯಾದಲ್ಲಿ ನರಮಂಡಲಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಅಷ್ಟೇ ಅಲ್ಲದೆ ಕಣ್ಣಿನ ದೃಷ್ಟಿಯ ಸಮಸ್ಯೆ, ನೆನಪಿನ ಶಕ್ತಿ ಕಡಿಮೆಯಾಗುವುದು, ಚರ್ಮದ ಹಳದಿಯಾಗುವುದು, ಪದೇ ಪದೇ ಸುಸ್ತು ಆಯಾಸ, ಹಾಗೂ ಕಾಲಿನ ನರಗಳಲ್ಲಿಯೂ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.

ವಿಟಮಿನ್ ಬಿ12 ಕೊರತೆಯು ಹಿಮೋಗ್ಲೋಬಿನ್ ಅನ್ನು ಕಡಿಮೆ ಮಾಡುತ್ತದೆ, ಇದು ಸರಿಯಾದ ಆಮ್ಲಜನಕದ ಪೂರೈಕೆಯನ್ನು ದುರ್ಬಲಗೊಳಿಸುತ್ತದೆ. ಮಾತ್ರವಲ್ಲ ನರಕೋಶಗಳ ರಚನೆಯನ್ನು ತಡೆಯುತ್ತದೆ. ನರ ಕೋಶಗಳು ರೂಪುಗೊಳ್ಳದಿದ್ದಾಗ, ನರಗಳು ದುರ್ಬಲಗೊಳ್ಳುತ್ತವೆ. ಇದು ಮುಖ್ಯವಾಗಿ ದೇಹದ ಮೇಲಿನ ನಿಯಂತ್ರಣ ಕಳೆದುಕೊಳ್ಳಲು ಕಾರಣವಾಗುತ್ತದೆ.

ಸ್ನಾಯುಗಳ ಸಮನ್ವಯವನ್ನು ದುರ್ಬಲಗೊಲಿಸುತ್ತದೆ. ಇದು ಕಾಲಿನ ಸ್ನಾಯುಗಳಲ್ಲಿ ಒತ್ತಡ, ಬಿಗಿತ ಅಥವಾ ದೌರ್ಬಲ್ಯವನ್ನು ಉಂಟುಮಾಡುತ್ತದೆ. ಇನ್ನು ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಗೆ ವಿಟಮಿನ್ ಬಿ12 ಅತ್ಯಗತ್ಯವಾಗಿದ್ದು, ಇದರ ಕೊರತೆಯು ರಕ್ತಹೀನತೆಗೆ ಕಾರಣವಾಗುತ್ತದೆ. ಈ ಸ್ಥಿತಿಯಲ್ಲಿ ದೇಹದ ಮೂಲಕ ಆಮ್ಲಜನಕದ ಹರಿವು ದುರ್ಬಲಗೊಳ್ಳುತ್ತದೆ.

ಪರಿಹಾರ: ವಿಟಮಿನ್ ಬಿ12 ಕೊರತೆಯಿಂದ ಅದೇಷ್ಟೋ ಸಮಸ್ಯೆಗಳು ಎದುರಾಗಬಹುದು. ಇದರಿಂದ ಮೊಟ್ಟೆ, ಡೈರಿ ಉತ್ಪನ್ನಗಳು, ಧಾನ್ಯಗಳು, ಅಲೂಗಡ್ಡೆ, ಅಣಬೆಗಳು, ಬಲವರ್ಧಿತ ಉಪಾಹಾರ ಧಾನ್ಯಗಳು, ಕಾಲೋಚಿತ ಹಸಿರು ತರಕಾರಿಗಳು ಮತ್ತು ತಾಜಾ ಹಣ್ಣುಗಳ ಸೇವನೆಯಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

16 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

16 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

20 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

21 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

21 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

2 days ago