Advertisement
ಸುದ್ದಿಗಳು

ದೇಹದಲ್ಲಿ ವಿಟಮಿನ್ ಬಿ12 ಕೊರತೆಯಿಂದ ಏನಾಗುತ್ತದೆ..? ಇದು ತಿಳಿಯುವುದು ಹೇಗೆ..?

Share

ದೇಹದಲ್ಲಿ ವಿಟಮಿನ್ಸ್ ಹಾಗೂ ವಿವಿಧ ಬಗೆಯ ಪೌಷ್ಠಿಕ ಸತ್ವಗಳು ಸಮತೋಲನದಲ್ಲಿ ಇರಬೇಕು. ಇದಕ್ಕಾಗಿ ಆರೋಗ್ಯಕಾರಿ ಆಹಾರಪದ್ಧತಿ ಹಾಗೂ ಜೀವನಶೈಲಿಯನ್ನು ಅನುಸರಿಸಬೇಕು. ದೇಹದಲ್ಲಿ ಮುಖ್ಯವಾಗಿ ವಿಟಮಿನ್ ಬಿ12 ಕೊರತೆಯನ್ನು ಕಾಣಿಸಿಕೊಳ್ಳದಂತೆ ನೋಡಿಕೊಳ್ಳಬೇಕು. ಒಂದು ವೇಳೆ ವಿಟಮಿನ್ ಬಿ12 ಕೊರತೆ ಕಂಡುಬಂದಲ್ಲಿ ನರವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ.

ಸಮಸ್ಯೆಗಳು: ವಿಟಮಿನ್ ಬಿ12 ಕೊರತೆಯಾದಲ್ಲಿ ನರಮಂಡಲಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಅಷ್ಟೇ ಅಲ್ಲದೆ ಕಣ್ಣಿನ ದೃಷ್ಟಿಯ ಸಮಸ್ಯೆ, ನೆನಪಿನ ಶಕ್ತಿ ಕಡಿಮೆಯಾಗುವುದು, ಚರ್ಮದ ಹಳದಿಯಾಗುವುದು, ಪದೇ ಪದೇ ಸುಸ್ತು ಆಯಾಸ, ಹಾಗೂ ಕಾಲಿನ ನರಗಳಲ್ಲಿಯೂ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.

ವಿಟಮಿನ್ ಬಿ12 ಕೊರತೆಯು ಹಿಮೋಗ್ಲೋಬಿನ್ ಅನ್ನು ಕಡಿಮೆ ಮಾಡುತ್ತದೆ, ಇದು ಸರಿಯಾದ ಆಮ್ಲಜನಕದ ಪೂರೈಕೆಯನ್ನು ದುರ್ಬಲಗೊಳಿಸುತ್ತದೆ. ಮಾತ್ರವಲ್ಲ ನರಕೋಶಗಳ ರಚನೆಯನ್ನು ತಡೆಯುತ್ತದೆ. ನರ ಕೋಶಗಳು ರೂಪುಗೊಳ್ಳದಿದ್ದಾಗ, ನರಗಳು ದುರ್ಬಲಗೊಳ್ಳುತ್ತವೆ. ಇದು ಮುಖ್ಯವಾಗಿ ದೇಹದ ಮೇಲಿನ ನಿಯಂತ್ರಣ ಕಳೆದುಕೊಳ್ಳಲು ಕಾರಣವಾಗುತ್ತದೆ.

ಸ್ನಾಯುಗಳ ಸಮನ್ವಯವನ್ನು ದುರ್ಬಲಗೊಲಿಸುತ್ತದೆ. ಇದು ಕಾಲಿನ ಸ್ನಾಯುಗಳಲ್ಲಿ ಒತ್ತಡ, ಬಿಗಿತ ಅಥವಾ ದೌರ್ಬಲ್ಯವನ್ನು ಉಂಟುಮಾಡುತ್ತದೆ. ಇನ್ನು ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಗೆ ವಿಟಮಿನ್ ಬಿ12 ಅತ್ಯಗತ್ಯವಾಗಿದ್ದು, ಇದರ ಕೊರತೆಯು ರಕ್ತಹೀನತೆಗೆ ಕಾರಣವಾಗುತ್ತದೆ. ಈ ಸ್ಥಿತಿಯಲ್ಲಿ ದೇಹದ ಮೂಲಕ ಆಮ್ಲಜನಕದ ಹರಿವು ದುರ್ಬಲಗೊಳ್ಳುತ್ತದೆ.

ಪರಿಹಾರ: ವಿಟಮಿನ್ ಬಿ12 ಕೊರತೆಯಿಂದ ಅದೇಷ್ಟೋ ಸಮಸ್ಯೆಗಳು ಎದುರಾಗಬಹುದು. ಇದರಿಂದ ಮೊಟ್ಟೆ, ಡೈರಿ ಉತ್ಪನ್ನಗಳು, ಧಾನ್ಯಗಳು, ಅಲೂಗಡ್ಡೆ, ಅಣಬೆಗಳು, ಬಲವರ್ಧಿತ ಉಪಾಹಾರ ಧಾನ್ಯಗಳು, ಕಾಲೋಚಿತ ಹಸಿರು ತರಕಾರಿಗಳು ಮತ್ತು ತಾಜಾ ಹಣ್ಣುಗಳ ಸೇವನೆಯಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

9 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

9 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

17 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

22 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

22 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago