ಶುದ್ಧವಾದ ಗಾಳಿ,ಒಳ್ಳೆಯ ವಾತಾವರಣ ನಮಗೆ ದೊರಕಬೇಕೆಂದರೆ ಅಲ್ಲಿ ಸಸ್ಯಗಳ ಸಂಖ್ಯೆ ಹೆಚ್ಚಾಗಿರಬೇಕು. ಕಾಲೇಜುಆವರಣ ಹಸಿರು ಸಸ್ಯಗಳಿಂದ ಕೂಡಿರಬೇಕು ಹಾಗೂ ಜ್ಞಾನದಜೊತೆಗೆ ಸಸ್ಯ ಸಂಪತ್ತನ್ನು ಬೆಳೆಸುವ ಜವಾಬ್ದಾರಿ ನಮ್ಮದಾಗಬೇಕು. ಹಸಿರಾದ ಪರಿಸರಕಣ್ಣಿಗೆ ಹೇಗೆ ಹಿತವೋ ಹಾಗೆಯೇಆರೋಗ್ಯಕ್ಕೂ ಒಳ್ಳೆಯದು , ಇದರಿಂದ ವಾಯುಮಾಲಿನ್ಯವನ್ನು ತಡೆಯಬಹುದು ಎಂದು ವಿವೇಕಾನಂದಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ದೇವಿಪ್ರಸಾದ್ಕೆ.ಎನ್ ಹೇಳಿದರು.
ಪುತ್ತೂರಿನ ವಿವೇಕಾನಂದ ಸಮೂಹ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ವಿವೇಕ ಸಂಜೀವಿನಿ ಹಸಿರು ಆವರಣ ಅಭಿಯಾನ ಉದ್ಘಾಟನಾ ಕಾರ್ಯಕ್ರಮದ ಮುಖ್ಯಅತಿಥಿಯಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿವೇಕಾನಂದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎ.ವಿ. ನಾರಾಯಣ್ ಮಾತನಾಡಿ,ಗಿಡಗಳನ್ನು ನೆಡುವುದರ ಮೂಲಕ ಪರಿಸರವನ್ನು ಸಂರಕ್ಷಿಸಬೇಕೇ ಹೊರತುಅದನ್ನುತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ಪರಿಸರವನ್ನು ಹಾಳುಮಾಡಬಾರದು. ಮಾನವಜೀವ ಸಂಕುಲಗಳನ್ನು ನಾಶ ಮಾಡುವುದರಜೊತೆಗೆ ಭೂಮಿಯ ವಿಕೋಪಕ್ಕೂ ಬಲಿಯಾಗುತ್ತಿದ್ದಾನೆಆದುದರಿಂದ ಗಿಡಗಳನ್ನು ಬೆಳೆಸಿ ನಾಡನ್ನು ಉಳಿಸಿ ಎಂದು ವಿದ್ಯಾರ್ಥಿಗಳಿಗೆ ಸಲಹೆಯನ್ನು ನೀಡಿದರು.
ಕಾರ್ಯಕ್ರಮವನ್ನು ಗಿಡನೆಡುವುದರ ಮೂಲಕ ಉದ್ಘಾಟಿಸಲಾಯಿತು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ ಎಂ.ಕೃಷ್ಣ ಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾರ್ಯಕ್ರಮವನ್ನು ವಿವೇಕಾನಂದ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ.ಗುರುರಾಜ್ ಸ್ವಾಗತಿಸಿ, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಎನ್ಎಸ್ಎಸ್ ಘಟಕದ ಸಂಯೋಜಕಿ ಪ್ರೊ.ನಿಶಾ ಜಿ.ಆರ್ ವಂದಿಸಿ, ಇಂಜಿನಿಯರಿಂಗ್ಕಾಲೇಜಿನ ಪ್ರಯೋಗಾಲಯ ಬೋಧಕ ಹರಿಪ್ರಸಾದ್ . ಡಿ ನಿರ್ವಹಿಸಿದರು.
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…