Advertisement
ರಾಜ್ಯ

ಸಾಮಾಜಿಕ ಜಾಲ, ವೆಬ್‍ಸೈಟ್ ಮತ್ತು ಮಾಧ್ಯಮಗಳ ಅವಶ್ಯಕತೆ ಮತ್ತು ಅನುಷ್ಠಾನ ಹೇಗೆ? | ವಿವೇಕಾನಂದ ಕಾಲೇಜಿನಲ್ಲಿ ಕಾರ್ಯಾಗಾರ |

Share

ಸಾಮಾಜಿಕ ಜಾಲ, ವೆಬ್‍ಸೈಟ್ ಮತ್ತು ಮಾಧ್ಯಮಗಳ ಅವಶ್ಯಕತೆ ಮತ್ತು ಅನುಷ್ಟಾನ” ಎಂಬ ವಿಷಯದ ಕುರಿತಾಗಿ, ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕರಿಗಾಗಿ ಒಂದು ದಿನದ ಕಾರ್ಯಾಗಾರವು ಪುತ್ತೂರು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ನಡೆಯಿತು.

ಕಾರ್ಯಾಗಾರಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಯಂ. ಕೃಷ್ಣ ಭಟ್ ಚಾಲನೆ ನೀಡಿ,”ನವ ಮಾಧ್ಯಮಗಳ ಬಳಕೆ ಸರಿಯಾದ ರೀತಿಯಲ್ಲಿ  ಆಗಬೇಕಿದೆ. ಶಿಕ್ಷಣ ಸಂಸ್ಥೆಯ ಉತ್ತಮ ಕಾರ್ಯಗಳು ಸಮಾಜಕ್ಕೆ ತಲುಪಬೇಕಿದೆ” ಎಂದರು.

ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಇದರ ವತಿಯಿಂದ ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳಿಗೆ ಈ ಕಾರ್ಯಾಗಾರ ಆಯೋಜಿಸಲಾಗಿತ್ತು.

ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಮುರಳಿಧರ ಕೆ. ಪ್ರಸ್ತಾವನೆಗೈದು ಸ್ವಾಗತಿಸಿದರು. ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಅಕ್ಷರೋದ್ಯಮದ ಮುಖ್ಯಸ್ಥ ಸುನಿಲ್ ಕುಲಕರ್ಣಿ,  ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ, ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ಆರಂಭವಾಗಲಿರುವ ವೆಬ್ ಮೀಡಿಯಾ ‘ವಿಕಸನ ನ್ಯೂಸ್.ಇನ್‘ ಗೆ ಚಾಲನೆ ನೀಡಿದರು. ಉಪ್ಪಿನಂಗಡಿಯ ಶ್ರೀರಾಮ ಪ್ರೌಡಶಾಲೆಯ ಮುಖ್ಯೋಪಾಧ್ಯಾಯ ರಘುರಾಮ್ ಭಟ್ ಕಾರ್ಯಕ್ರಮ ನಿರ್ವಹಿಸಿದರು.

ಸುನಿಲ್‌ ಕುಲಕರ್ಣಿ ಮಾತನಾಡಿದರು.

ಉದ್ಘಾಟನಾ ಕಾರ್ಯಕ್ರಮದ ನಂತರದಲ್ಲಿ ವಿವಿಧ ಗೋಷ್ಠಿಗಳು ನಡೆದವು. ಮಂಗಳೂರಿನ ಅಕ್ಷರೋದ್ಯಮದ ಸುನಿಲ್ ಕುಲಕರ್ಣಿ “ಶೈಕ್ಷಣಿಕವಾಗಿ ವೆಬ್‍ಸೈಟ್‍ಗಳ ಪರಿಣಾಮಕಾರಿಯಾಗಿ ಹೇಗೆ ಉಪಯೋಗಿಸಬಹುದು” ಎನ್ನುವ ಕುರಿತಾಗಿ ಮಾಹಿತಿ ನೀಡಿದರು.

ಹಿರಿಯ ಪತ್ರಕರ್ತ ಬಿ ಟಿ ರಂಜನ್‌ ಮಾತನಾಡಿದರು

 

ಉಪನ್ಯಾಸಕ ಅಜಯ್‍ಶಾಸ್ತ್ರೀ ಮಾತನಾಡಿದರು

ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಮುದ್ರಣ ಮಾಧ್ಯಮದ ವರದಿಗಾರಿಕೆ ಕುರಿತಾಗಿ, ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಉಪನ್ಯಾಸಕ ಅಜಯ್‍ಶಾಸ್ತ್ರೀ ಸಾಮಾಜಿಕ ಜಾಲಗಳ ಕುರಿತಾಗಿ ಹಾಗೂ ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ವೆಬ್ ಮೀಡಿಯಾಗಳ ಬಳಕೆಯ ಕುರಿತಾಗಿ ಮಾಹಿತಿ ನೀಡಿದರು.

 

ಪತ್ರಕರ್ತ ಮಹೇಶ್‌ ಪುಚ್ಚಪ್ಪಾಡಿ ಮಾತನಾಡಿದರು.

ಕಾರ್ಯಾಗಾರದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿಕಟಪೂರ್ವ ಕಾರ್ಯದರ್ಶಿ ಶಿವಪ್ರಸಾದ್ ವಹಿಸಿದ್ದರು. ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಮುರಳೀಧರ್ ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

3 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

12 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

16 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago