Advertisement
ರಾಜ್ಯ

ಸಾಮಾಜಿಕ ಜಾಲ, ವೆಬ್‍ಸೈಟ್ ಮತ್ತು ಮಾಧ್ಯಮಗಳ ಅವಶ್ಯಕತೆ ಮತ್ತು ಅನುಷ್ಠಾನ ಹೇಗೆ? | ವಿವೇಕಾನಂದ ಕಾಲೇಜಿನಲ್ಲಿ ಕಾರ್ಯಾಗಾರ |

Share

ಸಾಮಾಜಿಕ ಜಾಲ, ವೆಬ್‍ಸೈಟ್ ಮತ್ತು ಮಾಧ್ಯಮಗಳ ಅವಶ್ಯಕತೆ ಮತ್ತು ಅನುಷ್ಟಾನ” ಎಂಬ ವಿಷಯದ ಕುರಿತಾಗಿ, ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕರಿಗಾಗಿ ಒಂದು ದಿನದ ಕಾರ್ಯಾಗಾರವು ಪುತ್ತೂರು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ನಡೆಯಿತು.

ಕಾರ್ಯಾಗಾರಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಯಂ. ಕೃಷ್ಣ ಭಟ್ ಚಾಲನೆ ನೀಡಿ,”ನವ ಮಾಧ್ಯಮಗಳ ಬಳಕೆ ಸರಿಯಾದ ರೀತಿಯಲ್ಲಿ  ಆಗಬೇಕಿದೆ. ಶಿಕ್ಷಣ ಸಂಸ್ಥೆಯ ಉತ್ತಮ ಕಾರ್ಯಗಳು ಸಮಾಜಕ್ಕೆ ತಲುಪಬೇಕಿದೆ” ಎಂದರು.

ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಇದರ ವತಿಯಿಂದ ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳಿಗೆ ಈ ಕಾರ್ಯಾಗಾರ ಆಯೋಜಿಸಲಾಗಿತ್ತು.

ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಮುರಳಿಧರ ಕೆ. ಪ್ರಸ್ತಾವನೆಗೈದು ಸ್ವಾಗತಿಸಿದರು. ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಅಕ್ಷರೋದ್ಯಮದ ಮುಖ್ಯಸ್ಥ ಸುನಿಲ್ ಕುಲಕರ್ಣಿ,  ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ, ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ಆರಂಭವಾಗಲಿರುವ ವೆಬ್ ಮೀಡಿಯಾ ‘ವಿಕಸನ ನ್ಯೂಸ್.ಇನ್‘ ಗೆ ಚಾಲನೆ ನೀಡಿದರು. ಉಪ್ಪಿನಂಗಡಿಯ ಶ್ರೀರಾಮ ಪ್ರೌಡಶಾಲೆಯ ಮುಖ್ಯೋಪಾಧ್ಯಾಯ ರಘುರಾಮ್ ಭಟ್ ಕಾರ್ಯಕ್ರಮ ನಿರ್ವಹಿಸಿದರು.

ಸುನಿಲ್‌ ಕುಲಕರ್ಣಿ ಮಾತನಾಡಿದರು.

ಉದ್ಘಾಟನಾ ಕಾರ್ಯಕ್ರಮದ ನಂತರದಲ್ಲಿ ವಿವಿಧ ಗೋಷ್ಠಿಗಳು ನಡೆದವು. ಮಂಗಳೂರಿನ ಅಕ್ಷರೋದ್ಯಮದ ಸುನಿಲ್ ಕುಲಕರ್ಣಿ “ಶೈಕ್ಷಣಿಕವಾಗಿ ವೆಬ್‍ಸೈಟ್‍ಗಳ ಪರಿಣಾಮಕಾರಿಯಾಗಿ ಹೇಗೆ ಉಪಯೋಗಿಸಬಹುದು” ಎನ್ನುವ ಕುರಿತಾಗಿ ಮಾಹಿತಿ ನೀಡಿದರು.

ಹಿರಿಯ ಪತ್ರಕರ್ತ ಬಿ ಟಿ ರಂಜನ್‌ ಮಾತನಾಡಿದರು

 

ಉಪನ್ಯಾಸಕ ಅಜಯ್‍ಶಾಸ್ತ್ರೀ ಮಾತನಾಡಿದರು

ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಮುದ್ರಣ ಮಾಧ್ಯಮದ ವರದಿಗಾರಿಕೆ ಕುರಿತಾಗಿ, ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಉಪನ್ಯಾಸಕ ಅಜಯ್‍ಶಾಸ್ತ್ರೀ ಸಾಮಾಜಿಕ ಜಾಲಗಳ ಕುರಿತಾಗಿ ಹಾಗೂ ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ವೆಬ್ ಮೀಡಿಯಾಗಳ ಬಳಕೆಯ ಕುರಿತಾಗಿ ಮಾಹಿತಿ ನೀಡಿದರು.

 

ಪತ್ರಕರ್ತ ಮಹೇಶ್‌ ಪುಚ್ಚಪ್ಪಾಡಿ ಮಾತನಾಡಿದರು.

ಕಾರ್ಯಾಗಾರದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿಕಟಪೂರ್ವ ಕಾರ್ಯದರ್ಶಿ ಶಿವಪ್ರಸಾದ್ ವಹಿಸಿದ್ದರು. ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಮುರಳೀಧರ್ ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ

ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…

16 minutes ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

42 minutes ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

6 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

17 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

22 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

23 hours ago