Advertisement
ರಾಜ್ಯ

ಸಾಮಾಜಿಕ ಜಾಲ, ವೆಬ್‍ಸೈಟ್ ಮತ್ತು ಮಾಧ್ಯಮಗಳ ಅವಶ್ಯಕತೆ ಮತ್ತು ಅನುಷ್ಠಾನ ಹೇಗೆ? | ವಿವೇಕಾನಂದ ಕಾಲೇಜಿನಲ್ಲಿ ಕಾರ್ಯಾಗಾರ |

Share

ಸಾಮಾಜಿಕ ಜಾಲ, ವೆಬ್‍ಸೈಟ್ ಮತ್ತು ಮಾಧ್ಯಮಗಳ ಅವಶ್ಯಕತೆ ಮತ್ತು ಅನುಷ್ಟಾನ” ಎಂಬ ವಿಷಯದ ಕುರಿತಾಗಿ, ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕರಿಗಾಗಿ ಒಂದು ದಿನದ ಕಾರ್ಯಾಗಾರವು ಪುತ್ತೂರು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ನಡೆಯಿತು.

ಕಾರ್ಯಾಗಾರಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಯಂ. ಕೃಷ್ಣ ಭಟ್ ಚಾಲನೆ ನೀಡಿ,”ನವ ಮಾಧ್ಯಮಗಳ ಬಳಕೆ ಸರಿಯಾದ ರೀತಿಯಲ್ಲಿ  ಆಗಬೇಕಿದೆ. ಶಿಕ್ಷಣ ಸಂಸ್ಥೆಯ ಉತ್ತಮ ಕಾರ್ಯಗಳು ಸಮಾಜಕ್ಕೆ ತಲುಪಬೇಕಿದೆ” ಎಂದರು.

ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಇದರ ವತಿಯಿಂದ ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳಿಗೆ ಈ ಕಾರ್ಯಾಗಾರ ಆಯೋಜಿಸಲಾಗಿತ್ತು.

ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಮುರಳಿಧರ ಕೆ. ಪ್ರಸ್ತಾವನೆಗೈದು ಸ್ವಾಗತಿಸಿದರು. ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಅಕ್ಷರೋದ್ಯಮದ ಮುಖ್ಯಸ್ಥ ಸುನಿಲ್ ಕುಲಕರ್ಣಿ,  ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ, ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ಆರಂಭವಾಗಲಿರುವ ವೆಬ್ ಮೀಡಿಯಾ ‘ವಿಕಸನ ನ್ಯೂಸ್.ಇನ್‘ ಗೆ ಚಾಲನೆ ನೀಡಿದರು. ಉಪ್ಪಿನಂಗಡಿಯ ಶ್ರೀರಾಮ ಪ್ರೌಡಶಾಲೆಯ ಮುಖ್ಯೋಪಾಧ್ಯಾಯ ರಘುರಾಮ್ ಭಟ್ ಕಾರ್ಯಕ್ರಮ ನಿರ್ವಹಿಸಿದರು.

ಸುನಿಲ್‌ ಕುಲಕರ್ಣಿ ಮಾತನಾಡಿದರು.

ಉದ್ಘಾಟನಾ ಕಾರ್ಯಕ್ರಮದ ನಂತರದಲ್ಲಿ ವಿವಿಧ ಗೋಷ್ಠಿಗಳು ನಡೆದವು. ಮಂಗಳೂರಿನ ಅಕ್ಷರೋದ್ಯಮದ ಸುನಿಲ್ ಕುಲಕರ್ಣಿ “ಶೈಕ್ಷಣಿಕವಾಗಿ ವೆಬ್‍ಸೈಟ್‍ಗಳ ಪರಿಣಾಮಕಾರಿಯಾಗಿ ಹೇಗೆ ಉಪಯೋಗಿಸಬಹುದು” ಎನ್ನುವ ಕುರಿತಾಗಿ ಮಾಹಿತಿ ನೀಡಿದರು.

ಹಿರಿಯ ಪತ್ರಕರ್ತ ಬಿ ಟಿ ರಂಜನ್‌ ಮಾತನಾಡಿದರು

 

ಉಪನ್ಯಾಸಕ ಅಜಯ್‍ಶಾಸ್ತ್ರೀ ಮಾತನಾಡಿದರು

ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಮುದ್ರಣ ಮಾಧ್ಯಮದ ವರದಿಗಾರಿಕೆ ಕುರಿತಾಗಿ, ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಉಪನ್ಯಾಸಕ ಅಜಯ್‍ಶಾಸ್ತ್ರೀ ಸಾಮಾಜಿಕ ಜಾಲಗಳ ಕುರಿತಾಗಿ ಹಾಗೂ ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ವೆಬ್ ಮೀಡಿಯಾಗಳ ಬಳಕೆಯ ಕುರಿತಾಗಿ ಮಾಹಿತಿ ನೀಡಿದರು.

 

ಪತ್ರಕರ್ತ ಮಹೇಶ್‌ ಪುಚ್ಚಪ್ಪಾಡಿ ಮಾತನಾಡಿದರು.

ಕಾರ್ಯಾಗಾರದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿಕಟಪೂರ್ವ ಕಾರ್ಯದರ್ಶಿ ಶಿವಪ್ರಸಾದ್ ವಹಿಸಿದ್ದರು. ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಮುರಳೀಧರ್ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

11 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

11 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

11 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

11 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

11 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

19 hours ago