Advertisement
ಸುದ್ದಿಗಳು

ವಿವೇಕಾನಂದ ಸಿಬಿಎಸ್‍ಇ ನೂತನ ಕಟ್ಟಡದ ಉದ್ಘಾಟನೆ | ಮಕ್ಕಳಿಗೆ ಕಲಿಕಾ ಸ್ವಾತಂತ್ರ್ಯವನ್ನು ನೀಡಬೇಕು: ಬಿ.ಸಿ. ನಾಗೇಶ್

Share

ಹೊಸ ಶಿಕ್ಷಣ ಈ ದೇಶಕ್ಕೆ ಹೊಸ ದಿಕ್ಕನ್ನು ನೀಡಬಲ್ಲದು. ಮಕ್ಕಳಿಗೆ ಕಲಿಕಾ ಸ್ವಾತಂತ್ರ್ಯವನ್ನು ನೀಡಬೇಕು. ವಿದ್ಯೆ ದಾನಕ್ಕಿರುವುದು, ಮಾರಾಟಕ್ಕಲ್ಲ ಎಂಬ ನಿಲುವು ನಮ್ಮದಾಗಬೇಕು. ಭಾರತೀಯ ಶಿಕ್ಷಣದೊಂದಿಗೆ, ಸಂಸ್ಕಾರಯುತ ಶಿಕ್ಷಣವನ್ನು ನೀಡುವುದು ನಮ್ಮ ಉದ್ದೇಶ ಎಂದು ಕರ್ನಾಟಕ ಸರ್ಕಾರದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದರು.

ಅವರು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಆಶ್ರಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್‍ಇ) ಇದರ ನೂತನ ಕಟ್ಟಡ ಹಾಗೂ ‘ವಿಜ್ಞಾನ ದೀಪಿಕಾ’ 3ಡಿ ವಿಜ್ಞಾನ ಉದ್ಯಾನವನ ಇವುಗಳನ್ನು ಲೋಕಾರ್ಪಣೆಗೊಳಿಸಿ ಬುಧವಾರ ಮಾತನಾಡಿದರು.

ಪ್ರಾಚೀನ ಕಾಲದಲ್ಲಿ ದೇಶೀಯ ಗುರುಕುಲ ಶಿಕ್ಷಣಕ್ಕೆ ಪ್ರಾಶಸ್ತ್ಯವಿತ್ತು. ಅದು ವಿದ್ಯಾರ್ಥಿಗಳ ಆಸಕ್ತಿಗೆ ಅನುಗುಣವಾಗಿ ಶಿಕ್ಷಣ ನೀಡುವ ವ್ಯವಸ್ಥೆಯನ್ನು ಹೊಂದಿತ್ತು. ಆದರೆ ಆಂಗ್ಲರು ಅವರ ಶಿಕ್ಷಣ ಪದ್ಧತಿಯನ್ನು ಜಾರಿಗೆ ತಂದು ಈ ವ್ಯವಸ್ಥೆಯನ್ನು ಬದಲಾಯಿಸಿದರು. ಇಂದಿಗೂ ಅದೇ ಪದ್ಧತಿ ಜಾರಿಯಲ್ಲಿದೆ. ವ್ಯಕ್ತಿ ಕೇಂದ್ರಿತವಾದ, ಸಂಕುಚಿತ, ಸ್ವಾರ್ಥಪರ ಯೋಚನೆಯನ್ನು ಬಿತ್ತುವ ಶಿಕ್ಷಣ ಪದ್ಧತಿ ಇದಾಗಿದೆ. ಸನಾತನವಾದ ಗುರುಕುಲ ಸಂಸ್ಕೃತಿಯಿಂದ ಭಾರತ ವಿಶ್ವಗುರುವಾಗುತ್ತದೆ ಎಂಬ ವಿಶ್ವಾಸವಿದೆ ಎಂದು ಅಭಿಪ್ರಾಯಪಟ್ಟರು.

ಆಶೀರ್ವಚನ ನೀಡಿದ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ, ಪ್ರಾಚೀನ ಕಾಲದಲ್ಲಿ ಸೂರ್ಯೋದಯ ಭಾರತದಲ್ಲಿ ಆಗಿತ್ತು. ಬೆಳಕು ಜಗತ್ತಿಗೆ ಪಸರಿಸಿತ್ತು. `ಎಲ್ಲರಿಗೂ ಶಿಕ್ಷಣ ಎನ್ನುವ ಸಮಷ್ಠಿ ಶಿಕ್ಷಣದ ಪರಿಕಲ್ಪನೆಯನ್ನು ವಿಶ್ವಕ್ಕೆ ಕೊಟ್ಟಿರುವುದು ಭಾರತದೇಶ ಎಂಬುದು ನೆನಪಿರಲಿ. ನಮ್ಮ ಧರ್ಮ-ಸಂಸ್ಕೃತಿಯನ್ನು ಆಧರಿಸಿದ ಶಿಕ್ಷಣವನ್ನು ನಾವು ಕೊಡಬೇಕು. ಶಿಕ್ಷಣವನ್ನೂ ದಂದೆಯಾಗಿಸಿಕೊಂಡವರ ನಡುವೆ ವಿವೇಕಾನಂದ ವಿದ್ಯಾಸಂಸ್ಥೆಗಳು ಪ್ರತ್ಯೇಕವಾಗಿ ನಿಲ್ಲುತ್ತವೆ. ರಾಷ್ಟ್ರಹಿತ, ರಾಷ್ಟ್ರ ಭಕ್ತಿಯನ್ನು ಶಿಕ್ಷಣದ ಮೂಲಕ ನೀಡುವ ಉದ್ದೇಶವನ್ನಿರಿಸಿಕೊಂಡ ವಿವೇಕಾನಂದ, ರಾಷ್ಟ್ರ ಚಿಂತನೆಯ ವಿದ್ಯಾಸಂಸ್ಥೆಯಾಗಿದೆ. ಎಲ್ಲಿ ಸೂರ್ಯ ಹುಟ್ಟುತ್ತಾನೋ ಅಲ್ಲಿ ಬೆಳಕು ಜಾಸ್ತಿ ಎಂದರು.

‘ಕಲ್ಪನಾ ಚಾವ್ಲಾ’ ವಿಜ್ಞಾನ ಪ್ರಯೋಗಾಲಯವನ್ನು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು. ಬಯಲು ರಂಗಮಂದಿರವನ್ನು (ಆ್ಯಂಪಿಥಿಯೇಟರ್) ಉದ್ಘಾಟನೆ ಮಾಡಿದ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಉದ್ಘಾಟಿಸಿದರು.

ಚಿಣ್ಣರ ಚಿಲುಮೆಯನ್ನು ಪುತ್ತೂರು ನಗರಸಭೆಯ ಅಧ್ಯಕ್ಷ ಜೀವಂಧರ್ ಜೈನ್, ಸಿ.ಬಿ.ಎಸ್.ಇ ಸ್ಕೂಲ್ ಆ್ಯಪನ್ನು ಮಂಗಳೂರಿನ ಕೆನರಾ ಬ್ಯಾಂಕ್ ಸರ್ಕಲ್ ಆಪೀಸ್‍ನ ಜನರಲ್ ಮ್ಯಾನೇಜರ್ ಯೋಗೀಶ್ ಆಚಾರ್ಯ ಅನಾವರಣಗೊಳಿಸಿದರು. ಈ ಸಂದರ್ಭ ವಿವೇಕಾನಂದ ಪಾಲಿಟೆಕ್ನಿಕ್ ಪ್ರಾಚಾರ್ಯ ಗೋಪಿನಾಥ್ ಶೆಟ್ಟಿ, ಸಿವಿಲ್ ಕನ್ಸ್ಟ್ರಕ್ಟರ್ ಗೋಪಾಲ್ ಮೂಲ್ಯ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿನಿ ಸಿಂಚನ ಲಕ್ಷ್ಮಿ ಇವರನ್ನು ಗೌರವಿಸಲಾಯಿತು. ಅಂತರ್ ಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿಜ್ಞಾನ ಮಾದರಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ(ಸಿಬಿಎಸ್‍ಸಿ)ಯ ಮುಖ್ಯಶಿಕ್ಷಕಿ ಸಿಂಧು ಉಪಸ್ಥಿತರಿದ್ದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ(ಸಿಬಿಎಸ್‍ಇ)ಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ(ಸಿಬಿಎಸ್‍ಇ)ಯ ಆಡಳಿತ ಮಂಡಳಿ ಸಂಚಾಲಕ ಭರತ್ ಪೈ ಸ್ವಾಗತಿಸಿ, ಅಧ್ಯಕ್ಷೆ ವಸಂತಿ ಕೆದಿಲ ವಂದಿಸಿದರು. ನರೇಂದ್ರ ಪದವಿ ಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕ ವಿಘ್ನೇಶ್ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

14 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

14 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

14 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

14 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

14 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

22 hours ago